ರಾಮನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಐಎಎಸ್ ಅಧಿಕಾರಿ ಬದಲು ಮಂತ್ರಿ ಮನೆಯ ಜವಾನರಾಗಿ ಕೆಲಸ ಮಾಡುತ್ತಿದ್ದಾರೆ. ಕೋರ್ಟ್ ಆದೇಶಗಳನ್ನೂ ಧಿಕ್ಕರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಜೆಡಿಎಸ್ ಕಾರ್ಯಕರ್ತರು ಟಾರ್ಗೆಟ್ ಆಗಿದ್ದಾರೆ. ಅಧಿಕಾರಿ ನಡವಳಿಕೆ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದ್ದೇನೆ ಎಂದರು.