<p><strong>ಬೆಂಗಳೂರು:</strong> ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ಡಿಎ) ಸೇರುವ ಜೆಡಿಎಸ್ ನಿರ್ಧಾರ ವಿರೋಧಿಸಿ ಮಾಜಿ ಸಚಿವ ಎನ್.ಎಂ.ನಬಿ ಸೇರಿದಂತೆ ಹಿರಿಯ ಮುಸ್ಲಿಂ ಮುಖಂಡರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.</p>.<p>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಜೆಡಿಎಸ್ನ ಹಲವು ಮುಸ್ಲಿಂ ಮುಖಂಡರು ಪ್ರತ್ಯೇಕ ಸಭೆ ನಡೆಸಿದರು.</p>.<p>ನಬಿ ಅವರೊಂದಿಗೆ ಜೆಡಿಎಸ್ನ ಹಿರಿಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿದ್ದ ಮೊಹಿದ್ ಅಲ್ತಾಫ್, ಯುವ ಘಟಕದ ಅಧ್ಯಕ್ಷ ಎನ್.ಎಂ. ನೂರ್, ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ನಾಸಿರ್ ಹುಸೇನ್ ಉಸ್ತಾದ್ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದಾರೆ. </p>.<p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಮುಸ್ಲಿಂ ಮತಗಳನ್ನು ಪಡೆಯಲು ಕಾಂಗ್ರೆಸ್ನಲ್ಲಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಸೆಳೆದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದರೆ, ಚುನಾವಣೆಯಲ್ಲಿ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದರು.</p>.<p>‘ಜೆಡಿಎಸ್ ಬಿಜೆಪಿಯ ‘ಬಿ’ ಟೀಮ್ ಎಂದು ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಬಿಂಬಿಸಿತ್ತು. ಇದರಿಂದ ಕಾಂಗ್ರೆಸ್ಗೆ ಲಾಭವಾಗಿತ್ತು. ಪಕ್ಷದ ನಾಯಕರು ತೆಗೆದುಕೊಂಡಿರುವ ನಿರ್ಧಾರ ಕಾಂಗ್ರೆಸ್ ಆರೋಪವನ್ನು ಪುಷ್ಟೀಕರಿಸಿದೆ. ಜಾತ್ಯತೀತ ನಿಲುವು ಸಡಿಲಗೊಂಡಿರುವ ಕಾರಣ ಪಕ್ಷ ತೊರೆಯಲು ನಿರ್ಧರಿಸಲಾಗಿದೆ. ಈ ಬೆಳವಣಿಗೆಯಿಂದ ಮುಸ್ಲಿಂ ಮುಖಂಡರು ಅಸಮಾಧಾನಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ’ ಎಂದು ಸೈಯದ್ ಶಫಿವುಲ್ಲಾ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p> ‘ಉಳಿದ ಮುಸ್ಲಿಮರೂ ಸೇರಿದಂತೆ ಇತರೆ ಸಮುದಾಯಗಳ ಜಾತ್ಯತೀತ ನಾಯಕರ ಜತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ಡಿಎ) ಸೇರುವ ಜೆಡಿಎಸ್ ನಿರ್ಧಾರ ವಿರೋಧಿಸಿ ಮಾಜಿ ಸಚಿವ ಎನ್.ಎಂ.ನಬಿ ಸೇರಿದಂತೆ ಹಿರಿಯ ಮುಸ್ಲಿಂ ಮುಖಂಡರು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.</p>.<p>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಜೆಡಿಎಸ್ನ ಹಲವು ಮುಸ್ಲಿಂ ಮುಖಂಡರು ಪ್ರತ್ಯೇಕ ಸಭೆ ನಡೆಸಿದರು.</p>.<p>ನಬಿ ಅವರೊಂದಿಗೆ ಜೆಡಿಎಸ್ನ ಹಿರಿಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿದ್ದ ಮೊಹಿದ್ ಅಲ್ತಾಫ್, ಯುವ ಘಟಕದ ಅಧ್ಯಕ್ಷ ಎನ್.ಎಂ. ನೂರ್, ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ನಾಸಿರ್ ಹುಸೇನ್ ಉಸ್ತಾದ್ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದಾರೆ. </p>.<p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಮುಸ್ಲಿಂ ಮತಗಳನ್ನು ಪಡೆಯಲು ಕಾಂಗ್ರೆಸ್ನಲ್ಲಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಸೆಳೆದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದರೆ, ಚುನಾವಣೆಯಲ್ಲಿ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದರು.</p>.<p>‘ಜೆಡಿಎಸ್ ಬಿಜೆಪಿಯ ‘ಬಿ’ ಟೀಮ್ ಎಂದು ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಬಿಂಬಿಸಿತ್ತು. ಇದರಿಂದ ಕಾಂಗ್ರೆಸ್ಗೆ ಲಾಭವಾಗಿತ್ತು. ಪಕ್ಷದ ನಾಯಕರು ತೆಗೆದುಕೊಂಡಿರುವ ನಿರ್ಧಾರ ಕಾಂಗ್ರೆಸ್ ಆರೋಪವನ್ನು ಪುಷ್ಟೀಕರಿಸಿದೆ. ಜಾತ್ಯತೀತ ನಿಲುವು ಸಡಿಲಗೊಂಡಿರುವ ಕಾರಣ ಪಕ್ಷ ತೊರೆಯಲು ನಿರ್ಧರಿಸಲಾಗಿದೆ. ಈ ಬೆಳವಣಿಗೆಯಿಂದ ಮುಸ್ಲಿಂ ಮುಖಂಡರು ಅಸಮಾಧಾನಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ’ ಎಂದು ಸೈಯದ್ ಶಫಿವುಲ್ಲಾ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p> ‘ಉಳಿದ ಮುಸ್ಲಿಮರೂ ಸೇರಿದಂತೆ ಇತರೆ ಸಮುದಾಯಗಳ ಜಾತ್ಯತೀತ ನಾಯಕರ ಜತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಪ್ರಕಟಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>