<p><strong>ಬೆಂಗಳೂರು</strong>: ‘ಅನಿತಾ ಅವರು ನಿಮ್ಮ ಧರ್ಮಪತ್ನಿ ಹೌದಾ ಅಲ್ಲವಾ? ವಿಮಲಾ ಅವರು ನಿಮ್ಮ ಅತ್ತೆ ಹೌದಾ ಅಲ್ಲವಾ? ನೀವು ಫೈಲ್ ಪುಟ್ ಅಪ್ ಮಾಡಿಸಿದ್ದು ನಿಜವಾ ಸುಳ್ಳಾ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರಶ್ನಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಗಂಗೇನಹಳ್ಳಿ ಜಮೀನಿನ (ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ) ಡಿನೋಟಿಫೈ ಮಾಡಲು ಅತ್ಯುತ್ಸಾಹ ತೋರಿದ್ದು ಏಕೆ ಎಂದು ಕೇಳಿದರು.</p>.<p>‘ಕುಮಾರಸ್ವಾಮಿ ಅವರ ಅತ್ತೆ ಈ ಭೂಮಿಯನ್ನು ತಮ್ಮ ಹೆಸರಿಗೆ ಜಿಪಿಎ ಮಾಡಿಸಿಕೊಂಡಿದ್ದು ಸುಳ್ಳೇ? ಅನಿತಾ ಕುಮಾರಸ್ವಾಮಿ ಅವರ ಸಹೋದರನ ಹೆಸರಿಗೆ ಈ ಜಮೀನು ನೋಂದಣಿಯಾಗಿಲ್ಲವೇ? ಇದು ಅಧಿಕಾರದ ದುರ್ಬಳಕೆ ಅಲ್ಲವೇ? ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅದೇ ಜಮೀನನ್ನು ಸತ್ತವರ ಹೆಸರಿಗೆ ಡಿನೋಟಿಫೈ ಮಾಡಲಾಗಿತ್ತು. ಕೊನೆಗೆ ಈ ಜಮೀನು ಕುಮಾರಸ್ವಾಮಿ ಅವರ ಬಾಮೈದನ ಹೆಸರಿಗೆ ನೋಂದಣಿ ಆಯಿತು. ಇದರಿಂದ ಯಾರಿಗೆ ಲಾಭ ಆಯಿತು ಎಂಬುದಕ್ಕೆ ಕುಮಾರಸ್ವಾಮಿ ಸ್ಪಷ್ಟನೆ ನೀಡಲಿ ಸಾಕು’ ಎಂದು ಹೇಳಿದರು.</p>.<p>‘ಕುಮಾರಸ್ವಾಮಿ ಅವರಂತೆ ವೈಯಕ್ತಿಕ ದಾಳಿ ನಡೆಸುವುದು, ನಿಂದಿಸುವುದು ನಮ್ಮ ಸಂಸ್ಕೃತಿಯಲ್ಲ. ಯಾರು ಯಾರನ್ನೇ ನಿಂದಿಸಿದರೂ ಸತ್ಯ ಏನು ಎಂಬುದು ಜನರಿಗೆ ತಿಳಿದಿದೆ. ವೈಯಕ್ತಿಕ ನಿಂದನೆ ಮತ್ತು ದಾಳಿಗಳಿಗೆ ಬಗ್ಗುವುದಿಲ್ಲ’ ಎಂದು ಕೃಷ್ಣಬೈರೇಗೌಡ ಹೇಳಿದರು.</p>.<p>‘ಸತ್ಯ ಹರಿಶ್ಚಂದ್ರರಾ? ಎಂದು ನನ್ನನ್ನು ಉದ್ದೇಶಿಸಿ ಕೇಳಿದ್ದಾರೆ. ಚುನಾವಣಾ ರಾಜಕೀಯದಲ್ಲಿ ಇರುವವರು ಹರಿಶ್ಚಂದ್ರರಾಗಿರಲು ಸಾಧ್ಯವಿಲ್ಲ. ನಾನು ಸತ್ಯಹರಿಶ್ಚಂದ್ರ ಎಂದು ಹೇಳಿಕೊಂಡಿಲ್ಲ. ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದವರು ಅವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅನಿತಾ ಅವರು ನಿಮ್ಮ ಧರ್ಮಪತ್ನಿ ಹೌದಾ ಅಲ್ಲವಾ? ವಿಮಲಾ ಅವರು ನಿಮ್ಮ ಅತ್ತೆ ಹೌದಾ ಅಲ್ಲವಾ? ನೀವು ಫೈಲ್ ಪುಟ್ ಅಪ್ ಮಾಡಿಸಿದ್ದು ನಿಜವಾ ಸುಳ್ಳಾ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರಶ್ನಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಗಂಗೇನಹಳ್ಳಿ ಜಮೀನಿನ (ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ) ಡಿನೋಟಿಫೈ ಮಾಡಲು ಅತ್ಯುತ್ಸಾಹ ತೋರಿದ್ದು ಏಕೆ ಎಂದು ಕೇಳಿದರು.</p>.<p>‘ಕುಮಾರಸ್ವಾಮಿ ಅವರ ಅತ್ತೆ ಈ ಭೂಮಿಯನ್ನು ತಮ್ಮ ಹೆಸರಿಗೆ ಜಿಪಿಎ ಮಾಡಿಸಿಕೊಂಡಿದ್ದು ಸುಳ್ಳೇ? ಅನಿತಾ ಕುಮಾರಸ್ವಾಮಿ ಅವರ ಸಹೋದರನ ಹೆಸರಿಗೆ ಈ ಜಮೀನು ನೋಂದಣಿಯಾಗಿಲ್ಲವೇ? ಇದು ಅಧಿಕಾರದ ದುರ್ಬಳಕೆ ಅಲ್ಲವೇ? ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅದೇ ಜಮೀನನ್ನು ಸತ್ತವರ ಹೆಸರಿಗೆ ಡಿನೋಟಿಫೈ ಮಾಡಲಾಗಿತ್ತು. ಕೊನೆಗೆ ಈ ಜಮೀನು ಕುಮಾರಸ್ವಾಮಿ ಅವರ ಬಾಮೈದನ ಹೆಸರಿಗೆ ನೋಂದಣಿ ಆಯಿತು. ಇದರಿಂದ ಯಾರಿಗೆ ಲಾಭ ಆಯಿತು ಎಂಬುದಕ್ಕೆ ಕುಮಾರಸ್ವಾಮಿ ಸ್ಪಷ್ಟನೆ ನೀಡಲಿ ಸಾಕು’ ಎಂದು ಹೇಳಿದರು.</p>.<p>‘ಕುಮಾರಸ್ವಾಮಿ ಅವರಂತೆ ವೈಯಕ್ತಿಕ ದಾಳಿ ನಡೆಸುವುದು, ನಿಂದಿಸುವುದು ನಮ್ಮ ಸಂಸ್ಕೃತಿಯಲ್ಲ. ಯಾರು ಯಾರನ್ನೇ ನಿಂದಿಸಿದರೂ ಸತ್ಯ ಏನು ಎಂಬುದು ಜನರಿಗೆ ತಿಳಿದಿದೆ. ವೈಯಕ್ತಿಕ ನಿಂದನೆ ಮತ್ತು ದಾಳಿಗಳಿಗೆ ಬಗ್ಗುವುದಿಲ್ಲ’ ಎಂದು ಕೃಷ್ಣಬೈರೇಗೌಡ ಹೇಳಿದರು.</p>.<p>‘ಸತ್ಯ ಹರಿಶ್ಚಂದ್ರರಾ? ಎಂದು ನನ್ನನ್ನು ಉದ್ದೇಶಿಸಿ ಕೇಳಿದ್ದಾರೆ. ಚುನಾವಣಾ ರಾಜಕೀಯದಲ್ಲಿ ಇರುವವರು ಹರಿಶ್ಚಂದ್ರರಾಗಿರಲು ಸಾಧ್ಯವಿಲ್ಲ. ನಾನು ಸತ್ಯಹರಿಶ್ಚಂದ್ರ ಎಂದು ಹೇಳಿಕೊಂಡಿಲ್ಲ. ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದವರು ಅವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>