ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗೋಕಾಕ ತಹಶೀಲ್ದಾರ್ ಕಚೇರಿಯವರೇ ನಮ್ಮ ಮಾತು ಕೇಳುತ್ತಿಲ್ಲ. ಇನ್ನು ಮುಖ್ಯಮಂತ್ರಿ ಮಾಡುವ ಮಾತು ದೂರವಿದೆ. ಅವರು ನನ್ನನ್ನು ಯಾವ ಪಕ್ಷದಿಂದ ಮುಖ್ಯಮಂತ್ರಿ ಮಾಡುತ್ತಾರೆ, ಅವರಿಗೇನು ಅಧಿಕಾರವಿದೆ? ಇನ್ನೊಂದು ಪಕ್ಷದ ಮುಖಂಡನ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ. ಬಿಜೆಪಿ ಮುಖಂಡರು ಅವರನ್ನು ನಿಯಂತ್ರಿಸಬೇಕು’ ಎಂದರು.