‘ಕೇಂದ್ರವು ಹಿಂದೆ ಪರಿಸರ ಅನುಮತಿ ನೀಡಿತ್ತು. ಆದರೆ, ಅದು ಲ್ಯಾಪ್ಸ್ ಆಗಿದೆ. ಈ ನಡುವೆ, ಯೋಜನೆ ಕುರಿತಂತೆ ಹೊಸದಾಗಿ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಲಾಗಿತ್ತು. ಹೀಗಾಗಿ, ಮತ್ತೆ ಅನುಮತಿ ಪಡೆಯಬೇಕಾಗಿದೆ. ಸಚಿವಾಲಯದ ಅಧಿಕಾರಿಗಳೊಂದಿಗೂ ಸಮಾಲೋಚನೆ ನಡೆಸುವೆ. ಮಹದಾಯಿ ನ್ಯಾಯಮಂಡಳಿಯ ತೀರ್ಪಿನ ಪ್ರಕಾರ ನೀರು ಪಡೆದುಕೊಳ್ಳಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುತ್ತೇವೆ’ ಎಂದರು.