ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿ ಬಂದ ಅವರು, ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬೆಂಬಲಿಗರ ಜತೆ ಬಂದಿದ್ದ ಅವರು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾನು ರಾಗಿ ಕಳ್ಳ ಅಂದಿದ್ದರು, ನಾನು ಏನೂ ಕದ್ದಿಲ್ಲ ಅಂತ ಆಣೆ– ಪ್ರಮಾಣ ಮಾಡಿದ್ದೇನೆ. ಯಾಕೆ ಈ ಆರೋಪ ಮಾಡಿದ್ದಾರೆ ಅನ್ನುವುದು ನನಗೇ ಗೊತ್ತಿಲ್ಲ. ರೈತರಿಗೆ ರಾಗಿ ಕೊಡಿಸಲು ಸಾಕಷ್ಟು ಹೋರಾಟ ಮಾಡಿದ್ದೇನೆ. ಬಿಜೆಪಿ ಮುಖಂಡರು ನನ್ನ ವಿರುದ್ಧ ಆರೋಪ ಮಾಡಿದ್ದರು. ಅವರನ್ನೂ ಧರ್ಮಸ್ಥಳಕ್ಕೆ ಆಹ್ವಾನಿಸಿದ್ದೆ. ಈಗ ಅವರು ಏನು ದಾಖಲೆ ಇದೆ ಅದನ್ನು ಬಿಡುಗಡೆಗೊಳಿಸಲಿ. ನಿರಪರಾಧಿಗಳನ್ನು ಸಾರ್ವಜನಿಕರವಾಗಿ ನಿಂದನೆ ಮಾಡುವುದು ಸರಿಯಲ್ಲ’ ಎಂದರು.