‘ವಿರೋಧ ಪಕ್ಷದ ಸ್ಥಾನದಲ್ಲಿ ಇದ್ದುಕೊಂಡು ವಿರೋಧ ಪಕ್ಷವನ್ನೇ ನಿಂದಿಸುವ ಅಪರೂಪದ ಜನ ಪ್ರತಿನಿಧಿಯಾದ ಕುಮಾರಸ್ವಾಮಿ, ಮಾತಿನಲ್ಲಷ್ಟೆ ಮುಸ್ಲಿಂ ಪ್ರೀತಿ ತೋರಿಸದೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಮುಸ್ಲಿಂ ಅಭ್ಯರ್ಥಿ ರಾಜ್ಯಸಭೆ ಪ್ರವೇಶಿಸಿದರೆ, ಈ ಹೊತ್ತಿನ ಕೆಟ್ಟ ಮುಸ್ಲಿಂ ದ್ವೇಷದ ಸಂದರ್ಭದಲ್ಲಿ ಆ ಬಗ್ಗೆ ಧ್ವನಿ ಎತ್ತುವ ಅವರ ಶಕ್ತಿ ಹೆಚ್ಚಾಗುವುದಿಲ್ಲವೇ? ಎಲ್ಲವೂ ಇಷ್ಟೊಂದು ನೇರವಾಗಿ ಮತ್ತು ಸ್ಪಷ್ಟವಾಗಿ ಇದ್ದಾಗಲೂ ಕೂಡಾ ಜೆಡಿಎಸ್ ಅಸೂಕ್ಷ್ಮತೆಯಿಂದ ವರ್ತಿಸಿದರೆ ಹೇಗೆ?’ ಎಂದೂ ಅವರೂ ಕೇಳಿದ್ದಾರೆ.