<p><strong>ಬೆಂಗಳೂರು:</strong> ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಅಂಗಡಿಯ ಎರಡು ಮಳಿಗೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ.</p>.<p>ನಗರದ ಕೆಂಪೇಗೌಡ ರಸ್ತೆ ಮತ್ತು ಮೈಸೂರು ರಸ್ತೆಯ ಗುಡ್ಡದಹಳ್ಳಿಯಲ್ಲಿರುವ ಎರಡು ಮಳಿಗೆಗಳ ಮೇಲೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆಯೇ ದಾಳಿ ನಡೆಸಿ, ಶೋಧ ಆರಂಭಿಸಿದ್ದರು.</p>.<p>ಚೆನ್ನೈ ಮೂಲದ ಈ ಕಂಪನಿಯು ತಮಿಳುನಾಡಿನಾದ್ಯಂತ ಹತ್ತಾರು ಮಳಿಗೆಗಳನ್ನು ಹೊಂದಿದೆ. ಆ ಎಲ್ಲ ಮಳಿಗೆಗಳು, ಕಂಪನಿಯ ಮುಖ್ಯಸ್ಥ, ಅವರ ಕುಟುಂಬ, ಆಪ್ತರ ಮನೆ ಹಾಗೂ ಕಚೇರಿಗಳಲ್ಲೂ ಶೋಧ ನಡೆದಿದೆ.</p>.<p>ತಮಿಳುನಾಡಿನ ಪ್ರಾದೇಶಿಕ ಪಕ್ಷವೊಂದಕ್ಕೆ ಈ ಕಂಪನಿಯು ನೀಡಿದ್ದ ದೇಣಿಗೆಯ ಸಂಬಂಧ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆದಾಯ ತೆರಿಗೆ ವಂಚನೆ ಮಾಡಿರುವುದು ಮತ್ತು ರಾಜಕೀಯ ಪಕ್ಷಕ್ಕೆ ನೀಡಿದ್ದ ದೇಣಿಗೆಯ ಮೊತ್ತ ತಾಳೆಯಾಗದೇ ಇರುವುದರ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಶುಕ್ರವಾರ ರಾತ್ರಿ ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆಯಲ್ಲಿಯೂ ದಾಳಿ ಮುಂದುವರೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಅಂಗಡಿಯ ಎರಡು ಮಳಿಗೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ.</p>.<p>ನಗರದ ಕೆಂಪೇಗೌಡ ರಸ್ತೆ ಮತ್ತು ಮೈಸೂರು ರಸ್ತೆಯ ಗುಡ್ಡದಹಳ್ಳಿಯಲ್ಲಿರುವ ಎರಡು ಮಳಿಗೆಗಳ ಮೇಲೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆಯೇ ದಾಳಿ ನಡೆಸಿ, ಶೋಧ ಆರಂಭಿಸಿದ್ದರು.</p>.<p>ಚೆನ್ನೈ ಮೂಲದ ಈ ಕಂಪನಿಯು ತಮಿಳುನಾಡಿನಾದ್ಯಂತ ಹತ್ತಾರು ಮಳಿಗೆಗಳನ್ನು ಹೊಂದಿದೆ. ಆ ಎಲ್ಲ ಮಳಿಗೆಗಳು, ಕಂಪನಿಯ ಮುಖ್ಯಸ್ಥ, ಅವರ ಕುಟುಂಬ, ಆಪ್ತರ ಮನೆ ಹಾಗೂ ಕಚೇರಿಗಳಲ್ಲೂ ಶೋಧ ನಡೆದಿದೆ.</p>.<p>ತಮಿಳುನಾಡಿನ ಪ್ರಾದೇಶಿಕ ಪಕ್ಷವೊಂದಕ್ಕೆ ಈ ಕಂಪನಿಯು ನೀಡಿದ್ದ ದೇಣಿಗೆಯ ಸಂಬಂಧ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆದಾಯ ತೆರಿಗೆ ವಂಚನೆ ಮಾಡಿರುವುದು ಮತ್ತು ರಾಜಕೀಯ ಪಕ್ಷಕ್ಕೆ ನೀಡಿದ್ದ ದೇಣಿಗೆಯ ಮೊತ್ತ ತಾಳೆಯಾಗದೇ ಇರುವುದರ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಶುಕ್ರವಾರ ರಾತ್ರಿ ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆಯಲ್ಲಿಯೂ ದಾಳಿ ಮುಂದುವರೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>