<p><strong>ಬೆಂಗಳೂರು:</strong> ಗೀಲನ್ ಬಾ ಸಿಂಡ್ರೋಮ್ (ಜಿಬಿಎಸ್) ಕಾಯಿಲೆಗೆ ನೀಡುವ ಇಂಟ್ರಾವೀನಸ್ ಇಮ್ಯುನೋಗ್ಲೋಬಿನ್ (ಐವಿಐಜಿ) ಥೆರಪಿಯನ್ನು ‘ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ (ಎಬಿ–ಎಆರ್ಕೆ) ಯೋಜನೆಯಡಿ ಸೇರ್ಪಡೆ ಮಾಡಲಾಗಿದೆ. </p>.<p>ಈ ಬಗ್ಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ವಹಿಸುತ್ತಿದೆ. ಜಿಬಿಎಸ್ ರೋಗಕ್ಕೆ ಒಳಗಾದವರಿಗೆ ಚೇತರಿಸಿಕೊಳ್ಳಲು ಐವಿಐಜಿ ಥೆರಪಿ ಸಹಕಾರಿಯಾಗಿದೆ ಎಂದು ತಿಳಿಸಲಾಗಿದೆ.</p>.<p>ಜಿಬಿಎಸ್ ಎಂಬುದು ರೋಗಿಯ ಪ್ರತಿಕಾಯ ಸಾಮರ್ಥ್ಯವನ್ನು ಕುಗ್ಗಿಸುವ ಬ್ಯಾಕ್ಟೀರಿಯಾ ಹಾಗೂ ವೈರಲ್ ಸೋಂಕಿನಿಂದ ಬರುವ ನರ ಸಂಬಂಧಿ ಅನಾರೋಗ್ಯವಾಗಿದೆ. ಇದು ಅಪರೂಪದ ಕಾಯಿಲೆಯಾಗಿದ್ದು, ದೇಹವು ಹಠಾತ್ತನೆ ಮರಗಟ್ಟುವಂತೆ ಮಾಡಿ, ಕೈ–ಕಾಲು ಹಾಗೂ ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ.</p>.<h2>ಅಂಗಾಂಗ ಕಸಿ ಯೋಜನೆಯಡಿ ಅಸ್ಥಿಮಜ್ಜೆ ಕಸಿ</h2>.<p>ರಾಜ್ಯದಲ್ಲಿ ಜಾರಿಯಿರುವ ‘ಅಂಗಾಂಗ ಕಸಿ ಯೋಜನೆ’ಯಡಿ (ಜೀವನ ಸಾರ್ಥಕತೆ) ಶ್ವಾಸಕೋಶ, ಹೃದಯ ಮತ್ತು ಶ್ವಾಸಕೋಶ ಹಾಗೂ ಅಸ್ಥಿಮಜ್ಜೆ ಕಸಿ (ಬೋನ್ ಮ್ಯಾರೊ) ಪ್ರಕ್ರಿಯೆಗಳನ್ನು ಸೇರ್ಪಡೆಗೊಳಿಸಲಾಗಿದೆ.</p>.<p>ಈ ಬಗ್ಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬದವರಿಗೆ ಅನ್ವಯವಾಗುವ ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ವಹಿಸುತ್ತಿದೆ. ಈ ಯೋಜನೆಯು ಯಕೃತ್ತು, ಮೂತ್ರಪಿಂಡ ಮತ್ತು ಹೃದಯ ಕಸಿಯನ್ನು ಒಳಗೊಂಡಿತ್ತು. ಈಗ ಯೋಜನೆಯನ್ನು ವಿಸ್ತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೀಲನ್ ಬಾ ಸಿಂಡ್ರೋಮ್ (ಜಿಬಿಎಸ್) ಕಾಯಿಲೆಗೆ ನೀಡುವ ಇಂಟ್ರಾವೀನಸ್ ಇಮ್ಯುನೋಗ್ಲೋಬಿನ್ (ಐವಿಐಜಿ) ಥೆರಪಿಯನ್ನು ‘ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ (ಎಬಿ–ಎಆರ್ಕೆ) ಯೋಜನೆಯಡಿ ಸೇರ್ಪಡೆ ಮಾಡಲಾಗಿದೆ. </p>.<p>ಈ ಬಗ್ಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ವಹಿಸುತ್ತಿದೆ. ಜಿಬಿಎಸ್ ರೋಗಕ್ಕೆ ಒಳಗಾದವರಿಗೆ ಚೇತರಿಸಿಕೊಳ್ಳಲು ಐವಿಐಜಿ ಥೆರಪಿ ಸಹಕಾರಿಯಾಗಿದೆ ಎಂದು ತಿಳಿಸಲಾಗಿದೆ.</p>.<p>ಜಿಬಿಎಸ್ ಎಂಬುದು ರೋಗಿಯ ಪ್ರತಿಕಾಯ ಸಾಮರ್ಥ್ಯವನ್ನು ಕುಗ್ಗಿಸುವ ಬ್ಯಾಕ್ಟೀರಿಯಾ ಹಾಗೂ ವೈರಲ್ ಸೋಂಕಿನಿಂದ ಬರುವ ನರ ಸಂಬಂಧಿ ಅನಾರೋಗ್ಯವಾಗಿದೆ. ಇದು ಅಪರೂಪದ ಕಾಯಿಲೆಯಾಗಿದ್ದು, ದೇಹವು ಹಠಾತ್ತನೆ ಮರಗಟ್ಟುವಂತೆ ಮಾಡಿ, ಕೈ–ಕಾಲು ಹಾಗೂ ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ.</p>.<h2>ಅಂಗಾಂಗ ಕಸಿ ಯೋಜನೆಯಡಿ ಅಸ್ಥಿಮಜ್ಜೆ ಕಸಿ</h2>.<p>ರಾಜ್ಯದಲ್ಲಿ ಜಾರಿಯಿರುವ ‘ಅಂಗಾಂಗ ಕಸಿ ಯೋಜನೆ’ಯಡಿ (ಜೀವನ ಸಾರ್ಥಕತೆ) ಶ್ವಾಸಕೋಶ, ಹೃದಯ ಮತ್ತು ಶ್ವಾಸಕೋಶ ಹಾಗೂ ಅಸ್ಥಿಮಜ್ಜೆ ಕಸಿ (ಬೋನ್ ಮ್ಯಾರೊ) ಪ್ರಕ್ರಿಯೆಗಳನ್ನು ಸೇರ್ಪಡೆಗೊಳಿಸಲಾಗಿದೆ.</p>.<p>ಈ ಬಗ್ಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬದವರಿಗೆ ಅನ್ವಯವಾಗುವ ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ವಹಿಸುತ್ತಿದೆ. ಈ ಯೋಜನೆಯು ಯಕೃತ್ತು, ಮೂತ್ರಪಿಂಡ ಮತ್ತು ಹೃದಯ ಕಸಿಯನ್ನು ಒಳಗೊಂಡಿತ್ತು. ಈಗ ಯೋಜನೆಯನ್ನು ವಿಸ್ತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>