<p><strong>ಬೆಂಗಳೂರು:</strong> ಶಿವರಾಜ್ ಕುಮಾರ್, ಪುನೀತ್ ರಾಜ್ಕುಮಾರ್, ಯಶ್ ಮತ್ತು ಸುದೀಪ್ ಸೇರಿದಂತೆ ‘ಸ್ಯಾಂಡಲ್ವುಡ್’ನ ನಾಲ್ವರು ಸ್ಟಾರ್ ನಟರು ಮತ್ತುದೊಡ್ಡ ಬಜೆಟ್ ಸಿನಿಮಾಗಳ ನಾಲ್ವರು ನಿರ್ಮಾಪಕರ ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ₹ 120 ಕೋಟಿ ಮೌಲ್ಯದ ಅಘೋಷಿತ ಆಸ್ತಿಪಾಸ್ತಿ ಪತ್ತೆ ಹಚ್ಚಿದ್ದಾರೆ.</p>.<p>25 ಕೆ.ಜಿಗೂ ಅಧಿಕ ಚಿನ್ನ ಹಾಗೂ ₹ 2.8 ಕೋಟಿ ನಗದು ಇದರಲ್ಲಿ ಸೇರಿದೆ.ತೆರಿಗೆ ಪಾವತಿಸದೆ ಬಚ್ಚಿಟ್ಟ ಆಸ್ತಿ ಮೌಲ್ಯಇನ್ನೂ ಅಧಿಕವಾಗಿದ್ದು, ನಟರು, ನಿರ್ಮಾಪಕರು ಒಪ್ಪಿಕೊಳ್ಳದೆ ಇರುವುದರಿಂದ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತಿತರ ಆರ್ಥಿಕ ಅಪರಾಧಗಳ ತನಿಖಾ ಸಂಸ್ಥೆಗಳಿಗೆ ಪ್ರಕರಣ ವಹಿಸಲಾಗುವುದು ಎಂದು ಐ.ಟಿ ಪ್ರಕಟಣೆ ತಿಳಿಸಿದೆ.</p>.<p>ಯಾರ ಮನೆಯಲ್ಲಿ ಎಷ್ಟು ಅಘೋಷಿತ ಆಸ್ತಿಪಾಸ್ತಿ ಸಿಕ್ಕಿದೆ ಎಂಬ ವಿವರಗಳನ್ನು ತೆರಿಗೆ ಇಲಾಖೆ ಅಧಿಕಾರಿಗಳು ನೀಡಿಲ್ಲ. ಶೀಘ್ರ ಈ ಬಗ್ಗೆ ಮಾಹಿತಿ ನೀಡುವುದಾಗಿ ಮೂಲಗಳು ಹೇಳಿವೆ.</p>.<p>180 ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆಯೇ ನಟರು ಮತ್ತು ನಿರ್ಮಾಪಕರ ಮನೆಗಳೂ ಸೇರಿದಂತೆ 21 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿತ್ತು. ನಿರ್ಮಾಪಕರಾದ ರಾಕ್ಲೈನ್ ವೆಂಕಟೇಶ್, ಸಿ.ಆರ್.ಮನೋಹರ್, ವಿಜಯ್ ಕಿರಗಂದೂರು ಮತ್ತು ಜಯಣ್ಣ ಮನೆ, ಕಚೇರಿಗಳ ಮೇಲೂ ದಾಳಿ ಆಗಿತ್ತು.</p>.<p>ಸತತ ಎರಡು– ಮೂರು ದಿನಗಳ ಶೋಧ ಮತ್ತು ವಿಚಾರಣೆ ಬಳಿಕ ₹ 120 ಕೋಟಿ ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿದೆ. ಮೂರು ತಿಂಗಳ ಹಿಂದಿನಿಂದಲೂ ಅನೇಕ ನಟರು, ನಿರ್ಮಾಪಕರು, ಹೂಡಿಕೆದಾರರ ವಹಿವಾಟುಗಳ ಮೇಲೆ ಆರ್ಥಿಕ ಗುಪ್ತದಳ ನಿಗಾ ಇಟ್ಟಿತ್ತು. ಅದು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆದಿದೆ.</p>.<p>ಸಿನಿಮಾಗಳ ನಿರ್ಮಾಣಕ್ಕೆ ಕಪ್ಪು ಹಣ ಬಳಕೆಯಾಗಿದೆ. ವಿತರಣೆ ಹಾಗೂಪ್ರದರ್ಶನದಿಂದ ಬಂದಿರುವ ಆದಾಯಕ್ಕೆ ತೆರಿಗೆ ತಪ್ಪಿಸಲಾಗಿದೆ. ಆಸ್ತಿಪಾಸ್ತಿ ಖರೀದಿಗೂ ಭಾರಿ ಹಣ ಬಳಕೆಯಾಗಿದೆ. ಇದ್ಯಾವುದಕ್ಕೂ ಲೆಕ್ಕ ಕೊಟ್ಟಿಲ್ಲ. ಆಡಿಯೊ ಹಾಗೂ ಸ್ಯಾಟಲೈಟ್ ಹಕ್ಕುಗಳ ಮಾರಾಟ ವಹಿವಾಟಿಗೂ ತೆರಿಗೆ ಪಾವತಿಸಿಲ್ಲ. ಇವುಗಳಿಗೆ ಸಂಬಂಧಿಸಿದ ದಾಖಲೆ ವಶಪಡಿಸಿಕೊಳ್ಳಲಾಗಿದೆ.</p>.<p>ಚಿತ್ರಮಂದಿರಗಳು ಸಿನಿಮಾ ಪ್ರದರ್ಶನದಿಂದ ಪಡೆದಿರುವ ಹಣವನ್ನು ಬೇರೆಡೆ ವರ್ಗಾವಣೆ ಮಾಡಲಾಗಿದೆ. ನಿಯಮ ಪಾಲಿಸದೇ ವಹಿವಾಟು ನಡೆಸಿರುವ ಕೆಲವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಐ.ಟಿ.ಸ್ಪಷ್ಟಪಡಿಸಿದೆ.</p>.<p><strong>ಐ.ಟಿ ದಾಳಿಗೆ ಭಯಪಡಲ್ಲ: ಸುದೀಪ್</strong></p>.<p>‘ನಾನು ಎಲ್ಲ ಲೆಕ್ಕ ಇಟ್ಟಿದ್ದೇನೆ. ಹೀಗಾಗಿ, ಐ.ಟಿ ದಾಳಿಗೆ ಭಯ ಪಡಲ್ಲ’ ಎಂದು ನಟ ಸುದೀಪ್ ಹೇಳಿದರು. ಚಲನಚಿತ್ರ ನಿರ್ದೇಶಕರ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.</p>.<p>‘ಯಾವುದೇ ನಿರ್ದಿಷ್ಟ ಕಾರಣ ಇಲ್ಲದೆ ಐ.ಟಿ ದಾಳಿ ನಡೆಯುವುದಿಲ್ಲ. ಆದರೆ, ಕಾರಣ ಏನೆಂದು ಗೊತ್ತಿಲ್ಲ. ಕೆಜಿಎಫ್, ದಿ ವಿಲನ್,<br />ನಟ ಸಾರ್ವಭೌಮದಂಥ ಅಧಿಕ ಬಜೆಟ್ ಸಿನಿಮಾ ನಿರ್ಮಾಣದ ಹಿನ್ನೆಲೆಯಲ್ಲಿ ದಾಳಿ ನಡೆದಿರಬಹುದು ಎಂಬ ಊಹೆ ಇದೆ. ನಾನು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದರು. ಶಿವರಾಜ್ ಕುಮಾರ್, ಪುನೀತ್ ರಾಜ್ಕುಮಾರ್, ಯಶ್, ರಾಕ್ಲೈನ್ ವೆಂಕಟೇಶ್, ವಿಜಯ್ ಕಿರಗಂದೂರು ಸೇರಿ ಉಳಿದವರು ಪ್ರತಿಕ್ರಿಯೆಗೆ ಸಿಗಲಿಲ್ಲ.</p>.<p><strong>‘ಬೆಟ್ಟ ಅಗೆದು ಇಲಿ ಹಿಡಿದಂತೆ’</strong></p>.<p>ಸ್ಯಾಂಡಲ್ವುಡ್ ನಟರು ಮತ್ತು ನಿರ್ಮಾಪಕರ ಮನೆಗಳ ಮೇಲೆ ನಡೆದ ದಾಳಿ ಕುರಿತು ಐ.ಟಿ ಅಧಿಕಾರಿಗಳಲ್ಲೇ ಅಪಸ್ವರ ಕೇಳಿಬರುತ್ತಿದೆ ಎನ್ನಲಾಗಿದೆ.‘ಈ ದಾಳಿ ನಡೆಸುವ ಅಗತ್ಯವಿರಲಿಲ್ಲ. ಪ್ರಚಾರಕ್ಕಾಗಿ ಮಾಡಲಾಗಿದೆ. ಇದೊಂದು ರೀತಿ ಬೆಟ್ಟ ಅಗೆದು ಇಲಿ ಹಿಡಿದಂತೆ’ ಎಂಬ ಅಭಿಪ್ರಾಯ ವ್ಯಕ್ತವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿವರಾಜ್ ಕುಮಾರ್, ಪುನೀತ್ ರಾಜ್ಕುಮಾರ್, ಯಶ್ ಮತ್ತು ಸುದೀಪ್ ಸೇರಿದಂತೆ ‘ಸ್ಯಾಂಡಲ್ವುಡ್’ನ ನಾಲ್ವರು ಸ್ಟಾರ್ ನಟರು ಮತ್ತುದೊಡ್ಡ ಬಜೆಟ್ ಸಿನಿಮಾಗಳ ನಾಲ್ವರು ನಿರ್ಮಾಪಕರ ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ₹ 120 ಕೋಟಿ ಮೌಲ್ಯದ ಅಘೋಷಿತ ಆಸ್ತಿಪಾಸ್ತಿ ಪತ್ತೆ ಹಚ್ಚಿದ್ದಾರೆ.</p>.<p>25 ಕೆ.ಜಿಗೂ ಅಧಿಕ ಚಿನ್ನ ಹಾಗೂ ₹ 2.8 ಕೋಟಿ ನಗದು ಇದರಲ್ಲಿ ಸೇರಿದೆ.ತೆರಿಗೆ ಪಾವತಿಸದೆ ಬಚ್ಚಿಟ್ಟ ಆಸ್ತಿ ಮೌಲ್ಯಇನ್ನೂ ಅಧಿಕವಾಗಿದ್ದು, ನಟರು, ನಿರ್ಮಾಪಕರು ಒಪ್ಪಿಕೊಳ್ಳದೆ ಇರುವುದರಿಂದ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತಿತರ ಆರ್ಥಿಕ ಅಪರಾಧಗಳ ತನಿಖಾ ಸಂಸ್ಥೆಗಳಿಗೆ ಪ್ರಕರಣ ವಹಿಸಲಾಗುವುದು ಎಂದು ಐ.ಟಿ ಪ್ರಕಟಣೆ ತಿಳಿಸಿದೆ.</p>.<p>ಯಾರ ಮನೆಯಲ್ಲಿ ಎಷ್ಟು ಅಘೋಷಿತ ಆಸ್ತಿಪಾಸ್ತಿ ಸಿಕ್ಕಿದೆ ಎಂಬ ವಿವರಗಳನ್ನು ತೆರಿಗೆ ಇಲಾಖೆ ಅಧಿಕಾರಿಗಳು ನೀಡಿಲ್ಲ. ಶೀಘ್ರ ಈ ಬಗ್ಗೆ ಮಾಹಿತಿ ನೀಡುವುದಾಗಿ ಮೂಲಗಳು ಹೇಳಿವೆ.</p>.<p>180 ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆಯೇ ನಟರು ಮತ್ತು ನಿರ್ಮಾಪಕರ ಮನೆಗಳೂ ಸೇರಿದಂತೆ 21 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿತ್ತು. ನಿರ್ಮಾಪಕರಾದ ರಾಕ್ಲೈನ್ ವೆಂಕಟೇಶ್, ಸಿ.ಆರ್.ಮನೋಹರ್, ವಿಜಯ್ ಕಿರಗಂದೂರು ಮತ್ತು ಜಯಣ್ಣ ಮನೆ, ಕಚೇರಿಗಳ ಮೇಲೂ ದಾಳಿ ಆಗಿತ್ತು.</p>.<p>ಸತತ ಎರಡು– ಮೂರು ದಿನಗಳ ಶೋಧ ಮತ್ತು ವಿಚಾರಣೆ ಬಳಿಕ ₹ 120 ಕೋಟಿ ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿದೆ. ಮೂರು ತಿಂಗಳ ಹಿಂದಿನಿಂದಲೂ ಅನೇಕ ನಟರು, ನಿರ್ಮಾಪಕರು, ಹೂಡಿಕೆದಾರರ ವಹಿವಾಟುಗಳ ಮೇಲೆ ಆರ್ಥಿಕ ಗುಪ್ತದಳ ನಿಗಾ ಇಟ್ಟಿತ್ತು. ಅದು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆದಿದೆ.</p>.<p>ಸಿನಿಮಾಗಳ ನಿರ್ಮಾಣಕ್ಕೆ ಕಪ್ಪು ಹಣ ಬಳಕೆಯಾಗಿದೆ. ವಿತರಣೆ ಹಾಗೂಪ್ರದರ್ಶನದಿಂದ ಬಂದಿರುವ ಆದಾಯಕ್ಕೆ ತೆರಿಗೆ ತಪ್ಪಿಸಲಾಗಿದೆ. ಆಸ್ತಿಪಾಸ್ತಿ ಖರೀದಿಗೂ ಭಾರಿ ಹಣ ಬಳಕೆಯಾಗಿದೆ. ಇದ್ಯಾವುದಕ್ಕೂ ಲೆಕ್ಕ ಕೊಟ್ಟಿಲ್ಲ. ಆಡಿಯೊ ಹಾಗೂ ಸ್ಯಾಟಲೈಟ್ ಹಕ್ಕುಗಳ ಮಾರಾಟ ವಹಿವಾಟಿಗೂ ತೆರಿಗೆ ಪಾವತಿಸಿಲ್ಲ. ಇವುಗಳಿಗೆ ಸಂಬಂಧಿಸಿದ ದಾಖಲೆ ವಶಪಡಿಸಿಕೊಳ್ಳಲಾಗಿದೆ.</p>.<p>ಚಿತ್ರಮಂದಿರಗಳು ಸಿನಿಮಾ ಪ್ರದರ್ಶನದಿಂದ ಪಡೆದಿರುವ ಹಣವನ್ನು ಬೇರೆಡೆ ವರ್ಗಾವಣೆ ಮಾಡಲಾಗಿದೆ. ನಿಯಮ ಪಾಲಿಸದೇ ವಹಿವಾಟು ನಡೆಸಿರುವ ಕೆಲವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಐ.ಟಿ.ಸ್ಪಷ್ಟಪಡಿಸಿದೆ.</p>.<p><strong>ಐ.ಟಿ ದಾಳಿಗೆ ಭಯಪಡಲ್ಲ: ಸುದೀಪ್</strong></p>.<p>‘ನಾನು ಎಲ್ಲ ಲೆಕ್ಕ ಇಟ್ಟಿದ್ದೇನೆ. ಹೀಗಾಗಿ, ಐ.ಟಿ ದಾಳಿಗೆ ಭಯ ಪಡಲ್ಲ’ ಎಂದು ನಟ ಸುದೀಪ್ ಹೇಳಿದರು. ಚಲನಚಿತ್ರ ನಿರ್ದೇಶಕರ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.</p>.<p>‘ಯಾವುದೇ ನಿರ್ದಿಷ್ಟ ಕಾರಣ ಇಲ್ಲದೆ ಐ.ಟಿ ದಾಳಿ ನಡೆಯುವುದಿಲ್ಲ. ಆದರೆ, ಕಾರಣ ಏನೆಂದು ಗೊತ್ತಿಲ್ಲ. ಕೆಜಿಎಫ್, ದಿ ವಿಲನ್,<br />ನಟ ಸಾರ್ವಭೌಮದಂಥ ಅಧಿಕ ಬಜೆಟ್ ಸಿನಿಮಾ ನಿರ್ಮಾಣದ ಹಿನ್ನೆಲೆಯಲ್ಲಿ ದಾಳಿ ನಡೆದಿರಬಹುದು ಎಂಬ ಊಹೆ ಇದೆ. ನಾನು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದರು. ಶಿವರಾಜ್ ಕುಮಾರ್, ಪುನೀತ್ ರಾಜ್ಕುಮಾರ್, ಯಶ್, ರಾಕ್ಲೈನ್ ವೆಂಕಟೇಶ್, ವಿಜಯ್ ಕಿರಗಂದೂರು ಸೇರಿ ಉಳಿದವರು ಪ್ರತಿಕ್ರಿಯೆಗೆ ಸಿಗಲಿಲ್ಲ.</p>.<p><strong>‘ಬೆಟ್ಟ ಅಗೆದು ಇಲಿ ಹಿಡಿದಂತೆ’</strong></p>.<p>ಸ್ಯಾಂಡಲ್ವುಡ್ ನಟರು ಮತ್ತು ನಿರ್ಮಾಪಕರ ಮನೆಗಳ ಮೇಲೆ ನಡೆದ ದಾಳಿ ಕುರಿತು ಐ.ಟಿ ಅಧಿಕಾರಿಗಳಲ್ಲೇ ಅಪಸ್ವರ ಕೇಳಿಬರುತ್ತಿದೆ ಎನ್ನಲಾಗಿದೆ.‘ಈ ದಾಳಿ ನಡೆಸುವ ಅಗತ್ಯವಿರಲಿಲ್ಲ. ಪ್ರಚಾರಕ್ಕಾಗಿ ಮಾಡಲಾಗಿದೆ. ಇದೊಂದು ರೀತಿ ಬೆಟ್ಟ ಅಗೆದು ಇಲಿ ಹಿಡಿದಂತೆ’ ಎಂಬ ಅಭಿಪ್ರಾಯ ವ್ಯಕ್ತವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>