<p><strong>ಬೆಂಗಳೂರು:</strong> ಜಪಾನ್ ಹಾಗೂ ದಕ್ಷಿಣ ಕೊರಿಯಾ ಕಂಪನಿಗಳಿಂದ ಕರ್ನಾಟಕಕ್ಕೆ ₹6,450 ಕೋಟಿ ಹೂಡಿಕೆ ಹರಿದುಬರಲಿದೆ. ಇದರಿಂದ ಒಂದು ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.</p><p>‘ಕರ್ನಾಟಕದ ಉನ್ನತ ಮಟ್ಟದ ನಿಯೋಗ ಈ ಎರಡೂ ದೇಶಗಳಿಗೆ ಎರಡು ವಾರ (ಜೂನ್ 24–ಜುಲೈ 5) ನೀಡಿದ ಭೇಟಿಯ ಫಲವಾಗಿ ದೊಡ್ಡ ಪ್ರಮಾಣದ ಹೂಡಿಕೆ ಸೆಳೆಯುವಲ್ಲಿ ಯಶ ಕಂಡಿದ್ದೇವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p><p>‘ಎರಡೂ ದೇಶಗಳ 35ಕ್ಕೂ ಹೆಚ್ಚು ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್ಎಂಇ) ಬಂಡವಾಳ ಹೂಡಿಕೆಯ ರೋಡ್ ಶೋ ಆಯೋಜಿಸಲಾಗಿತ್ತು’ ಎಂದರು.</p><p>ತಯಾರಿಕಾ ವಲಯಕ್ಕೆ ರಾಜ್ಯದಲ್ಲಿರುವ ಅನುಕೂಲಕರ ವಾತಾವರಣ, ಮೂಲ ಸೌಲಭ್ಯ ಕುರಿತು ಅಲ್ಲಿನ ಕಂಪನಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ‘ಇನ್ವೆಸ್ಟ್ ಕರ್ನಾಟಕ–2025’ರಲ್ಲಿ ಭಾಗವಹಿಸಲು 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಲಾಗಿದೆ’ ಎಂದರು.</p><p>ಒಸಾಕಾ ಗ್ಯಾಸ್ ಕಂಪನಿ ಮುಂದಿನ 5 ವರ್ಷಗಳಲ್ಲಿ ಅನಿಲ ವಿತರಣಾ ಮೂಲ ಸೌಲಭ್ಯ ವಿಸ್ತರಿಸಲು ₹5 ಸಾವಿರ ಕೋಟಿ, ಕೊರಿಯಾದ ಡಿಎನ್ ಸೆಲ್ಯೂಷನ್ಸ್ ಕೈಗಾರಿಕಾ ಯಂತ್ರೋಪಕರಣಗಳು ಮತ್ತು ಸ್ವಯಂಚಾಲಿತ ವ್ಯವಸ್ಥೆಗಳ ತಯಾರಿಕಾ ಘಟಕ ಸ್ಥಾಪಿಸಲು ₹1 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದರು.</p><p>ವಾಹನ ಬಿಡಿಭಾಗಗಳನ್ನು ಪೂರೈಸುವ ಜಪಾನಿನ ಅವೊಯಮಾ ಸೈಸಕುಶೊ ಕಂಪನಿಯು ತುಮಕೂರು ಬಳಿಯ ಜಪಾನ್ ಕೈಗಾರಿಕಾ ಟೌನ್ಶಿಪ್ನಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ₹210 ಕೋಟಿ, ಡೈಕಿ ಆ್ಯಕ್ಸಿಸ್ ಹೈವಿಷನ್ ಮತ್ತು ಇಎಂಎನ್ಐ ಕಂಪನಿಯು, ಬ್ಯಾಟರಿ ಸೆಲ್ಗಳ ಸಂಗ್ರಹ ಮತ್ತು ಪರೀಕ್ಷಾ ಕೇಂದ್ರ ಹಾಗೂ ಪರಿಸರ ಸಂರಕ್ಷಣೆ ಸಲಕರಣೆ ತಯಾರಿಸುವ ಘಟಕ ಸ್ಥಾಪಿಸಲು ₹210 ಕೋಟಿ ಹೂಡಿಕೆ ಮಾಡಲಿವೆ ಎಂದರು.</p><p>ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್, ಇಂಧನ ಪರಿಹಾರ ವಲಯಗಳಲ್ಲಿ ₹25 ಸಾವಿರ ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಸಾಧ್ಯತೆಗಳನ್ನು ರಾಜ್ಯದ ನಿಯೋಗ ಗುರುತಿಸಿದೆ ಎಂದು ವಿವರಿಸಿದರು.</p>.<h2>‘ಹೊಸೂರು ಬಳಿ ವಿಮಾನ ನಿಲ್ದಾಣ: ರಾಜ್ಯಕ್ಕೆ ತೊಂದರೆಯಿಲ್ಲ’ </h2><p>ಕರ್ನಾಟಕ ಹೊಸ ವಿಮಾನ ನಿಲ್ದಾಣದ ಪ್ರಸ್ತಾವ ಘೋಷಣೆ ಮಾಡಿದ ನಂತರ ತಮಿಳುನಾಡು ಸಹ ಹೊಸೂರು ಬಳಿ ನೂತನ ವಿಮಾನ ನಿಲ್ದಾಣ ಆರಂಭಿಸುವುದಾಗಿ ಹೇಳಿದೆ. ಹೊಸೂರು ಬಳಿ ನಿಲ್ದಾಣವಾದರೆ ಕರ್ನಾಟಕಕ್ಕೆ ಯಾವ ತೊಂದರೆಯೂ ಇಲ್ಲ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. </p><p>ವಾರ್ಷಿಕವಾಗಿ 10 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ವಿಮಾನ ನಿಲ್ದಾಣ ಬೆಂಗಳೂರು ನಗರಕ್ಕೆ ಅಗತ್ಯವಿದ್ದು 5 ಸಾವಿರ ಎಕರೆ ಜಮೀನು ಬೇಕಿದೆ. ಕನಕಪುರ ರಸ್ತೆ ಮೈಸೂರು ರಸ್ತೆ ಮಾಗಡಿ ದೊಡ್ಡಬಳ್ಳಾಪುರ ದಾಬಸ್ಪೇಟೆ ತುಮಕೂರು ಬಳಿ ಸ್ಥಳ ಗುರುತಿಸಲಾಗುತ್ತಿದೆ ಎಂದರು. </p><p>ಈಗಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ದೆಹಲಿ ಮತ್ತು ಮುಂಬೈ ನಂತರದ ಅತಿದಟ್ಟಣೆಯ ಮೂರನೇ ನಿಲ್ದಾಣವಾಗಿದೆ. ವರ್ಷಕ್ಕೆ 5.2 ಕೋಟಿ ಪ್ರಯಾಣಿಕರನ್ನು ನಿರ್ವಹಿಸುತ್ತಿದೆ. ಎರಡು ರನ್ ವೇ ಇದ್ದು ಅಲ್ಲಿ ವಿಸ್ತರಣೆ ಸಾಧ್ಯವಿಲ್ಲ ಎಂದರು. </p>.<div><blockquote>ರಾಜ್ಯದ ಕೈಗಾರಿಕಾ ವಲಯದ ಅಭಿವೃದ್ಧಿಗೆ ಕೇಂದ್ರದ ನೆರವು ಕೋರಲಾಗುವುದು. ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು.</blockquote><span class="attribution">–ಎಂ.ಬಿ. ಪಾಟೀಲ, ಬೃಹತ್ ಕೈಗಾರಿಕಾ ಸಚಿವ </span></div>.ರಾಜ್ಯದಲ್ಲಿ ₹1,245 ಕೋಟಿ ಹೂಡಿಕೆ: ದಕ್ಷಿಣ ಕೊರಿಯಾದ ವೈಜಿ–1 ಕಂಪನಿ ಘೋಷಣೆ.ಹೂಡಿಕೆ ಆಕರ್ಷಣೆಗೆ ಪ್ರಧಾನಿ ಮೋದಿ ಅಡ್ಡಗಾಲು: ಪ್ರಿಯಾಂಕ್ ಖರ್ಗೆ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಪಾನ್ ಹಾಗೂ ದಕ್ಷಿಣ ಕೊರಿಯಾ ಕಂಪನಿಗಳಿಂದ ಕರ್ನಾಟಕಕ್ಕೆ ₹6,450 ಕೋಟಿ ಹೂಡಿಕೆ ಹರಿದುಬರಲಿದೆ. ಇದರಿಂದ ಒಂದು ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.</p><p>‘ಕರ್ನಾಟಕದ ಉನ್ನತ ಮಟ್ಟದ ನಿಯೋಗ ಈ ಎರಡೂ ದೇಶಗಳಿಗೆ ಎರಡು ವಾರ (ಜೂನ್ 24–ಜುಲೈ 5) ನೀಡಿದ ಭೇಟಿಯ ಫಲವಾಗಿ ದೊಡ್ಡ ಪ್ರಮಾಣದ ಹೂಡಿಕೆ ಸೆಳೆಯುವಲ್ಲಿ ಯಶ ಕಂಡಿದ್ದೇವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p><p>‘ಎರಡೂ ದೇಶಗಳ 35ಕ್ಕೂ ಹೆಚ್ಚು ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್ಎಂಇ) ಬಂಡವಾಳ ಹೂಡಿಕೆಯ ರೋಡ್ ಶೋ ಆಯೋಜಿಸಲಾಗಿತ್ತು’ ಎಂದರು.</p><p>ತಯಾರಿಕಾ ವಲಯಕ್ಕೆ ರಾಜ್ಯದಲ್ಲಿರುವ ಅನುಕೂಲಕರ ವಾತಾವರಣ, ಮೂಲ ಸೌಲಭ್ಯ ಕುರಿತು ಅಲ್ಲಿನ ಕಂಪನಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ‘ಇನ್ವೆಸ್ಟ್ ಕರ್ನಾಟಕ–2025’ರಲ್ಲಿ ಭಾಗವಹಿಸಲು 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಲಾಗಿದೆ’ ಎಂದರು.</p><p>ಒಸಾಕಾ ಗ್ಯಾಸ್ ಕಂಪನಿ ಮುಂದಿನ 5 ವರ್ಷಗಳಲ್ಲಿ ಅನಿಲ ವಿತರಣಾ ಮೂಲ ಸೌಲಭ್ಯ ವಿಸ್ತರಿಸಲು ₹5 ಸಾವಿರ ಕೋಟಿ, ಕೊರಿಯಾದ ಡಿಎನ್ ಸೆಲ್ಯೂಷನ್ಸ್ ಕೈಗಾರಿಕಾ ಯಂತ್ರೋಪಕರಣಗಳು ಮತ್ತು ಸ್ವಯಂಚಾಲಿತ ವ್ಯವಸ್ಥೆಗಳ ತಯಾರಿಕಾ ಘಟಕ ಸ್ಥಾಪಿಸಲು ₹1 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದರು.</p><p>ವಾಹನ ಬಿಡಿಭಾಗಗಳನ್ನು ಪೂರೈಸುವ ಜಪಾನಿನ ಅವೊಯಮಾ ಸೈಸಕುಶೊ ಕಂಪನಿಯು ತುಮಕೂರು ಬಳಿಯ ಜಪಾನ್ ಕೈಗಾರಿಕಾ ಟೌನ್ಶಿಪ್ನಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ₹210 ಕೋಟಿ, ಡೈಕಿ ಆ್ಯಕ್ಸಿಸ್ ಹೈವಿಷನ್ ಮತ್ತು ಇಎಂಎನ್ಐ ಕಂಪನಿಯು, ಬ್ಯಾಟರಿ ಸೆಲ್ಗಳ ಸಂಗ್ರಹ ಮತ್ತು ಪರೀಕ್ಷಾ ಕೇಂದ್ರ ಹಾಗೂ ಪರಿಸರ ಸಂರಕ್ಷಣೆ ಸಲಕರಣೆ ತಯಾರಿಸುವ ಘಟಕ ಸ್ಥಾಪಿಸಲು ₹210 ಕೋಟಿ ಹೂಡಿಕೆ ಮಾಡಲಿವೆ ಎಂದರು.</p><p>ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್, ಇಂಧನ ಪರಿಹಾರ ವಲಯಗಳಲ್ಲಿ ₹25 ಸಾವಿರ ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಸಾಧ್ಯತೆಗಳನ್ನು ರಾಜ್ಯದ ನಿಯೋಗ ಗುರುತಿಸಿದೆ ಎಂದು ವಿವರಿಸಿದರು.</p>.<h2>‘ಹೊಸೂರು ಬಳಿ ವಿಮಾನ ನಿಲ್ದಾಣ: ರಾಜ್ಯಕ್ಕೆ ತೊಂದರೆಯಿಲ್ಲ’ </h2><p>ಕರ್ನಾಟಕ ಹೊಸ ವಿಮಾನ ನಿಲ್ದಾಣದ ಪ್ರಸ್ತಾವ ಘೋಷಣೆ ಮಾಡಿದ ನಂತರ ತಮಿಳುನಾಡು ಸಹ ಹೊಸೂರು ಬಳಿ ನೂತನ ವಿಮಾನ ನಿಲ್ದಾಣ ಆರಂಭಿಸುವುದಾಗಿ ಹೇಳಿದೆ. ಹೊಸೂರು ಬಳಿ ನಿಲ್ದಾಣವಾದರೆ ಕರ್ನಾಟಕಕ್ಕೆ ಯಾವ ತೊಂದರೆಯೂ ಇಲ್ಲ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. </p><p>ವಾರ್ಷಿಕವಾಗಿ 10 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ವಿಮಾನ ನಿಲ್ದಾಣ ಬೆಂಗಳೂರು ನಗರಕ್ಕೆ ಅಗತ್ಯವಿದ್ದು 5 ಸಾವಿರ ಎಕರೆ ಜಮೀನು ಬೇಕಿದೆ. ಕನಕಪುರ ರಸ್ತೆ ಮೈಸೂರು ರಸ್ತೆ ಮಾಗಡಿ ದೊಡ್ಡಬಳ್ಳಾಪುರ ದಾಬಸ್ಪೇಟೆ ತುಮಕೂರು ಬಳಿ ಸ್ಥಳ ಗುರುತಿಸಲಾಗುತ್ತಿದೆ ಎಂದರು. </p><p>ಈಗಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ದೆಹಲಿ ಮತ್ತು ಮುಂಬೈ ನಂತರದ ಅತಿದಟ್ಟಣೆಯ ಮೂರನೇ ನಿಲ್ದಾಣವಾಗಿದೆ. ವರ್ಷಕ್ಕೆ 5.2 ಕೋಟಿ ಪ್ರಯಾಣಿಕರನ್ನು ನಿರ್ವಹಿಸುತ್ತಿದೆ. ಎರಡು ರನ್ ವೇ ಇದ್ದು ಅಲ್ಲಿ ವಿಸ್ತರಣೆ ಸಾಧ್ಯವಿಲ್ಲ ಎಂದರು. </p>.<div><blockquote>ರಾಜ್ಯದ ಕೈಗಾರಿಕಾ ವಲಯದ ಅಭಿವೃದ್ಧಿಗೆ ಕೇಂದ್ರದ ನೆರವು ಕೋರಲಾಗುವುದು. ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು.</blockquote><span class="attribution">–ಎಂ.ಬಿ. ಪಾಟೀಲ, ಬೃಹತ್ ಕೈಗಾರಿಕಾ ಸಚಿವ </span></div>.ರಾಜ್ಯದಲ್ಲಿ ₹1,245 ಕೋಟಿ ಹೂಡಿಕೆ: ದಕ್ಷಿಣ ಕೊರಿಯಾದ ವೈಜಿ–1 ಕಂಪನಿ ಘೋಷಣೆ.ಹೂಡಿಕೆ ಆಕರ್ಷಣೆಗೆ ಪ್ರಧಾನಿ ಮೋದಿ ಅಡ್ಡಗಾಲು: ಪ್ರಿಯಾಂಕ್ ಖರ್ಗೆ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>