‘ಮೇಕೆದಾಟು, ಮಹದಾಯಿ ಸೇರಿ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿಯಾಗಿದ್ದೆ ಎನ್ನುವ ಮಾಹಿತಿ ನಿಮಗಿಲ್ಲ. ನಿತಿನ್ ಗಡ್ಕರಿ ಅವರೊಬ್ಬರನ್ನೇ 10 ಬಾರಿ ಭೇಟಿಯಾಗಿದ್ದೆ. 90ರ ಇಳಿವಯಸ್ಸಿನಲ್ಲಿಯೂ ದೇವೇಗೌಡರು ಸಂಸತ್ತಿನ ಒಳಗೆ, ಹೊರಗೆ ರಾಜ್ಯಕ್ಕಾಗಿ ಹೋರಾಡುತ್ತಿದ್ದಾರೆ. ಮೇಕೆದಾಟು ಬಗ್ಗೆ ಸಂಸತ್ ಅಧಿವೇಶನದಲ್ಲಿ ಅವರು ದನಿ ಎತ್ತಿದರೆ, ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೌನವಾಗಿದ್ದರು’ ಎಂದು ಟೀಕಿಸಿದ್ದಾರೆ.