ಬೆಂಗಳೂರು: ಜೆಡಿಎಸ್ನ ಮೂವರು ನಾಯಕರು ‘ಕೈ’ ಹಿಡಿಯಲು ನಿರ್ಧರಿಸಿದ್ದಾರೆ.
ಮಂಡ್ಯದ ಮಾಜಿ ಶಾಸಕ ಎಂ. ಶ್ರೀನಿವಾಸ್ , ವಿಧಾನ ಪರಿಷತ್ ಮಾಜಿ ಸದಸ್ಯ ನಾಗಮಂಗಲದ ಅಪ್ಪಾಜಿ ಗೌಡ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ ಕಾಂಗ್ರೆಸ್ ಸೇರಲಿರುವ ನಾಯಕರು.
ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.