<p><strong>ಬೆಂಗಳೂರು:</strong> ಬೆಂಗಳೂರು 5 ನಗರ ಪಾಲಿಕೆಗಳಲ್ಲಿ ಪಕ್ಷವನ್ನು ಬಲಪಡಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್.ಡಿ.ದೇವೇಗೌಡ ಅವರು ಟಿ.ಎ.ಶರವಣ ಸೇರಿ 7 ಜನರ ಉನ್ನತ ಮಟ್ಟದ ಸಮಿತಿ ರಚಿಸಿದ್ದಾರೆ.</p><p>ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಚುನಾವಣೆ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ.</p><p>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಶ್ರೀ ಸಿ.ಬಿ.ಸುರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.</p><p>ಯುವ ಜನತಾದಳ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಶ್ರೀ ಎಂ.ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಡಾ.ಶ್ರೀ ಟಿ.ಎ.ಶರವಣ,ಟಿ.ಎಸ್., ಶ್ರೀ ಜವರಾಯಿಗೌಡ,ಮಾಜಿ ಶಾಸಕ ಶ್ರೀ ಕೆ.ಎ.ತಿಪ್ಪೆಸ್ವಾಮಿ ಸದಸ್ಯರಾಗಿ ನೇಮಕವಾಗಿದ್ದಾರೆ.</p><p>ಮಾಜಿ ಶಾಸಕ ಶ್ರೀ ಎಚ್.ಎಂ.ರಮೇಶ ಗೌಡ ಅವರು ಸಂಚಾಲಕರಾಗಿ ನೇಮಕಗೊಂಡಿದ್ದಾರೆ.</p><p>ಈ ಉನ್ನತ ಮಟ್ಟದ ಸಮಿತಿಯು ಜಿಪಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಂಘಟನೆ, ಬಲವರ್ಧನೆ ಸಂಬಂದ ಕಾಲಾನುಕಾಲಕ್ಕೆ ಸಭೆ ನಡೆಸಬೇಕು.ಪಕ್ಷವನ್ನು ಸದೃಢಗೊಳಿಸಲು ಕ್ರಮ ವಹಿಸಬೇಕು. </p><p>ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ವಿಭಾಗಗಳ ಪಕ್ಷದ ಅಧ್ಯಕ್ಷರನ್ನು ಸಭೆಗಳಿಗೆ ಆಹ್ವಾನಿಸಬೇಕು. ಕಾಲ, ಕಾಲಕ್ಕೆ ಉನ್ನತ ಮಟ್ಟದ ಸಮಿತಿ ನಡೆಸುವ ಸಭೆಗಳ ಮಾಹಿತಿಯನ್ನು ಪಕ್ಷದ ರಾಜ್ಯಾಧ್ಯಕ್ಷರ ಗಮನಕ್ಕೆ ಕಾಲಕಾಲಕ್ಕೆ ತರಬೇಕು ಎಂದು ಸನ್ಮಾನ್ಯ ದೇವೇಗೌಡ ಅವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು 5 ನಗರ ಪಾಲಿಕೆಗಳಲ್ಲಿ ಪಕ್ಷವನ್ನು ಬಲಪಡಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್.ಡಿ.ದೇವೇಗೌಡ ಅವರು ಟಿ.ಎ.ಶರವಣ ಸೇರಿ 7 ಜನರ ಉನ್ನತ ಮಟ್ಟದ ಸಮಿತಿ ರಚಿಸಿದ್ದಾರೆ.</p><p>ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಚುನಾವಣೆ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ.</p><p>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಶ್ರೀ ಸಿ.ಬಿ.ಸುರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.</p><p>ಯುವ ಜನತಾದಳ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಶ್ರೀ ಎಂ.ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಡಾ.ಶ್ರೀ ಟಿ.ಎ.ಶರವಣ,ಟಿ.ಎಸ್., ಶ್ರೀ ಜವರಾಯಿಗೌಡ,ಮಾಜಿ ಶಾಸಕ ಶ್ರೀ ಕೆ.ಎ.ತಿಪ್ಪೆಸ್ವಾಮಿ ಸದಸ್ಯರಾಗಿ ನೇಮಕವಾಗಿದ್ದಾರೆ.</p><p>ಮಾಜಿ ಶಾಸಕ ಶ್ರೀ ಎಚ್.ಎಂ.ರಮೇಶ ಗೌಡ ಅವರು ಸಂಚಾಲಕರಾಗಿ ನೇಮಕಗೊಂಡಿದ್ದಾರೆ.</p><p>ಈ ಉನ್ನತ ಮಟ್ಟದ ಸಮಿತಿಯು ಜಿಪಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಂಘಟನೆ, ಬಲವರ್ಧನೆ ಸಂಬಂದ ಕಾಲಾನುಕಾಲಕ್ಕೆ ಸಭೆ ನಡೆಸಬೇಕು.ಪಕ್ಷವನ್ನು ಸದೃಢಗೊಳಿಸಲು ಕ್ರಮ ವಹಿಸಬೇಕು. </p><p>ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ವಿಭಾಗಗಳ ಪಕ್ಷದ ಅಧ್ಯಕ್ಷರನ್ನು ಸಭೆಗಳಿಗೆ ಆಹ್ವಾನಿಸಬೇಕು. ಕಾಲ, ಕಾಲಕ್ಕೆ ಉನ್ನತ ಮಟ್ಟದ ಸಮಿತಿ ನಡೆಸುವ ಸಭೆಗಳ ಮಾಹಿತಿಯನ್ನು ಪಕ್ಷದ ರಾಜ್ಯಾಧ್ಯಕ್ಷರ ಗಮನಕ್ಕೆ ಕಾಲಕಾಲಕ್ಕೆ ತರಬೇಕು ಎಂದು ಸನ್ಮಾನ್ಯ ದೇವೇಗೌಡ ಅವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>