ಬೆಂಗಳೂರು: ‘ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಕೇವಲ ಜನಸಂಪರ್ಕ ಯಾತ್ರೆಯಲ್ಲ; ಆಂದೋಲನ. ಬೆಲೆ ಏರಿಕೆ, ರೈತರ ಸಮಸ್ಯೆ, ಭ್ರಷ್ಟಾಚಾರ, ನಿರುದ್ಯೋಗ, ಕೋಮು ದ್ವೇಷದ ವಿರುದ್ದದ ಈ ನಡಿಗೆ ಹಳ್ಳಿ, ಹಳ್ಳಿಯಲ್ಲೂ ಜನರ ಮನ ಮುಟ್ಟಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.