ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದ ಸಂಸದೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭಾಧ್ಯಕ್ಷರು ಲೋಕಸಭೆಯ ಸಭಾಧ್ಯಕ್ಷರನ್ನು ಕರೆಸಿದ್ದಾರೆ. ಇಂತಹ ಅಪರೂಪದ ಸಂದರ್ಭದಲ್ಲಿ ಗೈರಾಗುವುದು ಲೋಕಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದಂತೆ. ಆ ರೀತಿಆಗುವುದು ಬೇಡ ಮತ್ತು ಸಂಸದೀಯ, ಪ್ರಜಾಪ್ರಭುತ್ವದ ಮೌಲ್ಯಎತ್ತಿ ಹಿಡಿಯುವ ಏಕೈಕ ಉದ್ದೇಶದಿಂದ ಕಲಾಪದಲ್ಲಿ ನಮ್ಮ ಪಕ್ಷ ಭಾಗವಹಿಸಿತ್ತು’ ಎಂದರು.