<p><strong>ಬೆಂಗಳೂರು:</strong> ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಬಿ.ಎಸ್.ಯಡಿಯೂರಪ್ಪ ಅವರನ್ನು ಶುಕ್ರವಾರ ಬೆಳಿಗ್ಗೆ ಮುಖ್ಯ<br />ಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.</p>.<p>ಮೈತ್ರಿ ಸರ್ಕಾರದ ಪತನದ ಒಂದು ವರ್ಷದ ಬಳಿಕ ಇದೇ ಮೊದಲ ಬಾರಿಗೆ ಈ ಇಬ್ಬರು ನಾಯಕರು ಚರ್ಚಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ಬಗೆಯ ಊಹಾಪೋಹ, ಲೆಕ್ಕಾಚಾರಗಳಿಗೂ ದಾರಿ ಮಾಡಿಕೊಟ್ಟಿದೆ.</p>.<p>ಸಭೆಯ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಇಬ್ಬರು ನಾಯಕರು ‘ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ’ ಎಂದಷ್ಟೇ ಹೇಳಿದ್ದಾರೆ.</p>.<p>‘ಯಡಿಯೂರಪ್ಪನವರಿಗೆ ವಯಸ್ಸಾಗಿದ್ದು, ರಾಜ್ಯದಲ್ಲಿ ಮತ್ತೊಂದು ಅವಧಿಗೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಅವರ ಆಕಾಂಕ್ಷೆಯಾಗಿಲ್ಲ.ಈಗ ಬಹುಪಾಲು ಅಧಿಕಾರವನ್ನು ಅವರ ಮಕ್ಕಳೇ ನಡೆಸುತ್ತಿದ್ದಾರೆ. ಅವರೇ ಅಧಿಕಾರದಲ್ಲಿ ಮುಂದುವರಿದರೆ ಪಕ್ಷಕ್ಕೆ ಉಳಿಗಾಲವಿಲ್ಲ. ಪಕ್ಷದ ಹಿತಕ್ಕಾಗಿ ಮುಖ್ಯಮಂತ್ರಿ ಬದಲಾವಣೆಯಾಗ<br />ಬೇಕು’ ಎಂಬ ವಾದವನ್ನು ಬಿಜೆಪಿಯಒಂದು ಗುಂಪು ಬಲವಾಗಿ ಮಂಡಿಸುತ್ತಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ ಶೆಟ್ಟರ್, ಸಿ.ಟಿ. ರವಿ ಮತ್ತಿತರರು ದೆಹಲಿಗೆ ಭೇಟಿ ನೀಡಿ ವರಿಷ್ಠರನ್ನು ಭೇಟಿ ಮಾಡಿ ಬರುತ್ತಿರುವುದು ಇದರ ಭಾಗವಾಗಿಯೇ ಎಂಬ ಚರ್ಚೆಯೂ ಪಕ್ಷದಲ್ಲಿ ನಡೆದಿದೆ.</p>.<p>‘ಹಾಗೊಂದು ವೇಳೆ ಯಡಿಯೂರಪ್ಪ ಅವರಿಗೆ ಪಕ್ಷ ಕೈಕೊಟ್ಟರೆ ಆಗ ಕುಮಾರಸ್ವಾಮಿ ಬೆಂಬಲಕ್ಕೆ ನಿಲ್ಲಲಿದ್ದಾರೆ. ಅಂತಹ ಕಸರತ್ತಿಗೆ ಕೈಹಾಕಬೇಡಿ’ ಎಂಬ ಸಂದೇಶವನ್ನು ರವಾನಿಸುವುದು ಈ ನಾಯಕರ ಭೇಟಿಯ ಹಿಂದಿನ ಉದ್ದೇಶ ಎಂದೂ ಹೇಳಲಾಗುತ್ತಿದೆ.</p>.<p>‘ರಾಜಕೀಯದ ಚರ್ಚೆ ನಡೆದಿಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಆದ ನಷ್ಟದ ಪರಿಹಾರಕ್ಕೆ ಕೋರಲು ಬಂದಿದ್ದರು’ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p><strong>ನಾಯಕರ ಮಧ್ಯೆ ರಹಸ್ಯ ಮಾತುಕತೆ</strong></p>.<p>ದಾಸರಹಳ್ಳಿ ಸೇರಿದಂತೆ ಜೆಡಿಎಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಲು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.</p>.<p>ಆದರೆ, ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಅವರನ್ನು ಮುಂದಿಟ್ಟುಕೊಂಡು ಅನುದಾನದ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸಿದರು. ಬಳಿಕ, ಮಂಜುನಾಥ್ ಅವರನ್ನು ಕೊಠಡಿಯಿಂದ ಹೊರಗೆ ಕಳುಹಿಸಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಇಬ್ಬರೇ ರಹಸ್ಯ ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.</p>.<p>ದಾಸರಹಳ್ಳಿ ಸೇರಿದಂತೆ ಜೆಡಿಎಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಲು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.</p>.<p>ಆದರೆ, ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಅವರನ್ನು ಮುಂದಿಟ್ಟುಕೊಂಡು ಅನುದಾನದ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸಿದರು. ಬಳಿಕ, ಮಂಜುನಾಥ್ ಅವರನ್ನು ಕೊಠಡಿಯಿಂದ ಹೊರಗೆ ಕಳುಹಿಸಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಇಬ್ಬರೇ ರಹಸ್ಯ ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಬಿ.ಎಸ್.ಯಡಿಯೂರಪ್ಪ ಅವರನ್ನು ಶುಕ್ರವಾರ ಬೆಳಿಗ್ಗೆ ಮುಖ್ಯ<br />ಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.</p>.<p>ಮೈತ್ರಿ ಸರ್ಕಾರದ ಪತನದ ಒಂದು ವರ್ಷದ ಬಳಿಕ ಇದೇ ಮೊದಲ ಬಾರಿಗೆ ಈ ಇಬ್ಬರು ನಾಯಕರು ಚರ್ಚಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ಬಗೆಯ ಊಹಾಪೋಹ, ಲೆಕ್ಕಾಚಾರಗಳಿಗೂ ದಾರಿ ಮಾಡಿಕೊಟ್ಟಿದೆ.</p>.<p>ಸಭೆಯ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಇಬ್ಬರು ನಾಯಕರು ‘ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ’ ಎಂದಷ್ಟೇ ಹೇಳಿದ್ದಾರೆ.</p>.<p>‘ಯಡಿಯೂರಪ್ಪನವರಿಗೆ ವಯಸ್ಸಾಗಿದ್ದು, ರಾಜ್ಯದಲ್ಲಿ ಮತ್ತೊಂದು ಅವಧಿಗೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಅವರ ಆಕಾಂಕ್ಷೆಯಾಗಿಲ್ಲ.ಈಗ ಬಹುಪಾಲು ಅಧಿಕಾರವನ್ನು ಅವರ ಮಕ್ಕಳೇ ನಡೆಸುತ್ತಿದ್ದಾರೆ. ಅವರೇ ಅಧಿಕಾರದಲ್ಲಿ ಮುಂದುವರಿದರೆ ಪಕ್ಷಕ್ಕೆ ಉಳಿಗಾಲವಿಲ್ಲ. ಪಕ್ಷದ ಹಿತಕ್ಕಾಗಿ ಮುಖ್ಯಮಂತ್ರಿ ಬದಲಾವಣೆಯಾಗ<br />ಬೇಕು’ ಎಂಬ ವಾದವನ್ನು ಬಿಜೆಪಿಯಒಂದು ಗುಂಪು ಬಲವಾಗಿ ಮಂಡಿಸುತ್ತಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ ಶೆಟ್ಟರ್, ಸಿ.ಟಿ. ರವಿ ಮತ್ತಿತರರು ದೆಹಲಿಗೆ ಭೇಟಿ ನೀಡಿ ವರಿಷ್ಠರನ್ನು ಭೇಟಿ ಮಾಡಿ ಬರುತ್ತಿರುವುದು ಇದರ ಭಾಗವಾಗಿಯೇ ಎಂಬ ಚರ್ಚೆಯೂ ಪಕ್ಷದಲ್ಲಿ ನಡೆದಿದೆ.</p>.<p>‘ಹಾಗೊಂದು ವೇಳೆ ಯಡಿಯೂರಪ್ಪ ಅವರಿಗೆ ಪಕ್ಷ ಕೈಕೊಟ್ಟರೆ ಆಗ ಕುಮಾರಸ್ವಾಮಿ ಬೆಂಬಲಕ್ಕೆ ನಿಲ್ಲಲಿದ್ದಾರೆ. ಅಂತಹ ಕಸರತ್ತಿಗೆ ಕೈಹಾಕಬೇಡಿ’ ಎಂಬ ಸಂದೇಶವನ್ನು ರವಾನಿಸುವುದು ಈ ನಾಯಕರ ಭೇಟಿಯ ಹಿಂದಿನ ಉದ್ದೇಶ ಎಂದೂ ಹೇಳಲಾಗುತ್ತಿದೆ.</p>.<p>‘ರಾಜಕೀಯದ ಚರ್ಚೆ ನಡೆದಿಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಆದ ನಷ್ಟದ ಪರಿಹಾರಕ್ಕೆ ಕೋರಲು ಬಂದಿದ್ದರು’ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p><strong>ನಾಯಕರ ಮಧ್ಯೆ ರಹಸ್ಯ ಮಾತುಕತೆ</strong></p>.<p>ದಾಸರಹಳ್ಳಿ ಸೇರಿದಂತೆ ಜೆಡಿಎಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಲು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.</p>.<p>ಆದರೆ, ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಅವರನ್ನು ಮುಂದಿಟ್ಟುಕೊಂಡು ಅನುದಾನದ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸಿದರು. ಬಳಿಕ, ಮಂಜುನಾಥ್ ಅವರನ್ನು ಕೊಠಡಿಯಿಂದ ಹೊರಗೆ ಕಳುಹಿಸಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಇಬ್ಬರೇ ರಹಸ್ಯ ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.</p>.<p>ದಾಸರಹಳ್ಳಿ ಸೇರಿದಂತೆ ಜೆಡಿಎಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಲು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.</p>.<p>ಆದರೆ, ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಅವರನ್ನು ಮುಂದಿಟ್ಟುಕೊಂಡು ಅನುದಾನದ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸಿದರು. ಬಳಿಕ, ಮಂಜುನಾಥ್ ಅವರನ್ನು ಕೊಠಡಿಯಿಂದ ಹೊರಗೆ ಕಳುಹಿಸಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಇಬ್ಬರೇ ರಹಸ್ಯ ಚರ್ಚೆ ನಡೆಸಿದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>