<p><strong>ಶಿವಮೊಗ್ಗ: </strong>ಕೈಗಾರಿಕಾಅಭಿವೃದ್ಧಿಯಲ್ಲಿಕರ್ನಾಟಕ ನಾಲ್ಕನೇಸ್ಥಾನದಲ್ಲಿದೆ. ರಾಜ್ಯದಲ್ಲಿಕಾಂತ್ರಿಕಾರಿ ಬದಲಾವಣೆಯ ಅಲೆಸೃಷ್ಟಿಯಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಬುಧವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಉದ್ಯಮಿಗಳು ಕೈಗಾರಿಕೆ ಆರಂಭಿಸಲು ಇರುವ ನಿರ್ಬಂಧಗಳಿಗೆ ವಿನಾಯಿತಿ ನೀಡಲಾಗಿದೆ.ಕಾಯ್ದೆಗೆ ಮಹತ್ವದ ತಿದ್ದುಪಡಿ ತರಲಾಗಿದೆ. ಇದರಿಂದಾಗಿ ಯಾವುದೇ ಅಡತಡೆಗಳಿಲ್ಲದೆ ಹೊಸ ಕೈಗಾರಿಕೆಗಳ ಆರಂಭ ಸರಳವೂ, ಸುಲಭವೂ ಆಗಿದೆ ಎಂದರು.</p>.<p>ಬಿಜೆಪಿಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ದಿ ಯೋಜನೆಗಳು ಜಾರಿಗೆ ಬಂದಿವೆ. ಕೈಗಾರಿಕಾ ಕ್ಷೇತ್ರದಅಭಿವೃದ್ಧಿಯಲ್ಲಿಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸಲಾಗುತ್ತದೆ.ಕ್ಷೇತ್ರ ಬದಲಾವಣೆ ದಿಕ್ಕಿನಲ್ಲಿ ಸಾಗಿದೆಎಂದರು.</p>.<p>ಕೈಗಾರಿಕಾ ಸಮಸ್ಯೆ ಪರಿಹಾರಕ್ಕೆ ಅದಾಲತ್:</p>.<p>ರಾಜ್ಯದಲ್ಲಿ ಕೈಗಾರಿಕಾ ಸಮಸ್ಯೆಗಳು ಸಾಕಷ್ಟಿವೆ. ಕೆಲವು ಸಣ್ಣ ಸಮಸ್ಯೆಗಳಿಗೂ ಪರಿಹಾರ ಸಿಗುವುದು ವಿಳಂಬವಾಗುತ್ತಿದೆ. ಕೈಗಾರಿಕೆಗಳನ್ನು ಆರಂಭಿಸಲು ಸ್ಥಳೀಯವಾಗಿ ಎದುರಾಗಬಹುದಾದ ಕಾನೂನಾತ್ಮಕ ತೊಡಕುಗಳನ್ನು ನಿವಾರಿಸಲು ಕೈಗಾರಿಕಾ ಅದಾಲತ್ ನಡೆಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಕಾನೂನು ಸಮಸ್ಯೆಗಳ ಇತ್ಯರ್ಥಕ್ಕೆ ಸಹಕಾರಿಯಾಗಲಿದೆ ಎಂದರು.</p>.<p>ಕೈಗಾರಿಕೆಗಳಿಗೆ ಬೆಂಗಳೂರು ಕೇಂದ್ರವಾಗಿದೆ. ಇದರಿಂದ ಹೊರತರಲು, ಬೇರೆ ಜಿಲ್ಲೆಗಳಲ್ಲಿ ಕೈಗಾರಿಕೆಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತಿದೆ. ಶಿವಮೊಗ್ಗದಲ್ಲಿಈಗಾಗಲೇ ವಿಮಾನ ನಿಲ್ದಾಣ ಕಾರ್ಯ ಆರಂಭವಾಗಿದೆ. ಜಿಲ್ಲೆ ಕೈಗಾರಿಕಾ ಕ್ಷೇತ್ರವಾಗಿ ಸಾಕಷ್ಟು ಅಭಿವೃದ್ದಿ ಕಾಣಲಿದೆ ಎಂದು ಭರವಸೆ ನೀಡಿದರು.</p>.<p><strong>ಎಂಪಿಎಂ ಪುನರಾರಂಭ:</strong></p>.<p>ಸಾಕಷ್ಟು ನೌಕರರಿಗೆ ಆಶ್ರಯದಾಯವಾಗಿದ್ದ ಎಂಪಿಎಂ ಹಾಗೂ ವಿಐಎಸ್ಎಲ್ ಕಾರ್ಖಾನೆಗೆ ಪುನರಾರಂಭ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವ ರಾಜ್ಯ ಸರ್ಕಾರ ಹೆಚ್ಚಿನ ಶ್ರಮ ಹಾಕಿದೆ.ಈ ಎರಡು ಕಾರ್ಖಾನೆ ಪುನರಾರಂಭ ಮಾಡಲು ಪ್ರಯತ್ನ ಮಾಡಲಾಗುವುದು ಎಂದರು.</p>.<p>ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸರ್ಕಾರದಿಂದ ಜಿಲ್ಲೆಗೆ ವಿವಿಧ ಯೋಜನೆಗಳನ್ನು ಜಾರಿ ಮಾಡಿಸುವಲ್ಲಿ ಪಕ್ಷತೀತವಾಗಿ ಕೆಲಸ ಮಾಡಲಾಗುತ್ತಿದೆ. ಇದರ ಫಲವಾಗಿ ಹಲವು ಅಭಿವೃದ್ದಿ ಕಾಮಗಾರಿಗಳು ಆರಂಭಗೊಂಡಿವೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಆರ್.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ಆರ್ಯವೈಶ್ಯ ಸಮಾಜ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಿ.ಆರ್.ವಾಸುದೇವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಕೈಗಾರಿಕಾಅಭಿವೃದ್ಧಿಯಲ್ಲಿಕರ್ನಾಟಕ ನಾಲ್ಕನೇಸ್ಥಾನದಲ್ಲಿದೆ. ರಾಜ್ಯದಲ್ಲಿಕಾಂತ್ರಿಕಾರಿ ಬದಲಾವಣೆಯ ಅಲೆಸೃಷ್ಟಿಯಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಬುಧವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಉದ್ಯಮಿಗಳು ಕೈಗಾರಿಕೆ ಆರಂಭಿಸಲು ಇರುವ ನಿರ್ಬಂಧಗಳಿಗೆ ವಿನಾಯಿತಿ ನೀಡಲಾಗಿದೆ.ಕಾಯ್ದೆಗೆ ಮಹತ್ವದ ತಿದ್ದುಪಡಿ ತರಲಾಗಿದೆ. ಇದರಿಂದಾಗಿ ಯಾವುದೇ ಅಡತಡೆಗಳಿಲ್ಲದೆ ಹೊಸ ಕೈಗಾರಿಕೆಗಳ ಆರಂಭ ಸರಳವೂ, ಸುಲಭವೂ ಆಗಿದೆ ಎಂದರು.</p>.<p>ಬಿಜೆಪಿಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ದಿ ಯೋಜನೆಗಳು ಜಾರಿಗೆ ಬಂದಿವೆ. ಕೈಗಾರಿಕಾ ಕ್ಷೇತ್ರದಅಭಿವೃದ್ಧಿಯಲ್ಲಿಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸಲಾಗುತ್ತದೆ.ಕ್ಷೇತ್ರ ಬದಲಾವಣೆ ದಿಕ್ಕಿನಲ್ಲಿ ಸಾಗಿದೆಎಂದರು.</p>.<p>ಕೈಗಾರಿಕಾ ಸಮಸ್ಯೆ ಪರಿಹಾರಕ್ಕೆ ಅದಾಲತ್:</p>.<p>ರಾಜ್ಯದಲ್ಲಿ ಕೈಗಾರಿಕಾ ಸಮಸ್ಯೆಗಳು ಸಾಕಷ್ಟಿವೆ. ಕೆಲವು ಸಣ್ಣ ಸಮಸ್ಯೆಗಳಿಗೂ ಪರಿಹಾರ ಸಿಗುವುದು ವಿಳಂಬವಾಗುತ್ತಿದೆ. ಕೈಗಾರಿಕೆಗಳನ್ನು ಆರಂಭಿಸಲು ಸ್ಥಳೀಯವಾಗಿ ಎದುರಾಗಬಹುದಾದ ಕಾನೂನಾತ್ಮಕ ತೊಡಕುಗಳನ್ನು ನಿವಾರಿಸಲು ಕೈಗಾರಿಕಾ ಅದಾಲತ್ ನಡೆಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಕಾನೂನು ಸಮಸ್ಯೆಗಳ ಇತ್ಯರ್ಥಕ್ಕೆ ಸಹಕಾರಿಯಾಗಲಿದೆ ಎಂದರು.</p>.<p>ಕೈಗಾರಿಕೆಗಳಿಗೆ ಬೆಂಗಳೂರು ಕೇಂದ್ರವಾಗಿದೆ. ಇದರಿಂದ ಹೊರತರಲು, ಬೇರೆ ಜಿಲ್ಲೆಗಳಲ್ಲಿ ಕೈಗಾರಿಕೆಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತಿದೆ. ಶಿವಮೊಗ್ಗದಲ್ಲಿಈಗಾಗಲೇ ವಿಮಾನ ನಿಲ್ದಾಣ ಕಾರ್ಯ ಆರಂಭವಾಗಿದೆ. ಜಿಲ್ಲೆ ಕೈಗಾರಿಕಾ ಕ್ಷೇತ್ರವಾಗಿ ಸಾಕಷ್ಟು ಅಭಿವೃದ್ದಿ ಕಾಣಲಿದೆ ಎಂದು ಭರವಸೆ ನೀಡಿದರು.</p>.<p><strong>ಎಂಪಿಎಂ ಪುನರಾರಂಭ:</strong></p>.<p>ಸಾಕಷ್ಟು ನೌಕರರಿಗೆ ಆಶ್ರಯದಾಯವಾಗಿದ್ದ ಎಂಪಿಎಂ ಹಾಗೂ ವಿಐಎಸ್ಎಲ್ ಕಾರ್ಖಾನೆಗೆ ಪುನರಾರಂಭ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವ ರಾಜ್ಯ ಸರ್ಕಾರ ಹೆಚ್ಚಿನ ಶ್ರಮ ಹಾಕಿದೆ.ಈ ಎರಡು ಕಾರ್ಖಾನೆ ಪುನರಾರಂಭ ಮಾಡಲು ಪ್ರಯತ್ನ ಮಾಡಲಾಗುವುದು ಎಂದರು.</p>.<p>ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸರ್ಕಾರದಿಂದ ಜಿಲ್ಲೆಗೆ ವಿವಿಧ ಯೋಜನೆಗಳನ್ನು ಜಾರಿ ಮಾಡಿಸುವಲ್ಲಿ ಪಕ್ಷತೀತವಾಗಿ ಕೆಲಸ ಮಾಡಲಾಗುತ್ತಿದೆ. ಇದರ ಫಲವಾಗಿ ಹಲವು ಅಭಿವೃದ್ದಿ ಕಾಮಗಾರಿಗಳು ಆರಂಭಗೊಂಡಿವೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಆರ್.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ಆರ್ಯವೈಶ್ಯ ಸಮಾಜ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಿ.ಆರ್.ವಾಸುದೇವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>