<p><strong>ಬೆಂಗಳೂರು</strong>: ‘ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂಬುದೇ ಕಾಂಗ್ರೆಸ್ ನಾಯಕರ ಕಾರ್ಯಸೂಚಿ. ಅವರಿಗೆ ಬಿಜೆಪಿಗಿಂತ ಜೆಡಿಎಸ್ ಪಕ್ಷದ ಮೇಲೆ ಹೆಚ್ಚು ಸಿಟ್ಟಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.</p>.<p>ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಲಗ್ಗೆರೆಯಲ್ಲಿ ಭಾನುವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಭಯವೊ, ಆಕ್ರೋಶವೊ ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ನಮ್ಮ ಪಕ್ಷವನ್ನು ಮುಗಿಸುವ ಕಾರ್ಯಸೂಚಿಯಲ್ಲೇ ಕೆಲಸ ಮಾಡುತ್ತಿದ್ದಾರೆ’ ಎಂದರು.</p>.<p>‘ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಕಣ್ಣೀರು ಹಾಕಿದ ಮುಖ್ಯಮಂತ್ರಿ ನಾನು ಮಾತ್ರ. ಅಂಥ ವಾತಾವರಣ ದಲ್ಲಿನಾನು ಕೆಲಸ ಮಾಡುತ್ತಿದ್ದೆ. ದೇವೇಗೌಡರ ಕುಟುಂಬವನ್ನು ಹಣ ಕೊಟ್ಟು ಖರೀದಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕುರಿತು ಕುಮಾರಸ್ವಾಮಿ ಮೃದು ಧೋರಣೆ ತಳೆದಿದ್ದಾರೆ ಎಂಬ ಅಪಪ್ರಚಾರ ನಡೆದಿದೆ. ಪಕ್ಷ ಇಲ್ಲಿ ಪ್ರಬಲ ಸ್ಪರ್ಧೆ ನಡೆಸುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂಬುದೇ ಕಾಂಗ್ರೆಸ್ ನಾಯಕರ ಕಾರ್ಯಸೂಚಿ. ಅವರಿಗೆ ಬಿಜೆಪಿಗಿಂತ ಜೆಡಿಎಸ್ ಪಕ್ಷದ ಮೇಲೆ ಹೆಚ್ಚು ಸಿಟ್ಟಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.</p>.<p>ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಲಗ್ಗೆರೆಯಲ್ಲಿ ಭಾನುವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಭಯವೊ, ಆಕ್ರೋಶವೊ ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ನಮ್ಮ ಪಕ್ಷವನ್ನು ಮುಗಿಸುವ ಕಾರ್ಯಸೂಚಿಯಲ್ಲೇ ಕೆಲಸ ಮಾಡುತ್ತಿದ್ದಾರೆ’ ಎಂದರು.</p>.<p>‘ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಕಣ್ಣೀರು ಹಾಕಿದ ಮುಖ್ಯಮಂತ್ರಿ ನಾನು ಮಾತ್ರ. ಅಂಥ ವಾತಾವರಣ ದಲ್ಲಿನಾನು ಕೆಲಸ ಮಾಡುತ್ತಿದ್ದೆ. ದೇವೇಗೌಡರ ಕುಟುಂಬವನ್ನು ಹಣ ಕೊಟ್ಟು ಖರೀದಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>‘ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕುರಿತು ಕುಮಾರಸ್ವಾಮಿ ಮೃದು ಧೋರಣೆ ತಳೆದಿದ್ದಾರೆ ಎಂಬ ಅಪಪ್ರಚಾರ ನಡೆದಿದೆ. ಪಕ್ಷ ಇಲ್ಲಿ ಪ್ರಬಲ ಸ್ಪರ್ಧೆ ನಡೆಸುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>