<p><strong>ಬೆಂಗಳೂರು</strong>: ರಾಷ್ಟ್ರೀಯ ಜಲಜೀವನ ಮಿಷನ್ ಅಭಿಯಾನದ ಅಡಿಯಲ್ಲಿ ಕರ್ನಾಟಕಕ್ಕೆ, ಕೇಂದ್ರ ಸರ್ಕಾರವು ತನ್ನ ಪಾಲಿನ ₹13,000 ಕೋಟಿಯನ್ನು ಬಾಕಿ ಉಳಿಸಿಕೊಂಡಿದೆ. ಈ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಕರ್ನಾಟಕಕ್ಕೆ ಒಟ್ಟು ₹69,487 ಕೋಟಿ ಮೊತ್ತದಷ್ಟು ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. ಕರ್ನಾಟಕವು ತನ್ನ ಪಾಲಿನಲ್ಲಿ ಈಗಾಗಲೇ ₹24,598 ಕೋಟಿ ವೆಚ್ಚ ಮಾಡಿದೆ. ಈವರೆಗೆ ನಡೆದಿರುವ ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ಒಟ್ಟು ₹24,786 ಕೋಟಿ ಬಿಡುಗಡೆ ಮಾಡಬೇಕಿತ್ತು. ಆದರೆ ₹11.786 ಕೋಟಿಯನ್ನಷ್ಟೇ ನೀಡಿದ್ದು, ₹13,000 ಕೋಟಿಯನ್ನು ಇನ್ನಷ್ಟೇ ಬಿಡುಗಡೆ ಮಾಡಬೇಕಿದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಕರ್ನಟಕಕ್ಕೆ ₹3,804 ಕೋಟಿ ಹಂಚಿಕೆ ಮಾಡಿದೆ. ಆದರೆ ಅದರಲ್ಲಿ ಈವರೆಗೆ ಬಿಡುಗಡೆಯಾಗಿರುವುದು ₹570 ಕೋಟಿ ಮಾತ್ರ. ಆದರೆ ರಾಜ್ಯ ಸರ್ಕಾರವು ತನ್ನ ಪಾಲಿನ ವೆಚ್ಚವನ್ನು ಈಗಾಗಲೇ ಮಾಡಿದೆ. ರಾಜ್ಯದಲ್ಲಿ ಈ ಆರ್ಥಿಕ ವರ್ಷದಲ್ಲಿ ₹1,700 ಕೋಟಿ ಮೊತ್ತದಷ್ಟು ಕಾಮಗಾರಿ ಮುಗಿದಿದ್ದು, ₹2,600 ಕೋಟಿಯಷ್ಟು ಕಾಮಗಾರಿಗಳು ನಡೆಯುತ್ತಿವೆ. ಕೇಂದ್ರವು ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಕಾಮಗಾರಿಗಳು ಸ್ಥಗಿತವಾಗುವ ಸಾಧ್ಯತೆ ಇದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>‘ಮನೆ–ಮನೆಗೆ ನಲ್ಲಿ ಯೋಜನೆ ಅಡಿಯಲ್ಲಿ ಕರ್ನಾಟಕವು ಈಗಾಗಲೇ ಶೇ 86ರಷ್ಟು ಪ್ರಗತಿ ಸಾಧಿಸಿದೆ. ಸಂಪೂರ್ಣ ಗುರಿ ಮುಟ್ಟುವಲ್ಲಿ ಕೇಂದ್ರ ಸರ್ಕಾರವು ತನ್ನ ಹೊಣೆಗಾರಿಕೆ ನಿಭಾಯಿಸುವುದು ಅತ್ಯಂತ ಮಹತ್ವದ್ದು. ಹೀಗಾಗಿ, ಬಾಕಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರೀಯ ಜಲಜೀವನ ಮಿಷನ್ ಅಭಿಯಾನದ ಅಡಿಯಲ್ಲಿ ಕರ್ನಾಟಕಕ್ಕೆ, ಕೇಂದ್ರ ಸರ್ಕಾರವು ತನ್ನ ಪಾಲಿನ ₹13,000 ಕೋಟಿಯನ್ನು ಬಾಕಿ ಉಳಿಸಿಕೊಂಡಿದೆ. ಈ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಕರ್ನಾಟಕಕ್ಕೆ ಒಟ್ಟು ₹69,487 ಕೋಟಿ ಮೊತ್ತದಷ್ಟು ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. ಕರ್ನಾಟಕವು ತನ್ನ ಪಾಲಿನಲ್ಲಿ ಈಗಾಗಲೇ ₹24,598 ಕೋಟಿ ವೆಚ್ಚ ಮಾಡಿದೆ. ಈವರೆಗೆ ನಡೆದಿರುವ ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ಒಟ್ಟು ₹24,786 ಕೋಟಿ ಬಿಡುಗಡೆ ಮಾಡಬೇಕಿತ್ತು. ಆದರೆ ₹11.786 ಕೋಟಿಯನ್ನಷ್ಟೇ ನೀಡಿದ್ದು, ₹13,000 ಕೋಟಿಯನ್ನು ಇನ್ನಷ್ಟೇ ಬಿಡುಗಡೆ ಮಾಡಬೇಕಿದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಕರ್ನಟಕಕ್ಕೆ ₹3,804 ಕೋಟಿ ಹಂಚಿಕೆ ಮಾಡಿದೆ. ಆದರೆ ಅದರಲ್ಲಿ ಈವರೆಗೆ ಬಿಡುಗಡೆಯಾಗಿರುವುದು ₹570 ಕೋಟಿ ಮಾತ್ರ. ಆದರೆ ರಾಜ್ಯ ಸರ್ಕಾರವು ತನ್ನ ಪಾಲಿನ ವೆಚ್ಚವನ್ನು ಈಗಾಗಲೇ ಮಾಡಿದೆ. ರಾಜ್ಯದಲ್ಲಿ ಈ ಆರ್ಥಿಕ ವರ್ಷದಲ್ಲಿ ₹1,700 ಕೋಟಿ ಮೊತ್ತದಷ್ಟು ಕಾಮಗಾರಿ ಮುಗಿದಿದ್ದು, ₹2,600 ಕೋಟಿಯಷ್ಟು ಕಾಮಗಾರಿಗಳು ನಡೆಯುತ್ತಿವೆ. ಕೇಂದ್ರವು ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಕಾಮಗಾರಿಗಳು ಸ್ಥಗಿತವಾಗುವ ಸಾಧ್ಯತೆ ಇದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>‘ಮನೆ–ಮನೆಗೆ ನಲ್ಲಿ ಯೋಜನೆ ಅಡಿಯಲ್ಲಿ ಕರ್ನಾಟಕವು ಈಗಾಗಲೇ ಶೇ 86ರಷ್ಟು ಪ್ರಗತಿ ಸಾಧಿಸಿದೆ. ಸಂಪೂರ್ಣ ಗುರಿ ಮುಟ್ಟುವಲ್ಲಿ ಕೇಂದ್ರ ಸರ್ಕಾರವು ತನ್ನ ಹೊಣೆಗಾರಿಕೆ ನಿಭಾಯಿಸುವುದು ಅತ್ಯಂತ ಮಹತ್ವದ್ದು. ಹೀಗಾಗಿ, ಬಾಕಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>