<p><strong>ಬೆಂಗಳೂರು:</strong> ‘ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಈ ವರ್ಷದಿಂದ ಸರ್ಕಾರದ ವತಿಯಿಂದಲೇ ಆಚರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಫಾರಸು ಮಾಡಿದ್ದರು. ಆದರೂ, ಈ ಕುರಿತ ಆದೇಶಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅಂಕಿತ ಹಾಕಲಿಲ್ಲ’ ಎಂದು ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ ಅವರು ಕಿಡಿಕಾರಿದರು.</p>.<p>ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ಬುಧವಾರ ಇಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿಯವರೇ ಶಿಫಾರಸು ಮಾಡಿದ್ದರಿಂದ ಈ ಕಾರ್ಯಕ್ರಮವನ್ನು ಈ ವರ್ಷದಿಂದಲೇ ಸರ್ಕಾರ ಆಚರಿಸುತ್ತದೆ ಎಂದು ಭಾವಿಸಿದ್ದೆ. ಆದರೆ, ಸಚಿವರಿಗೆ ಈ ಬಗ್ಗೆ ಇನ್ನೂ ಏನೋ ಚರ್ಚಿಸಬೇಕಂತೆ. ಅವರ ಈ ನಡವಳಿಕೆಯಿಂದ ನೋವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ‘ಜಕಣಾಚಾರಿ ಜಯಂತಿಯನ್ನು ಇನ್ನು ಮುಂದೆ ಸರ್ಕಾರದಿಂದಲೇ ನಡೆಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ದೈವಿಕ ಸಂಸ್ಕೃತಿ ರಕ್ಷಣೆಯಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾದುದು. ಗುಡಿ, ಗೋಪುರ, ಮಠ ಮಂದಿರಗಳನ್ನು ನಿರ್ಮಿಸುವ ಕುಶಲಕರ್ಮಿಗಳು ಸಮಾಜದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ’ ಎಂದರು.</p>.<p>ವಿಶ್ವಕರ್ಮ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಕಾಳಹಸ್ತೇಂದ್ರ ಸ್ವಾಮೀಜಿ, ‘ವಿಶ್ವಕರ್ಮ ಸಮಾಜದವರು ಎಲ್ಲರಂತೆ ಬದುಕಬೇಕಾದರೆ ಅಧಿಕಾರ ಸಿಗಬೇಕು. ಈ ಬಗ್ಗೆ 67 ಮಠಾಧೀಶರು ಸೇರಿ ಅನೇಕ ಬಾರಿ ಮನವಿ ಸಲ್ಲಿಸಿದ್ದೇವೆ. ಈ ಬಾರಿಯೂ ಸಮಾಜದವರಿಗೆ ಅಧಿಕಾರ ನೀಡದೇ ಹೋದರೆ ಇನ್ನು ಭಿಕ್ಷೆ ಬೇಡುವುದಿಲ್ಲ. ಈಗಲೂ ನಿಮ್ಮ ಬಗ್ಗೆ ವಿಶ್ವಾಸ ಇಟ್ಟಿದ್ದೇವೆ’ ಎಂದು ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಹೇಳಿದರು.</p>.<p>ವರವಿ ಮೌನೇಶ್ವರ ದೇವಸ್ಥಾನ, ಶಿರಸಂಗಿ ಕಾಳಿಕಾ ದೇವಿ ದೇವಾಲಯ, ಚಿಕ್ಕಲ್ಲೂರಿನ ಸಿದ್ಧಪ್ಪಾಜಿಯ ದೇವಾಲಯ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋತಲೂರಿನ ವೀರಬ್ರಹ್ಮೇಂದ್ರ ಸ್ವಾಮಿ ಪಾಪಾಗ್ನಿ ಮಠ, ತಿಂಥಣಿಯ ಮೌನೇಶ್ವರ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚಿಸುವಂತೆ ನಂಜುಂಡಿ ಒತ್ತಾಯಿಸಿದರು.</p>.<p>‘ಚಿನ್ನ ಮತ್ತು ಬೆಳ್ಳಿ ಕೆಲಸ ಮಾಡುವ ಅಮಾಯಕರ ಮೇಲೆ ಪೊಲೀಸ್ ಇಲಾಖೆ ಕಳವು ಮಾಲು ಹುಡುಕುವ ನೆಪದಲ್ಲಿ ದೌರ್ಜನ್ಯ ನಡೆಸುತ್ತಿದೆ. ಇದು ಮುಂದುವರಿದರೆ, ನಾನೇ ಬೀದಿಗಿಳಿದು ಪ್ರತಿಭಟಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p><strong>ನಿಗಮಕ್ಕೆ ₹ 50 ಕೋಟಿ: ಭರವಸೆ</strong><br />ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಸಾಲ ಪಡೆಯಲು 1.02 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈ ಬೇಡಿಕೆ ಪೂರೈಸಲು ₹ 500 ಕೋಟಿಯಾದರೂ ಬೇಕು. ಸರ್ಕಾರ ಕನಿಷ್ಠಪಕ್ಷ ₹ 200 ಕೋಟಿ ಅನುದಾನವನ್ನಾದರೂ ಒದಗಿಸಬೇಕು ಎಂದು ವಿಶ್ವಕರ್ಮ ಮಠಾಧಿಪತಿಗಳ ಒಕ್ಕೂಟ ಬೇಡಿಕೆ ಸಲ್ಲಿಸಿತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ನಿಗಮಕ್ಕೆ ಮುಂದಿನ ಬಜೆಟ್ನಲ್ಲಿ ₹ 50 ಕೋಟಿ ಅನುದಾನ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p><strong>ಬೇಡಿಕೆಗಳು</strong></p>.<p><strong>*</strong>ವಿಶ್ವಕರ್ಮರ ಪಂಚಕಸುಬುಗಳಿಗೆ ಸಂಬಂಧಿಸಿದಂತೆ ಜಕಣಾಚಾರಿ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ</p>.<p>*ಬೇಲೂರು ಚನ್ನಕೇಶವ ದೇವಾಲಯದ ಆವರಣದಲ್ಲಿ ಜಕಣಾಚಾರಿ ಪುತ್ಥಳಿ ಸ್ಥಾಪನೆ</p>.<p>*ಕಬ್ಬಿಣ ಮತ್ತು ಮರಗೆಲಸದವರಿಗೆ ಆರ್ಥಿಕ ನೆರವು</p>.<p>*ಕಲಬುರ್ಗಿ ವಿಮಾನನಿಲ್ದಾಣಕ್ಕೆ ಜಕಣಾಚಾರಿ ಹೆಸರು</p>.<p>*<br />ವಿಶ್ವಕರ್ಮರು ಕರ್ಮಯೋಗಿಗಳು. ದೇಶದ ಶಿಲ್ಪಕಲೆಗಳು ವಿಶ್ವಕರ್ಮರ ಸಂತತಿಯ ಕೊಡುಗೆ. ಇದನ್ನು ಸ್ಮರಿಸಬೇಕಾದುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕರ್ತವ್ಯ.<br /><em><strong>-ವಿನಯ ಗುರೂಜಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಈ ವರ್ಷದಿಂದ ಸರ್ಕಾರದ ವತಿಯಿಂದಲೇ ಆಚರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಫಾರಸು ಮಾಡಿದ್ದರು. ಆದರೂ, ಈ ಕುರಿತ ಆದೇಶಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅಂಕಿತ ಹಾಕಲಿಲ್ಲ’ ಎಂದು ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ ಅವರು ಕಿಡಿಕಾರಿದರು.</p>.<p>ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ಬುಧವಾರ ಇಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿಯವರೇ ಶಿಫಾರಸು ಮಾಡಿದ್ದರಿಂದ ಈ ಕಾರ್ಯಕ್ರಮವನ್ನು ಈ ವರ್ಷದಿಂದಲೇ ಸರ್ಕಾರ ಆಚರಿಸುತ್ತದೆ ಎಂದು ಭಾವಿಸಿದ್ದೆ. ಆದರೆ, ಸಚಿವರಿಗೆ ಈ ಬಗ್ಗೆ ಇನ್ನೂ ಏನೋ ಚರ್ಚಿಸಬೇಕಂತೆ. ಅವರ ಈ ನಡವಳಿಕೆಯಿಂದ ನೋವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ‘ಜಕಣಾಚಾರಿ ಜಯಂತಿಯನ್ನು ಇನ್ನು ಮುಂದೆ ಸರ್ಕಾರದಿಂದಲೇ ನಡೆಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ದೈವಿಕ ಸಂಸ್ಕೃತಿ ರಕ್ಷಣೆಯಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾದುದು. ಗುಡಿ, ಗೋಪುರ, ಮಠ ಮಂದಿರಗಳನ್ನು ನಿರ್ಮಿಸುವ ಕುಶಲಕರ್ಮಿಗಳು ಸಮಾಜದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ’ ಎಂದರು.</p>.<p>ವಿಶ್ವಕರ್ಮ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಕಾಳಹಸ್ತೇಂದ್ರ ಸ್ವಾಮೀಜಿ, ‘ವಿಶ್ವಕರ್ಮ ಸಮಾಜದವರು ಎಲ್ಲರಂತೆ ಬದುಕಬೇಕಾದರೆ ಅಧಿಕಾರ ಸಿಗಬೇಕು. ಈ ಬಗ್ಗೆ 67 ಮಠಾಧೀಶರು ಸೇರಿ ಅನೇಕ ಬಾರಿ ಮನವಿ ಸಲ್ಲಿಸಿದ್ದೇವೆ. ಈ ಬಾರಿಯೂ ಸಮಾಜದವರಿಗೆ ಅಧಿಕಾರ ನೀಡದೇ ಹೋದರೆ ಇನ್ನು ಭಿಕ್ಷೆ ಬೇಡುವುದಿಲ್ಲ. ಈಗಲೂ ನಿಮ್ಮ ಬಗ್ಗೆ ವಿಶ್ವಾಸ ಇಟ್ಟಿದ್ದೇವೆ’ ಎಂದು ಯಡಿಯೂರಪ್ಪ ಅವರನ್ನು ಉದ್ದೇಶಿಸಿ ಹೇಳಿದರು.</p>.<p>ವರವಿ ಮೌನೇಶ್ವರ ದೇವಸ್ಥಾನ, ಶಿರಸಂಗಿ ಕಾಳಿಕಾ ದೇವಿ ದೇವಾಲಯ, ಚಿಕ್ಕಲ್ಲೂರಿನ ಸಿದ್ಧಪ್ಪಾಜಿಯ ದೇವಾಲಯ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋತಲೂರಿನ ವೀರಬ್ರಹ್ಮೇಂದ್ರ ಸ್ವಾಮಿ ಪಾಪಾಗ್ನಿ ಮಠ, ತಿಂಥಣಿಯ ಮೌನೇಶ್ವರ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚಿಸುವಂತೆ ನಂಜುಂಡಿ ಒತ್ತಾಯಿಸಿದರು.</p>.<p>‘ಚಿನ್ನ ಮತ್ತು ಬೆಳ್ಳಿ ಕೆಲಸ ಮಾಡುವ ಅಮಾಯಕರ ಮೇಲೆ ಪೊಲೀಸ್ ಇಲಾಖೆ ಕಳವು ಮಾಲು ಹುಡುಕುವ ನೆಪದಲ್ಲಿ ದೌರ್ಜನ್ಯ ನಡೆಸುತ್ತಿದೆ. ಇದು ಮುಂದುವರಿದರೆ, ನಾನೇ ಬೀದಿಗಿಳಿದು ಪ್ರತಿಭಟಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p><strong>ನಿಗಮಕ್ಕೆ ₹ 50 ಕೋಟಿ: ಭರವಸೆ</strong><br />ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಸಾಲ ಪಡೆಯಲು 1.02 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈ ಬೇಡಿಕೆ ಪೂರೈಸಲು ₹ 500 ಕೋಟಿಯಾದರೂ ಬೇಕು. ಸರ್ಕಾರ ಕನಿಷ್ಠಪಕ್ಷ ₹ 200 ಕೋಟಿ ಅನುದಾನವನ್ನಾದರೂ ಒದಗಿಸಬೇಕು ಎಂದು ವಿಶ್ವಕರ್ಮ ಮಠಾಧಿಪತಿಗಳ ಒಕ್ಕೂಟ ಬೇಡಿಕೆ ಸಲ್ಲಿಸಿತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ನಿಗಮಕ್ಕೆ ಮುಂದಿನ ಬಜೆಟ್ನಲ್ಲಿ ₹ 50 ಕೋಟಿ ಅನುದಾನ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p><strong>ಬೇಡಿಕೆಗಳು</strong></p>.<p><strong>*</strong>ವಿಶ್ವಕರ್ಮರ ಪಂಚಕಸುಬುಗಳಿಗೆ ಸಂಬಂಧಿಸಿದಂತೆ ಜಕಣಾಚಾರಿ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ</p>.<p>*ಬೇಲೂರು ಚನ್ನಕೇಶವ ದೇವಾಲಯದ ಆವರಣದಲ್ಲಿ ಜಕಣಾಚಾರಿ ಪುತ್ಥಳಿ ಸ್ಥಾಪನೆ</p>.<p>*ಕಬ್ಬಿಣ ಮತ್ತು ಮರಗೆಲಸದವರಿಗೆ ಆರ್ಥಿಕ ನೆರವು</p>.<p>*ಕಲಬುರ್ಗಿ ವಿಮಾನನಿಲ್ದಾಣಕ್ಕೆ ಜಕಣಾಚಾರಿ ಹೆಸರು</p>.<p>*<br />ವಿಶ್ವಕರ್ಮರು ಕರ್ಮಯೋಗಿಗಳು. ದೇಶದ ಶಿಲ್ಪಕಲೆಗಳು ವಿಶ್ವಕರ್ಮರ ಸಂತತಿಯ ಕೊಡುಗೆ. ಇದನ್ನು ಸ್ಮರಿಸಬೇಕಾದುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕರ್ತವ್ಯ.<br /><em><strong>-ವಿನಯ ಗುರೂಜಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>