<p><strong>ರಾಮನಗರ</strong>: ಚನ್ನಪಟ್ಟಣದಲ್ಲಿ ಶನಿವಾರ ನಡೆದ ಗಲಾಟೆಗೆ ಜೆಡಿಎಸ್ ಗೂಂಡಾಗಳೇ ಕಾರಣ. ಇದು ಕುಮಾರಸ್ವಾಮಿ ರಾಜಕೀಯ ಅಧಃಪತನಕ್ಕೆ ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>'ಜೆಡಿಎಸ್ನ ನರಸಿಂಹಮೂರ್ತಿ ಸೇರಿದಂತೆ ಐದಾರು ಕಾರುಗಳಲ್ಲಿ ಹೊರಗಿನಿಂದ ಬಂದವರು ನನಗೆ ಮುತ್ತಿಗೆ ಹಾಕಿ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಹೀಗೆ ಹೊರಗಿನಿಂದ ಕರೆಸಿ ಗಲಾಟೆ ಮಾಡಿಸುವುದು ಕುಮಾರಸ್ವಾಮಿಗೆ ಶೋಭೆ ತರುವಂತದ್ದಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>'ಕುಮಾರಸ್ವಾಮಿ ನಡೆಗೆ ಬೇಸತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ನ ಬಹುತೇಕ ಮುಖಂಡರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದನ್ನು ಸಹಿಸಲು ಅವರಿಗೆ ಆಗುತ್ತಿಲ್ಲ' ಎಂದು ದೂರಿದರು.</p>.<p>'ನಾನು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದರೆ ಅದಕ್ಕೆ ತಡೆ ಒಡ್ಡುತ್ತಿದ್ದಾರೆ. ಮುಂದೆ ಅವರೂ ತಾಲ್ಲೂಕಿಗೆ ಬರುತ್ತಾರೆ. ಆದರೆ ನಾವು ಹೀಗೆ ಮಾಡುವುದಿಲ್ಲ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಚನ್ನಪಟ್ಟಣದಲ್ಲಿ ಶನಿವಾರ ನಡೆದ ಗಲಾಟೆಗೆ ಜೆಡಿಎಸ್ ಗೂಂಡಾಗಳೇ ಕಾರಣ. ಇದು ಕುಮಾರಸ್ವಾಮಿ ರಾಜಕೀಯ ಅಧಃಪತನಕ್ಕೆ ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>'ಜೆಡಿಎಸ್ನ ನರಸಿಂಹಮೂರ್ತಿ ಸೇರಿದಂತೆ ಐದಾರು ಕಾರುಗಳಲ್ಲಿ ಹೊರಗಿನಿಂದ ಬಂದವರು ನನಗೆ ಮುತ್ತಿಗೆ ಹಾಕಿ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಹೀಗೆ ಹೊರಗಿನಿಂದ ಕರೆಸಿ ಗಲಾಟೆ ಮಾಡಿಸುವುದು ಕುಮಾರಸ್ವಾಮಿಗೆ ಶೋಭೆ ತರುವಂತದ್ದಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>'ಕುಮಾರಸ್ವಾಮಿ ನಡೆಗೆ ಬೇಸತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ನ ಬಹುತೇಕ ಮುಖಂಡರು ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದನ್ನು ಸಹಿಸಲು ಅವರಿಗೆ ಆಗುತ್ತಿಲ್ಲ' ಎಂದು ದೂರಿದರು.</p>.<p>'ನಾನು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದರೆ ಅದಕ್ಕೆ ತಡೆ ಒಡ್ಡುತ್ತಿದ್ದಾರೆ. ಮುಂದೆ ಅವರೂ ತಾಲ್ಲೂಕಿಗೆ ಬರುತ್ತಾರೆ. ಆದರೆ ನಾವು ಹೀಗೆ ಮಾಡುವುದಿಲ್ಲ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>