<p><strong>ಬೆಂಗಳೂರು:</strong> ಶಿವಮೊಗ್ಗದಲ್ಲಿ ಐಎಸ್ ಭಯೋತ್ಪಾದನಾ ಪಿತೂರಿ ಪ್ರಕರಣದಲ್ಲಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ ಅರಾಫತ್ ಅಲಿಗೆ ಎನ್ಐಎ ವಿಶೇಷ ನ್ಯಾಯಾಲಯ, ಆರು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹47 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ.</p>.<p>ಎನ್ಐಎ ಅಧಿಕಾರಿಗಳು 12 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ ಅರಾಫತ್ ಅಲಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. </p>.<p>2022ರ ಆ.15ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಿವಮೊಗ್ಗದ ಅಮೀರ್ ಅಹ್ಮಮದ್ ವೃತ್ತದಲ್ಲಿ ಬ್ಯಾನರ್ ಹಾಕುವಾಗ ನಡೆದ ಗಲಾಟೆ ವೇಳೆ ದುಷ್ಕರ್ಮಿಗಳು ಪ್ರೇಮ್ ಸಿಂಗ್ ಅವರಿಗೆ ಚಾಕುವಿನಿಂದ ಇರಿದಿದ್ದರು. ಪ್ರಕರಣದಲ್ಲಿ ಜಬೀವುಲ್ಲಾ, ತನ್ವೀರ್ ಅಹಮ್ಮದ್, ನದೀಮ್ ಫೈಜಲ್ ಸೇರಿದಂತೆ ಕೆಲವರನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ, ಶಂಕಿತ ಉಗ್ರರ ಪಾತ್ರ ಇರುವುದು ಪತ್ತೆ ಆಗಿತ್ತು. ಆರೋಪಿ ಜಬೀವುಲ್ಲಾಗೆ ತೀರ್ಥಹಳ್ಳಿಯ ಶಾರೀಕ್ ಗಲಾಟೆ ನಡೆಸಲು ಪ್ರಚೋದನೆ ನೀಡಿದ್ದ ವಿಚಾರವು ಪೊಲೀಸ್ ತನಿಖೆಯಿಂದ ಗೊತ್ತಾಗಿತ್ತು.</p>.<p>ಶಿವಮೊಗ್ಗದ ಸೈಯದ್ ಯಾಸೀನ್, ಮಂಗಳೂರಿನ ಮಾಝ್, ತೀರ್ಥಹಳ್ಳಿಯ ಶಾರೀಕ್ ಜತೆಗೆ ಸೇರಿಕೊಂಡು ಬಾಂಬ್ ತಯಾರಿಸಿ ತುಂಗಾ ನದಿಯ ದಡದಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಫೋಟಿಸಿದ್ದು, ಧ್ವಜ ಸುಟ್ಟಿರುವ ವಿಚಾರವು ಸ್ಥಳೀಯ ಪೊಲೀಸರು ನಡೆಸಿದ ತನಿಖೆಯಿಂದ ದೃಢಪಟ್ಟಿತ್ತು. ಅದಾದ ಮೇಲೆ ಎನ್ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ರಾಜ್ಯದಲ್ಲಿ ಐಎಸ್ ಉಗ್ರರ ಚಟುವಟಿಕೆಗಳನ್ನು ವಿಸ್ತರಿಸುವುದು, ವಿಧ್ವಂಸಕ ಕೃತ್ಯಗಳು, ಹಿಂಸಾಚಾರ ನಡೆಸಲು ಸಂಚು ರೂಪಿಸಿದ್ದ ವಿಚಾರವು ಎನ್ಐಎ ತನಿಖೆಯಿಂದ ಗೊತ್ತಾಗಿತ್ತು.</p>.<p>ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಶಾರೀಕ್ಗೂ ಅರಾಫತ್ ಅಲಿಗೂ ನಂಟಿರುವುದು ಎನ್ಐಎ ತನಿಖೆಯಿಂದ ಪತ್ತೆಯಾಗಿತ್ತು. ಬಂಧನದ ಭೀತಿಯಿಂದ ಅರಾಫತ್ ಅಲಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. 2023ರ ಸೆ.14ರಂದು ಕೀನ್ಯಾದಿಂದ ದೆಹಲಿಗೆ ಬಂದಾಗ ಅರಾಫತ್ ಅಲಿಯನ್ನು ಬಂಧಿಸಲಾಗಿತ್ತು ಎಂದು ಮೂಲಗಳು ಹೇಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿವಮೊಗ್ಗದಲ್ಲಿ ಐಎಸ್ ಭಯೋತ್ಪಾದನಾ ಪಿತೂರಿ ಪ್ರಕರಣದಲ್ಲಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ ಅರಾಫತ್ ಅಲಿಗೆ ಎನ್ಐಎ ವಿಶೇಷ ನ್ಯಾಯಾಲಯ, ಆರು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹47 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ.</p>.<p>ಎನ್ಐಎ ಅಧಿಕಾರಿಗಳು 12 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ ಅರಾಫತ್ ಅಲಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. </p>.<p>2022ರ ಆ.15ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಿವಮೊಗ್ಗದ ಅಮೀರ್ ಅಹ್ಮಮದ್ ವೃತ್ತದಲ್ಲಿ ಬ್ಯಾನರ್ ಹಾಕುವಾಗ ನಡೆದ ಗಲಾಟೆ ವೇಳೆ ದುಷ್ಕರ್ಮಿಗಳು ಪ್ರೇಮ್ ಸಿಂಗ್ ಅವರಿಗೆ ಚಾಕುವಿನಿಂದ ಇರಿದಿದ್ದರು. ಪ್ರಕರಣದಲ್ಲಿ ಜಬೀವುಲ್ಲಾ, ತನ್ವೀರ್ ಅಹಮ್ಮದ್, ನದೀಮ್ ಫೈಜಲ್ ಸೇರಿದಂತೆ ಕೆಲವರನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ, ಶಂಕಿತ ಉಗ್ರರ ಪಾತ್ರ ಇರುವುದು ಪತ್ತೆ ಆಗಿತ್ತು. ಆರೋಪಿ ಜಬೀವುಲ್ಲಾಗೆ ತೀರ್ಥಹಳ್ಳಿಯ ಶಾರೀಕ್ ಗಲಾಟೆ ನಡೆಸಲು ಪ್ರಚೋದನೆ ನೀಡಿದ್ದ ವಿಚಾರವು ಪೊಲೀಸ್ ತನಿಖೆಯಿಂದ ಗೊತ್ತಾಗಿತ್ತು.</p>.<p>ಶಿವಮೊಗ್ಗದ ಸೈಯದ್ ಯಾಸೀನ್, ಮಂಗಳೂರಿನ ಮಾಝ್, ತೀರ್ಥಹಳ್ಳಿಯ ಶಾರೀಕ್ ಜತೆಗೆ ಸೇರಿಕೊಂಡು ಬಾಂಬ್ ತಯಾರಿಸಿ ತುಂಗಾ ನದಿಯ ದಡದಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಫೋಟಿಸಿದ್ದು, ಧ್ವಜ ಸುಟ್ಟಿರುವ ವಿಚಾರವು ಸ್ಥಳೀಯ ಪೊಲೀಸರು ನಡೆಸಿದ ತನಿಖೆಯಿಂದ ದೃಢಪಟ್ಟಿತ್ತು. ಅದಾದ ಮೇಲೆ ಎನ್ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ರಾಜ್ಯದಲ್ಲಿ ಐಎಸ್ ಉಗ್ರರ ಚಟುವಟಿಕೆಗಳನ್ನು ವಿಸ್ತರಿಸುವುದು, ವಿಧ್ವಂಸಕ ಕೃತ್ಯಗಳು, ಹಿಂಸಾಚಾರ ನಡೆಸಲು ಸಂಚು ರೂಪಿಸಿದ್ದ ವಿಚಾರವು ಎನ್ಐಎ ತನಿಖೆಯಿಂದ ಗೊತ್ತಾಗಿತ್ತು.</p>.<p>ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಶಾರೀಕ್ಗೂ ಅರಾಫತ್ ಅಲಿಗೂ ನಂಟಿರುವುದು ಎನ್ಐಎ ತನಿಖೆಯಿಂದ ಪತ್ತೆಯಾಗಿತ್ತು. ಬಂಧನದ ಭೀತಿಯಿಂದ ಅರಾಫತ್ ಅಲಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. 2023ರ ಸೆ.14ರಂದು ಕೀನ್ಯಾದಿಂದ ದೆಹಲಿಗೆ ಬಂದಾಗ ಅರಾಫತ್ ಅಲಿಯನ್ನು ಬಂಧಿಸಲಾಗಿತ್ತು ಎಂದು ಮೂಲಗಳು ಹೇಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>