<p><strong>ಬೆಂಗಳೂರು</strong>: ಎತ್ತಿನಹೊಳೆ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಸಂಕಲ್ಪಕ್ಕೆ ಸರ್ಕಾರ ಕಟಿಬದ್ಧವಾಗಿದ್ದು ಮಾರ್ಚ್ 2021 ಕ್ಕೆ ಮೊದಲ ಹಂತದ ಯೋಜನೆ ಆರಂಭವಾಗಲಿದೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ತಿಳಿಸಿದರು.</p>.<p>ಎತ್ತಿನಹೊಳೆ ಯೋಜನೆ ಕುರಿತಂತೆ ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಅವರು, 5 ಸಿವಿಲ್ ಮತ್ತು 2 ಎಲೆಕ್ಟ್ರಿಕಲ್ ಪ್ಯಾಕೇಜ್ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಕಾಲಮಿತಿಯೊಳಗೆ ವಿದ್ಯುತ್ ಶಕ್ತಿ ಪೂರೈಸುವ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>'ಯೋಜನೆಯ ಹಲವಾರು ಪ್ರದೇಶಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ರೈತರ ಮನ ಒಲಿಸಿ ಪರಿಹಾರ ನೀಡಬೇಕು. ಯೋಜನೆಯ ಮೊದಲ ಹಂತ ಮುಂದಿನ ವರ್ಷದ ಮಾರ್ಚ್ ಒಳಗೆ ಮುಗಿಯಲೇಬೇಕು. ಮುಂದಿನ ಮಳೆಗಾಲದಲ್ಲಿ ನೀರು ಹರಿಸುವಂತಾಗಬೇಕು' ಎಂದು ಸಚಿವರು ಸೂಚಿಸಿದರು.</p>.<p>ಸಭೆಯಲ್ಲಿ ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ರಾವ್ ಪೇಶ್ವೆ ಸೇರಿದಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎತ್ತಿನಹೊಳೆ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಸಂಕಲ್ಪಕ್ಕೆ ಸರ್ಕಾರ ಕಟಿಬದ್ಧವಾಗಿದ್ದು ಮಾರ್ಚ್ 2021 ಕ್ಕೆ ಮೊದಲ ಹಂತದ ಯೋಜನೆ ಆರಂಭವಾಗಲಿದೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ತಿಳಿಸಿದರು.</p>.<p>ಎತ್ತಿನಹೊಳೆ ಯೋಜನೆ ಕುರಿತಂತೆ ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಅವರು, 5 ಸಿವಿಲ್ ಮತ್ತು 2 ಎಲೆಕ್ಟ್ರಿಕಲ್ ಪ್ಯಾಕೇಜ್ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಕಾಲಮಿತಿಯೊಳಗೆ ವಿದ್ಯುತ್ ಶಕ್ತಿ ಪೂರೈಸುವ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>'ಯೋಜನೆಯ ಹಲವಾರು ಪ್ರದೇಶಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ರೈತರ ಮನ ಒಲಿಸಿ ಪರಿಹಾರ ನೀಡಬೇಕು. ಯೋಜನೆಯ ಮೊದಲ ಹಂತ ಮುಂದಿನ ವರ್ಷದ ಮಾರ್ಚ್ ಒಳಗೆ ಮುಗಿಯಲೇಬೇಕು. ಮುಂದಿನ ಮಳೆಗಾಲದಲ್ಲಿ ನೀರು ಹರಿಸುವಂತಾಗಬೇಕು' ಎಂದು ಸಚಿವರು ಸೂಚಿಸಿದರು.</p>.<p>ಸಭೆಯಲ್ಲಿ ವಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ರಾವ್ ಪೇಶ್ವೆ ಸೇರಿದಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>