‘ಜಯಲಲಿತಾ ಮತ್ತು ಇತರೆ ಆರೋಪಿಗಳಾದ ವಿ.ಕೆ. ಶಶಿಕಲಾ ನಟರಾಜನ್, ವಿ.ಎನ್. ಸುಧಾಕರನ್ ಮತ್ತು ಜೆ. ಇಳವರಸಿ ಅವರಿಗೆ ಸೇರಿದ ಆಸ್ತಿಗಳನ್ನು ಪ್ರತ್ಯೇಕಿಸಲಾಗಿಲ್ಲ. ಎಲ್ಲಾ ಆರೋಪಿಗಳು ಒಟ್ಟಿಗೆ ಸೇರಿ ಬೇನಾಮಿ ಕಂಪನಿಗಳನ್ನು ಆರಂಭಿಸಿ ಅಕ್ರಮ ಹಣವನ್ನು ಅವುಗಳಲ್ಲಿ ಹೂಡಿಕೆ ಮಾಡಿ ಆಸ್ತಿ ಗಳಿಸಿದ್ದರು ಎಂದು ಹೇಳಲಾಗಿದೆ. ಹಾಗಾಗಿ, ಜಯಲಲಿತಾ ಸಾವಿನ ಕಾರಣದಿಂದ ಅವರ ವಿರುದ್ಧದ ಆರೋಪ ಕೈಬಿಟ್ಟರೂ ಅಕ್ರಮ ಮಾರ್ಗದ ಮೂಲಕ ಸಂಪಾದಿಸಿರುವ ಆಸ್ತಿಯನ್ನು ಜಯಲಲಿತಾ ಅವರ ಕಾನೂನಾತ್ಮಕ ವಾರಸುದಾರರಿಗೆ ನೀಡಲಾಗದು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.