ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುರಹಂಕಾರದಿಂದ ಕಾಂಗ್ರೆಸ್‌ಗೆ ಸೋಲು: ಜನಾರ್ದನ ಪೂಜಾರಿ

Last Updated 9 ಡಿಸೆಂಬರ್ 2019, 8:53 IST
ಅಕ್ಷರ ಗಾತ್ರ

ಮಂಗಳೂರು: 'ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಕಾಂಗ್ರೆಸ್ ಸಾಯುತ್ತದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ, ಪಕ್ಷದ ಇಂದಿನ ಪರಿಸ್ಥಿತಿ ಕಂಡು ಕಣ್ಣೀರಿಟ್ಟರು.

ಸೋಮವಾರ ಜೆಪ್ಪು ಪ್ರಶಾಂತ ನಿವಾಸ ಆಶ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಭವಿಷ್ಯದ ಬಗ್ಗೆ ನಾನು ನನ್ನ ಪಕ್ಷದವರಿಗೆ ಮೊದಲೇ ಹೇಳಿದ್ದೆ, ಅರ್ಥಮಾಡಿಕೊಳ್ಳಿ, ನೀವು ಹೀಗೆ ದುರಹಂಕಾರ ಮಾಡಿಕೊಂಡು ಹೋದರೆ ಬಿಜೆಪಿಯನು ತಡೆಯಲು ಸಾಧ್ಯವಿಲ್ಲ. ನನ್ನ ಪಕ್ಷದವರಲ್ಲಿ ಕೈ ಮುಗಿದು, ಕಣ್ಣೀರು ಸುರಿಸಿ ಹೇಳಿದೆ. ಆದರೆ ನಮ್ಮ ಪಕ್ಷದವರಿಗೆ ಇದ್ಯಾವುದು ಅರ್ಥ ಆಗಲಿಲ್ಲ. ಇಂದು ಫಲಿತಾಂಶದ ಹೊರಬಿದ್ದಿದೆ. ಈಗಲಾದರೂ ಅರ್ಥ ಆಯಿತಾ ಎಂದು ನಮ್ಮ ಪಕ್ಷದವರನ್ನು ಕೇಳುತ್ತಿದ್ದೇನೆ. ನಾನು ಈ ಭವಿಷ್ಯವನ್ನು ಕೆಲವು ತಿಂಗಳ ಹಿಂದೆ ಹೇಳಿದ್ದೆ. ದುರಹಂಕಾರ ಮಾಡಬೇಡಿಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT