ಜಿಲ್ಲೆಯ ಸವದತ್ತಿ ತಾಲ್ಲೂಕು ಹೂಲಿ ಗ್ರಾಮದಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ, ಸವದತ್ತಿ ಕ್ಷೇತ್ರದ ಮಾಜಿ ಶಾಸಕ ವೆಂಕರೆಡ್ಡಿ ಕಾಂಗ್ರೆಸ್ ಪಕ್ಷ ಬೆಳೆಸಲು 8 ವರ್ಷ ಜೈಲಿಗೆ ಹೋಗಿದ್ದರು. ಆದರೆ, ಆ ಪಕ್ಷ ಬೆಳೆಯುವುದನ್ನು ನಿಲ್ಲಿಸುವ ಪ್ರಯತ್ನದಲ್ಲಿ ನಾನು ಜೈಲಿಗೆ ಹೋಗಿ ಬಂದೆ. ಇಷ್ಟೇ ವ್ಯತ್ಯಾಸ’ ಎಂದು ವ್ಯಂಗ್ಯವಾಡಿದರು.