ತಾಲ್ಲೂಕಿನ ಆನೆಗೊಂದಿ ಗ್ರಾಮದ ರಂಗನಾಥ ದೇವಸ್ಥಾನದ ಬಳಿ ಮಂಗಳವಾರ ‘ಕೆಆರ್ಪಿಪಿ ಕಲ್ಯಾಣ ರಥಯಾತ್ರೆ’ ವಾಹನಕ್ಕೆ ಪತ್ನಿ ಲಕ್ಷ್ಮಿ ಅರುಣಾ ಮತ್ತು ಪುತ್ರಿ ಬ್ರಹ್ಮಿಣಿ ರಾಜೀವ್ ರೆಡ್ಡಿ ಅವರ ಜೊತೆ ಚಾಲನೆ ನೀಡಿ ಮಾತನಾಡಿದ ಅವರು, ‘ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ, ತಮಿಳುನಾಡಿನ ಪ್ರಾದೇಶಿಕ ಪಕ್ಷಗಳು ರಾಷ್ಟ್ರದಲ್ಲಿ ಸದ್ದು ಮಾಡುತ್ತಿವೆ. ಕೆಆರ್ಪಿಪಿಗೂ ಜನ ಬೆಂಬಲ ಸಿಗುತ್ತಿದ್ದು, ಈ ಬಾರಿ ದೇಶದಲ್ಲಿ ಇತಿಹಾಸ ಸೃಷ್ಟಿಸಲಿದೆ’ ಎಂದರು.