‘ಸಮೀಕ್ಷೆ ನಡೆಸುವಾಗ ನನ್ನನ್ನು ಯಾರೂ ಭೇಟಿ ಮಾಡಿಲ್ಲ’ ಎಂದು ತುಮಕೂರಿನ ಸಿದ್ದಗಂಗಾ ಶ್ರೀ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಹೆಗ್ಡೆ, ‘ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಮನೆಯ ಸದಸ್ಯರಿಂದ ಅವರು ಮಾಹಿತಿ ಪಡೆದಿದ್ದಾರೆ. ಮನೆಯಲ್ಲಿ ಇಲ್ಲದ ವೇಳೆ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದಿರುತ್ತಾರೆ. ಹೀಗಾಗಿ, ತಮ್ಮನ್ನು ಭೇಟಿ ಮಾಡಿಲ್ಲವೆಂದು ಶ್ರೀಗಳು ಹೇಳಿರಬಹುದು’ ಎಂದರು.