<p>ಗಂಗಾವತಿ (ಕೊಪ್ಪಳ ಜಿಲ್ಲೆ): ‘ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಗಂಗಾವತಿಯಲ್ಲಿ ಮನೆ ಖರೀದಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಇಲ್ಲಿಂದಲೇ ಸ್ಪರ್ಧಿಸುವರು’ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.</p>.<p>ಬಹುಕೋಟಿ ಗಣಿ ಹಗರಣದ ಆರೋಪದಲ್ಲಿ ಬಂಧಿತರಾಗಿದ್ದ ರೆಡ್ಡಿ ಅವರಿಗೆ ಷರತ್ತುಗಳ ಅನ್ವಯ 2015ರಲ್ಲಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್, ‘ಕರ್ನಾಟಕದ ಬಳ್ಳಾರಿ, ಆಂಧ್ರ ಪ್ರದೇಶದ ಕಡಪ, ಅನಂತಪುರಕ್ಕೆ ಭೇಟಿ ನೀಡಬಾರದು’ ಎಂಬ ಷರತ್ತು ವಿಧಿಸಿದೆ.</p>.<p>ಸಚಿವ ಶ್ರೀರಾಮುಲು ಬೆಂಬಲದಿಂದ ರಾಜಕೀಯ ಪ್ರವೇಶಿಸಿ, ಮತ್ತೆ ನೆಲೆ ಕಂಡುಕೊಳ್ಳಲು ಬಯಸಿರುವ ರೆಡ್ಡಿ ಅವರಿಗೆ ಬಿಜೆಪಿಯ ಭಿನ್ನ ನಿಲುವು ಅಡ್ಡಿಯಾಗಿದೆ. ಆದ್ದರಿಂದ ಕೆಲ ದಿನಗಳ ಹಿಂದೆ ರೆಡ್ಡಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>‘ಸದ್ಯಕ್ಕೆ ರಾಜಕೀಯದ ಮಾತು ಬೇಡ. ಭತ್ತದನಾಡು ಗಂಗಾವತಿಯಲ್ಲೇ ವಾಸವಿರಲು ಮನೆ ಖರೀದಿಸಿದ್ದೇನೆ. ಡಿಸೆಂಬರ್ ಅಂತ್ಯದಲ್ಲಿ ವಿಶೇಷ ಪೂಜೆನಡೆಸಿ, ಗೃಹ ಪ್ರವೇಶ ಮಾಡಲಾಗು ವುದು’ ಎಂದು ಜನಾರ್ದನ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. ಗಂಗಾವತಿಯಲ್ಲಿ ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ (ಕೊಪ್ಪಳ ಜಿಲ್ಲೆ): ‘ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಗಂಗಾವತಿಯಲ್ಲಿ ಮನೆ ಖರೀದಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಇಲ್ಲಿಂದಲೇ ಸ್ಪರ್ಧಿಸುವರು’ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.</p>.<p>ಬಹುಕೋಟಿ ಗಣಿ ಹಗರಣದ ಆರೋಪದಲ್ಲಿ ಬಂಧಿತರಾಗಿದ್ದ ರೆಡ್ಡಿ ಅವರಿಗೆ ಷರತ್ತುಗಳ ಅನ್ವಯ 2015ರಲ್ಲಿ ಜಾಮೀನು ನೀಡಿದ ಸುಪ್ರೀಂ ಕೋರ್ಟ್, ‘ಕರ್ನಾಟಕದ ಬಳ್ಳಾರಿ, ಆಂಧ್ರ ಪ್ರದೇಶದ ಕಡಪ, ಅನಂತಪುರಕ್ಕೆ ಭೇಟಿ ನೀಡಬಾರದು’ ಎಂಬ ಷರತ್ತು ವಿಧಿಸಿದೆ.</p>.<p>ಸಚಿವ ಶ್ರೀರಾಮುಲು ಬೆಂಬಲದಿಂದ ರಾಜಕೀಯ ಪ್ರವೇಶಿಸಿ, ಮತ್ತೆ ನೆಲೆ ಕಂಡುಕೊಳ್ಳಲು ಬಯಸಿರುವ ರೆಡ್ಡಿ ಅವರಿಗೆ ಬಿಜೆಪಿಯ ಭಿನ್ನ ನಿಲುವು ಅಡ್ಡಿಯಾಗಿದೆ. ಆದ್ದರಿಂದ ಕೆಲ ದಿನಗಳ ಹಿಂದೆ ರೆಡ್ಡಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>‘ಸದ್ಯಕ್ಕೆ ರಾಜಕೀಯದ ಮಾತು ಬೇಡ. ಭತ್ತದನಾಡು ಗಂಗಾವತಿಯಲ್ಲೇ ವಾಸವಿರಲು ಮನೆ ಖರೀದಿಸಿದ್ದೇನೆ. ಡಿಸೆಂಬರ್ ಅಂತ್ಯದಲ್ಲಿ ವಿಶೇಷ ಪೂಜೆನಡೆಸಿ, ಗೃಹ ಪ್ರವೇಶ ಮಾಡಲಾಗು ವುದು’ ಎಂದು ಜನಾರ್ದನ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. ಗಂಗಾವತಿಯಲ್ಲಿ ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>