‘ಮೋದಿ ಅವರು ಹೀಗೆ ಹೇಳುವ ಮೂಲಕ ಅಲ್ಪ ಸಂಖ್ಯಾತರನ್ನು ಹೀಯಾಳಿಸುವ ಜತೆಗೆ, ಬಹು ಸಂಖ್ಯಾತ ಸಮುದಾಯವನ್ನು ಹೆದರಿಸಿದ್ದಾರೆ. ಮುಸ್ಲಿಮರು ಅತಿ ಹೆಚ್ಚು ಮಕ್ಕಳನ್ನು ಪಡೆಯುವಂಥವರು ಎಂದು ಚುಚ್ಚಿದ್ದಾರೆ. ಇವೆಲ್ಲವೂ ಸತ್ಯಕ್ಕೆ ದೂರವಾದ ಮಾತುಗಳು. ಇಂತಹ ಭಾಷಣಗಳು ಉಂಟು ಮಾಡುವ ಪರಿಣಾಮಗಳನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಚುನಾವಣೆ ಮುಗಿದ ಮೇಲೂ ಇದರ ಗಾಯಗಳು ದಶಕಗಳ ಕಾಲ ಉಳಿಯುತ್ತವೆ’ ಎಂದು ಸಂಘಟನೆಯ ಮುಖಂಡರಾದ ಕೆ.ಮರುಳಸಿದ್ದಪ್ಪ, ಜಿ.ರಾಮಕೃಷ್ಣ, ವಿಜಯಾ, ಎಸ್.ಜಿ.ಸಿದ್ದರಾಮಯ್ಯ, ರಾಜೇಂದ್ರ ಚೆನ್ನಿ, ವಿಮಲಾ.ಕೆ.ಎಸ್, ಮಾವಳ್ಳಿ ಶಂಕರ್, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ಬಿ.ಶ್ರೀಪಾದ ಭಟ್ ಮತ್ತಿತರರು ಆತಂಕ ವ್ಯಕ್ತಪಡಿಸಿದ್ದಾರೆ.