ಗುರುವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆದಾಯ ತೆರಿಗೆ ದಾಳಿ ನಡೆದಿತ್ತು. ಯಡಿಯೂರಪ್ಪ ಕುಟುಂಬದ ಆಪ್ತ, ಮುಖ್ಯಮಂತ್ರಿ ಸಚಿವಾಲಯದ ಸಿಬ್ಬಂದಿ ಉಮೇಶ್, 31 ಗುತ್ತಿಗೆದಾರರು, ಲೆಕ್ಕ ಪರಿಶೋಧಕರು ಸೇರಿದಂತೆ ಹಲವರ ಮನೆ, ಕಚೇರಿಗಳಲ್ಲಿ ತಡರಾತ್ರಿಯವರೆಗೂ ಶೋಧ ನಡೆಸಲಾಗಿತ್ತು. ಶುಕ್ರವಾರ ಬೆಳಿಗ್ಗೆಯಿಂದಲೇ ಮತ್ತೆ ಕಾರ್ಯಾಚರಣೆ ಮುಂದುವರಿದಿದೆ.