<p><strong>ಬೆಂಗಳೂರು</strong>: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರ ಹುದ್ದೆಗೆ ಡಾ. ದಿನೇಶ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಆ ಕುರಿತು ಹೈಕೋರ್ಟ್ಗೆ ವರದಿ ಸಲ್ಲಿಸಿ ನಂತರ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಆಡಳಿತ ಮಂಡಳಿ ಸಭೆ ನಿರ್ಧರಿಸಿದೆ.</p>.<p>ಆಡಳಿತ ಮಂಡಳಿ ಸಭೆಯು ವಿಧಾನಸೌಧದಲ್ಲಿ ಗುರುವಾರ ನಡೆಯಿತು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಕೂಡಾ ಇದ್ದರು. ಸಭೆಯಲ್ಲಿ ನಿರ್ದೇಶಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದ 11 ಹಿರಿಯ ವೈದ್ಯರ ಪೈಕಿ 10 ಮಂದಿಯ ಸಂದರ್ಶನ ನಡೆಸಲಾಗಿದೆ.</p>.<p>ಸಂಸ್ಥೆಯ ಪ್ರಭಾರ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ಅವರ ಅವಧಿ ಮುಕ್ತಾಯವಾಗುತ್ತಿರುವ ಕಾರಣ ಹೊಸ ನಿರ್ದೇಶಕರ ನೇಮಕ ಮಾಡಬೇಕಿದೆ.</p>.<p>ಡಾ. ದಿನೇಶ್, ಡಾ. ಎಂ. ದಿವ್ಯಾ ಪ್ರಕಾಶ್, ಡಾ.ಬಿ. ಗಿರೀಶ್, ಡಾ.ಎಸ್. ಜಯಪ್ರಕಾಶ್, ಡಾ.ವಿ. ಕುಮಾರಸ್ವಾಮಿ, ಡಾ.ಎ.ಸಿ. ನಾಗಮಣಿ, ಡಾ.ಸಿ.ಜಿ. ಪ್ರಭುಶಂಕರ್, ಡಾ.ಎಂ. ಪ್ರಸನ್ನ ಸಿಂಹ ಮತ್ತು ಡಾ. ವೇಣುಗೋಪಾಲ್ ರಾಮ್ರಾವ್ ಸಂದರ್ಶನದಲ್ಲಿ ಭಾಗವಹಿಸಿದ್ದರು. ಡಾ. ಸತೀಶ್ ಗೋವಿಂದಯ್ಯ ಗೈರಾಗಿದ್ದರು.</p>.<p>‘ನಿರ್ದೇಶಕ ಹುದ್ದೆಗೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಇರುವುದರಿಂದ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಮಂಡಳಿ ಸಭೆಯ ನಿರ್ಣಯವನ್ನು ಹೈಕೋರ್ಟ್ಗೆ ಸರ್ಕಾರ ಸಲ್ಲಿಸಲಿದೆ. ಹೈಕೋರ್ಟ್ ನೀಡುವ ಆದೇಶದಂತೆ ಹೆಸರು ಘೋಷಣೆ ಆಗಲಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರ ಹುದ್ದೆಗೆ ಡಾ. ದಿನೇಶ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಆ ಕುರಿತು ಹೈಕೋರ್ಟ್ಗೆ ವರದಿ ಸಲ್ಲಿಸಿ ನಂತರ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಆಡಳಿತ ಮಂಡಳಿ ಸಭೆ ನಿರ್ಧರಿಸಿದೆ.</p>.<p>ಆಡಳಿತ ಮಂಡಳಿ ಸಭೆಯು ವಿಧಾನಸೌಧದಲ್ಲಿ ಗುರುವಾರ ನಡೆಯಿತು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಕೂಡಾ ಇದ್ದರು. ಸಭೆಯಲ್ಲಿ ನಿರ್ದೇಶಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದ 11 ಹಿರಿಯ ವೈದ್ಯರ ಪೈಕಿ 10 ಮಂದಿಯ ಸಂದರ್ಶನ ನಡೆಸಲಾಗಿದೆ.</p>.<p>ಸಂಸ್ಥೆಯ ಪ್ರಭಾರ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ಅವರ ಅವಧಿ ಮುಕ್ತಾಯವಾಗುತ್ತಿರುವ ಕಾರಣ ಹೊಸ ನಿರ್ದೇಶಕರ ನೇಮಕ ಮಾಡಬೇಕಿದೆ.</p>.<p>ಡಾ. ದಿನೇಶ್, ಡಾ. ಎಂ. ದಿವ್ಯಾ ಪ್ರಕಾಶ್, ಡಾ.ಬಿ. ಗಿರೀಶ್, ಡಾ.ಎಸ್. ಜಯಪ್ರಕಾಶ್, ಡಾ.ವಿ. ಕುಮಾರಸ್ವಾಮಿ, ಡಾ.ಎ.ಸಿ. ನಾಗಮಣಿ, ಡಾ.ಸಿ.ಜಿ. ಪ್ರಭುಶಂಕರ್, ಡಾ.ಎಂ. ಪ್ರಸನ್ನ ಸಿಂಹ ಮತ್ತು ಡಾ. ವೇಣುಗೋಪಾಲ್ ರಾಮ್ರಾವ್ ಸಂದರ್ಶನದಲ್ಲಿ ಭಾಗವಹಿಸಿದ್ದರು. ಡಾ. ಸತೀಶ್ ಗೋವಿಂದಯ್ಯ ಗೈರಾಗಿದ್ದರು.</p>.<p>‘ನಿರ್ದೇಶಕ ಹುದ್ದೆಗೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಇರುವುದರಿಂದ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಮಂಡಳಿ ಸಭೆಯ ನಿರ್ಣಯವನ್ನು ಹೈಕೋರ್ಟ್ಗೆ ಸರ್ಕಾರ ಸಲ್ಲಿಸಲಿದೆ. ಹೈಕೋರ್ಟ್ ನೀಡುವ ಆದೇಶದಂತೆ ಹೆಸರು ಘೋಷಣೆ ಆಗಲಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>