ವಿಜಯನಗರ, ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ಗಣಿ ಬಾಧಿತ ಪ್ರದೇಶಗಳ ಪುನರ್ ನಿರ್ಮಾಣ ಯೋಜನೆಗಳ ಅನುಷ್ಠಾನಕ್ಕೆ ರಾಜೀವ್ ಗಾಂಧಿ ವಸತಿ ನಿಗಮವನ್ನು ನೋಡಲ್ ಏಜೆನ್ಸಿಯಾಗಿ ನೇಮಿಸಲಾಗಿದೆ. ಹಾಗಾಗಿ, ಅಕ್ಟೋಬರ್ನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಾಗುವುದು. ಅಷ್ಟರಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒಗಳು ಜಿಲ್ಲಾವಾರು ಪ್ರಸ್ತಾವ ಸಲ್ಲಿಸಬೇಕು. 2018ರವರೆಗೆ ₹23 ಸಾವಿರ ಕೋಟಿ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿ ನಿಧಿ ಸಂಗ್ರಹವಾಗಿದೆ. 2023ರವರೆಗಿನ ಸಂಗ್ರಹದ ಮಾಹಿತಿ ನೀಡಬೇಕು ಎಂದು ಸೂಚಿಸಿದರು.