ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಿದ್ಧತೆ ಕುರಿತು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಸಮ್ಮುಖದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪಕ್ಷದ ಮುಂದಿನ ಅಧ್ಯಕ್ಷರ ಆಯ್ಕೆ, ಸಂಘಟನೆಯ ಬಲವರ್ಧನೆ ಕುರಿತು ಸಮಾಲೋಚನೆ ನಡೆಯಿತು. ಬ್ರಾಹ್ಮಣರಾದ ದಿನೇಶ್ ಗುಂಡೂರಾವ್ ಕಾಂಗ್ರೆಸ್ಗೆ ಹಾಗೂ ಲಿಂಗಾಯತರಾದ ಬಿ.ಎಸ್. ಯಡಿಯೂರಪ್ಪ ಬಿಜೆಪಿಗೆ ಅಧ್ಯಕ್ಷರಾಗಿದ್ದಾರೆ. ಈ ಎರಡೂ ಸಮುದಾಯಗಳು ಜೆಡಿಎಸ್ ಬೆನ್ನಿಗೆ ನಿಂತಿರುವುದು ಕಡಿಮೆ. ಹೀಗಿರುವಾಗ ಹಿಂದು
ಳಿದ ಸಮುದಾಯಕ್ಕೆ ಸೇರಿದವರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ಸಲಹೆಗಳು ಬಂದಿವೆ.