<p><strong>ಬೆಂಗಳೂರು: </strong>‘ರಾಜ್ಯದ ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ₹500 ಕೋಟಿ ಆಸ್ತಿ ಸಂಪಾದಿಸುತ್ತಾರೆ. ಆಂಧ್ರ ಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಜಾಗ ಖರೀದಿಸುತ್ತಾರೆ. ಸೇವೆಯಿಂದ ನಿವೃತ್ತರಾದ ಕೂಡಲೇ ನಮ್ಮ ವಿರುದ್ಧವೇ ಚುನಾವಣೆಗೆ ನಿಲ್ಲುತ್ತಾರೆ’ ಎಂದು ಜೆಡಿಎಸ್ನ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.</p>.<p>ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಸಾ.ರಾ.ಮಹೇಶ್, ‘ನಾವು ₹10 ದುಡ್ಡು ಹೊಡೆದರೂ ಅದನ್ನು ಚುನಾವಣೆ ವೇಳೆ ಜನರಿಗೆ ಕೊಡುತ್ತೇವೆ. ಅವರು ಯಾರಿಗೆ ಕೊಡುತ್ತಾರೆ’ ಎಂದು ಪ್ರಶ್ನಿಸಿದರು.</p>.<p>‘ಸ್ವಚ್ಛ ಮೈಸೂರು ಹೆಸರಿನಲ್ಲಿ ₹ 4 ಬ್ಯಾಗ್ ಅನ್ನು ₹69ಕ್ಕೆ ಖರೀದಿ ಮಾಡಲಾಯಿತು. ಈ ಯೋಜನೆಯಲ್ಲಿ ಹಿಂದಿನ ಜಿಲ್ಲಾಧಿಕಾರಿ ಕಾಲದಲ್ಲಿ ₹ 6.5 ಕೋಟಿ ಅಕ್ರಮ ನಡೆದಿದೆ. ಈ ಬಗ್ಗೆ ನಾವು ಸತ್ಯ ಹೇಳಿದರೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ನಮ್ಮ ವಿರುದ್ಧವೇ ಅಭಿಯಾನ ನಡೆಯುತ್ತದೆ. 20ರಿಂದ 40 ವಯಸ್ಸಿನ ಕೆಲವು ಮಹಿಳಾ ಅಧಿಕಾರಿಗಳ ವಿರುದ್ಧ ನಾವು ಧ್ವನಿ ಎತ್ತುವಂತೆಯೇ ಇಲ್ಲ’ ಎಂದು ಅವರು ಹೇಳಿದರು.</p>.<p>‘ಸಚಿವರ ಮನೆಗಳ ನವೀಕರಣಕ್ಕೆ ₹5 ಲಕ್ಷವನ್ನು ಸರ್ಕಾರ ಕೊಡುತ್ತದೆ. ಜಿಲ್ಲಾಧಿಕಾರಿಯ ಮನೆ ನವೀಕರಣಕ್ಕೆ ₹50 ಲಕ್ಷ ಕೊಡಲಾಗಿದೆ. ಅವರು 5 ಎಕರೆ ಜಾಗದ ಮನೆಯಲ್ಲಿ ವಾಸಿಸುತ್ತಾರೆ. ಅಲ್ಲಿಗೆ ಜನರು ಹೋಗಲು ಸಾಧ್ಯವೇ. ಅಧಿಕಾರಿಗಳಿಗೆ ಅಷ್ಟು ದೊಡ್ಡ ಮನೆ ಏಕೆ’ ಎಂದೂ ಪ್ರಶ್ನಿಸಿದರು.</p>.<p>‘ಪ್ರಥಮದರ್ಜೆ ಸಹಾಯಕರು, ಕೆಎಎಸ್ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ಈವರೆಗೆ ಒಬ್ಬನೇ ಒಬ್ಬ ಐಎಎಸ್ ಅಧಿಕಾರಿ ಮನೆ ಮೇಲೆ ದಾಳಿ ನಡೆದ ಉದಾಹರಣೆ ಇದೆಯೇ’ ಎಂದು ಪ್ರಶ್ನಿಸಿದರು.</p>.<p>ಎಚ್.ಡಿ.ಕುಮಾರಸ್ವಾಮಿ, ‘ಮೈಸೂರಿನಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು ಜಗಳ ಮಾಡಿಕೊಂಡರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಇಬ್ಬರಿಗೂ ಸಮನ್ಸ್ ನೀಡಿ ಕರೆಸಿಕೊಳ್ಳಬೇಕಿತ್ತು. ಆದರೆ, ಮುಖ್ಯ ಕಾರ್ಯದರ್ಶಿಯವರೇ ಮೈಸೂರಿಗೆ ಹೋದರು. ಇದು ಒಳ್ಳೆಯ ಬೆಳವಣಿಗೆ ಅಲ್ಲ’ ಎಂದರು.</p>.<p>‘ತಕರಾರು ಇದ್ದರೆ ಅಧಿಕಾರಿಗಳು ಮುಖ್ಯ ಕಾರ್ಯದರ್ಶಿ ಅವರಿಗೆ ದಾಖಲೆಗಳನ್ನು ನೀಡಬೇಕು. ನೇರವಾಗಿ ಮಾಧ್ಯಮದ ಮುಂದೆ ಮಾತನಾಡಲು ಸೇವಾ ನಿಯಮದ ಪ್ರಕಾರ ಅವಕಾಶ ಇಲ್ಲ’ ಎಂದರು.</p>.<p>ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಮುಖ್ಯ ಕಾರ್ಯದರ್ಶಿ ಅವರಿಗೆ ಹಲವು ಸಲ ಕರೆ ಮಾಡಿ ಇಂತದ್ದಕ್ಕೆ ಅವಕಾಶ ನೀಡಬೇಡಿ ಎಂದು ಹೇಳಿದ್ದೆ. ಮಾಧ್ಯಮದ ಮುಂದೆ ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಕಂದಾಯ ಸಚಿವ ಆರ್.ಅಶೋಕ, ‘ಕೆಲ ಅಧಿಕಾರಿಗಳು ಓವರ್ ಆ್ಯಕ್ಟಿಂಗ್ ಮಾಡುತ್ತಾರೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ರಾಜ್ಯದ ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ₹500 ಕೋಟಿ ಆಸ್ತಿ ಸಂಪಾದಿಸುತ್ತಾರೆ. ಆಂಧ್ರ ಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಜಾಗ ಖರೀದಿಸುತ್ತಾರೆ. ಸೇವೆಯಿಂದ ನಿವೃತ್ತರಾದ ಕೂಡಲೇ ನಮ್ಮ ವಿರುದ್ಧವೇ ಚುನಾವಣೆಗೆ ನಿಲ್ಲುತ್ತಾರೆ’ ಎಂದು ಜೆಡಿಎಸ್ನ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.</p>.<p>ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಸಾ.ರಾ.ಮಹೇಶ್, ‘ನಾವು ₹10 ದುಡ್ಡು ಹೊಡೆದರೂ ಅದನ್ನು ಚುನಾವಣೆ ವೇಳೆ ಜನರಿಗೆ ಕೊಡುತ್ತೇವೆ. ಅವರು ಯಾರಿಗೆ ಕೊಡುತ್ತಾರೆ’ ಎಂದು ಪ್ರಶ್ನಿಸಿದರು.</p>.<p>‘ಸ್ವಚ್ಛ ಮೈಸೂರು ಹೆಸರಿನಲ್ಲಿ ₹ 4 ಬ್ಯಾಗ್ ಅನ್ನು ₹69ಕ್ಕೆ ಖರೀದಿ ಮಾಡಲಾಯಿತು. ಈ ಯೋಜನೆಯಲ್ಲಿ ಹಿಂದಿನ ಜಿಲ್ಲಾಧಿಕಾರಿ ಕಾಲದಲ್ಲಿ ₹ 6.5 ಕೋಟಿ ಅಕ್ರಮ ನಡೆದಿದೆ. ಈ ಬಗ್ಗೆ ನಾವು ಸತ್ಯ ಹೇಳಿದರೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ನಮ್ಮ ವಿರುದ್ಧವೇ ಅಭಿಯಾನ ನಡೆಯುತ್ತದೆ. 20ರಿಂದ 40 ವಯಸ್ಸಿನ ಕೆಲವು ಮಹಿಳಾ ಅಧಿಕಾರಿಗಳ ವಿರುದ್ಧ ನಾವು ಧ್ವನಿ ಎತ್ತುವಂತೆಯೇ ಇಲ್ಲ’ ಎಂದು ಅವರು ಹೇಳಿದರು.</p>.<p>‘ಸಚಿವರ ಮನೆಗಳ ನವೀಕರಣಕ್ಕೆ ₹5 ಲಕ್ಷವನ್ನು ಸರ್ಕಾರ ಕೊಡುತ್ತದೆ. ಜಿಲ್ಲಾಧಿಕಾರಿಯ ಮನೆ ನವೀಕರಣಕ್ಕೆ ₹50 ಲಕ್ಷ ಕೊಡಲಾಗಿದೆ. ಅವರು 5 ಎಕರೆ ಜಾಗದ ಮನೆಯಲ್ಲಿ ವಾಸಿಸುತ್ತಾರೆ. ಅಲ್ಲಿಗೆ ಜನರು ಹೋಗಲು ಸಾಧ್ಯವೇ. ಅಧಿಕಾರಿಗಳಿಗೆ ಅಷ್ಟು ದೊಡ್ಡ ಮನೆ ಏಕೆ’ ಎಂದೂ ಪ್ರಶ್ನಿಸಿದರು.</p>.<p>‘ಪ್ರಥಮದರ್ಜೆ ಸಹಾಯಕರು, ಕೆಎಎಸ್ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ಈವರೆಗೆ ಒಬ್ಬನೇ ಒಬ್ಬ ಐಎಎಸ್ ಅಧಿಕಾರಿ ಮನೆ ಮೇಲೆ ದಾಳಿ ನಡೆದ ಉದಾಹರಣೆ ಇದೆಯೇ’ ಎಂದು ಪ್ರಶ್ನಿಸಿದರು.</p>.<p>ಎಚ್.ಡಿ.ಕುಮಾರಸ್ವಾಮಿ, ‘ಮೈಸೂರಿನಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು ಜಗಳ ಮಾಡಿಕೊಂಡರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಇಬ್ಬರಿಗೂ ಸಮನ್ಸ್ ನೀಡಿ ಕರೆಸಿಕೊಳ್ಳಬೇಕಿತ್ತು. ಆದರೆ, ಮುಖ್ಯ ಕಾರ್ಯದರ್ಶಿಯವರೇ ಮೈಸೂರಿಗೆ ಹೋದರು. ಇದು ಒಳ್ಳೆಯ ಬೆಳವಣಿಗೆ ಅಲ್ಲ’ ಎಂದರು.</p>.<p>‘ತಕರಾರು ಇದ್ದರೆ ಅಧಿಕಾರಿಗಳು ಮುಖ್ಯ ಕಾರ್ಯದರ್ಶಿ ಅವರಿಗೆ ದಾಖಲೆಗಳನ್ನು ನೀಡಬೇಕು. ನೇರವಾಗಿ ಮಾಧ್ಯಮದ ಮುಂದೆ ಮಾತನಾಡಲು ಸೇವಾ ನಿಯಮದ ಪ್ರಕಾರ ಅವಕಾಶ ಇಲ್ಲ’ ಎಂದರು.</p>.<p>ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಮುಖ್ಯ ಕಾರ್ಯದರ್ಶಿ ಅವರಿಗೆ ಹಲವು ಸಲ ಕರೆ ಮಾಡಿ ಇಂತದ್ದಕ್ಕೆ ಅವಕಾಶ ನೀಡಬೇಡಿ ಎಂದು ಹೇಳಿದ್ದೆ. ಮಾಧ್ಯಮದ ಮುಂದೆ ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಕಂದಾಯ ಸಚಿವ ಆರ್.ಅಶೋಕ, ‘ಕೆಲ ಅಧಿಕಾರಿಗಳು ಓವರ್ ಆ್ಯಕ್ಟಿಂಗ್ ಮಾಡುತ್ತಾರೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>