ಕೊರೊನಾ ನಿಯಂತ್ರಣದಲ್ಲಿನ ಅವ್ಯವಹಾರದ ಬಗೆಗಿನ ನನ್ನ ಆರೋಪಕ್ಕೆ ಪತ್ರಿಕಾಗೋಷ್ಠಿಯಲ್ಲಿ ಉತ್ತರ ನೀಡಲು ಪ್ರಯತ್ನಿಸಿರುವ ಆರೋಗ್ಯ ಸಚಿವ @sriramulubjp ಮತ್ತು ಉಪಮುಖ್ಯಮಂತ್ರಿ @drashwathcn
— Siddaramaiah (@siddaramaiah) July 20, 2020
ಸತ್ಯವನ್ನು ಬಿಚ್ಚಿಡುವ ಬದಲಿಗೆ ಸುಳ್ಳನ್ನು ಮುಚ್ಚಿಡಲು ಪರದಾಡಿದ್ದಾರೆ.
1/6#lekkakodi
ನಾನು ಕೇಳಿರುವ ಯಾವ ಪ್ರಶ್ನೆಗಳಿಗೆ ಸಚಿವರು ಉತ್ತರ ನೀಡಿದ್ದಾರೆನ್ನುವುದು ನನಗೆ ತಿಳಿದಿಲ್ಲ. ರಾಜ್ಯ ಸರ್ಕಾರದ ಲಿಖಿತ ಸ್ಪಷ್ಟನೆ ಕೈ ಸೇರಿದ ನಂತರ ವಿವರವಾಗಿ ಪ್ರತಿಕ್ರಿಯಿಸುವೆ.
— Siddaramaiah (@siddaramaiah) July 20, 2020
ಆದರೆ...
ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಕಾಣಲಿಲ್ಲ.
ಸರ್ಕಾರದೊಳಗೊಂದು ಸರ್ಕಾರ ಇದೆಯೇ?
2/6#lekkakodi
ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಟ್ಟು ರೂ.323 ಕೋಟಿ ಖರ್ಚು ಮಾಡಿದೆ ಎಂದು @sriramulubjp ತಿಳಿಸಿದ್ದಾರೆ.
— Siddaramaiah (@siddaramaiah) July 20, 2020
ಆದರೆ ಅವರು ನೀಡಿರುವ ಲೆಕ್ಕವನ್ನು ಎಷ್ಟೇ ಕೂಡಿಸಿ ಕಳೆದರೂ ಅದು 100 ಕೋಟಿ ರೂಪಾಯಿ ದಾಟುವುದಿಲ್ಲ.
ಉಳಿದ ದುಡ್ಡಿಗೆ ಲೆಕ್ಕ ಎಲ್ಲಿದೆ?
3/n#lekkakodi
ಪಿಎಂ ಕೇರ್ಸ್ ನಲ್ಲಿ ಕೇಂದ್ರ ಸರ್ಕಾರ ತಲಾ ರೂ.4 ಲಕ್ಷ ಕೊಟ್ಟು ವೆಂಟಿಲೇಟರ್ ಖರೀದಿಸಿದೆ
— Siddaramaiah (@siddaramaiah) July 20, 2020
ನಮ್ಮಲ್ಲಿ ಮಾತ್ರ ವೆಂಟಿಲೇಟರ್ಗಳನ್ನು 12ರಿಂದ 18 ಲಕ್ಷ ರೂಪಾಯಿ ವರೆಗೆ ನೀಡಿ ಖರೀದಿಸಲಾಗಿದೆ.
ಅಂತಹ ವಿಶೇಷತೆ ಈ ವೆಂಟಿಲೇಟರ್ ಗಳಲ್ಲೇನಿದೆ? ಇವುಗಳ ಬೆಲೆಯಲ್ಲಿ ಯಾಕೆ ಇಷ್ಟೊಂದು ವ್ಯತ್ಯಾಸ?
4/6#lekkakodi pic.twitter.com/8lM4d10vte
ಆರೋಗ್ಯ ಸಚಿವರು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ,
— Siddaramaiah (@siddaramaiah) July 20, 2020
ಖರೀದಿ ಮಾಡಿರುವ ಸಲಕರಣೆಗಳ ದುಬಾರಿ ದರವನ್ನು ಸಮರ್ಥಿಸುತ್ತಾ, ದರ ವ್ಯತ್ಯಾಸಕ್ಕೆ ಗುಣಮಟ್ಟದಲ್ಲಿನ ವ್ಯತ್ಯಾಸ ಕಾರಣ ಎಂದು ಹೇಳಿದ್ದಾರೆ. ಆದರೆ ಇದನ್ನು ತಾಂತ್ರಿಕವಾಗಿ ಸಮರ್ಥಿಸುವ ಯಾವ ದಾಖಲೆಗಳನ್ನು ಯಾಕೆ ನೀಡಿಲ್ಲ?
5/6#lekkakodi
ನಾನು ಕೊರೊನಾ ನಿಯಂತ್ರಣದ ಸಲಕರಣೆಗಳ ಲೆಕ್ಕ ಮಾತ್ರ ಕೇಳಿದ್ದಲ್ಲ. ಆಹಾರ ಧಾನ್ಯ, ಮತ್ತು ಆಹಾರ ಸಾಮಗ್ರಿಗಳ ಕಿಟ್, ಮತ್ತು ಆಸ್ಪತ್ರೆಗಳಿಗೆ ಖರೀದಿಸಲಾದ ಬೆಡ್ ಗಳ ಬೆಲೆ, ಕ್ವಾರಂಟೈನ್ ಕೇಂದ್ರಗಳು, ಐಸೋಲೇಷನ್ ವಾರ್ಡ್ ಗಳಿಗೆ ಆಗಿರುವ ಖರ್ಚಿನ ವಿವರವನ್ನೂ ಕೇಳಿದ್ದೇನೆ. ಆ ಲೆಕ್ಕ ಎಲ್ಲಿದೆ?
— Siddaramaiah (@siddaramaiah) July 20, 2020
6/6#lekkakodi
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.