<p><strong>ಬೆಂಗಳೂರು</strong>: ‘ರಾಜ್ಯ ರಾಜಕೀಯದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಅನಿವಾರ್ಯವಾಗಲಿದೆ. 2023ರ ವಿಧಾನಸಭಾ ಚುನಾವಣೆ ಬಳಿಕ ಎರಡೂ ಪಕ್ಷಗಳು ತಮ್ಮ ಮನೆ ಬಾಗಿಲಿಗೆ ಬರುವುದು ನಿಶ್ಚಿತ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.</p>.<p>ಪಕ್ಷದ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘2023ರ ಚುನಾವಣೆವರೆಗೂ ಈ ರೀತಿ ಪಕ್ಷ ಸಂಘಟನೆ ಮಾಡುತ್ತೇನೆ. ಜನರ ಬಳಿ ಹೋಗಿ ಎಲ್ಲವನ್ನೂ ಹೇಳುತ್ತೇನೆ’ ಎಂದರು.</p>.<p>‘ನಾನು ಬಿಜೆಪಿಯವನಲ್ಲ. ಆದರೆ, ಕಾಂಗ್ರೆಸ್ನಿಂದ ಮುಖ್ಯಮಂತ್ರಿ ಆಗಲು ಹೊರಟಿದ್ದವರೇ ನಮ್ಮನ್ನು ಬಿಜೆಪಿಯ ‘ಬಿ ಟೀಂ’ ಎಂದು ಆರೋಪಿಸಿದರು. ರಾಹುಲ್ ಗಾಂಧಿ ಕೂಡ ಹಾಸನದಲ್ಲಿ ಅದೇ ಮಾತನಾಡಿದರು. ಯಾರೋ ಹೇಳಿಕೊಟ್ಟಿದ್ದನ್ನೇ ಅವರು ಮಾಧ್ಯಮಗಳ ಎದುರು ಹೇಳಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಮೀರ್ ಅಹಮ್ಮದ್ ಜೆಡಿಎಸ್ ಶಾಸಕರನ್ನು ಬಿಜೆಪಿ ಜತೆ ಕರೆದುಕೊಂಡು ಹೋದವರು. ಅವರು ಸಿದ್ದರಾಮಯ್ಯ ಅವರಿಗೆ ಸ್ವಚ್ಛವಾಗಿ ಕಾಣುತ್ತಾರೆ. 150 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸುತ್ತದೆ ಎಂದು ಹೇಳುತ್ತಾರೆ. ಆದರೆ, ತಮಿಳುನಾಡು, ದೆಹಲಿ, ಒಡಿಶಾದಲ್ಲಿ ಕಾಂಗ್ರೆಸ್ ಪಕ್ಷದ ಕತೆ ಏನಾಗಿದೆ ನೋಡಲಿ ಎಂದರು.</p>.<p>ಕಲಬುರ್ಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬೆಂಬಲ ನೀಡುವ ಕುರಿತು ಕೇಳಿದಾಗ, ‘ಆ ಬಗ್ಗೆ ಈಗ ಏನನ್ನೂ ಹೇಳುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯ ರಾಜಕೀಯದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಅನಿವಾರ್ಯವಾಗಲಿದೆ. 2023ರ ವಿಧಾನಸಭಾ ಚುನಾವಣೆ ಬಳಿಕ ಎರಡೂ ಪಕ್ಷಗಳು ತಮ್ಮ ಮನೆ ಬಾಗಿಲಿಗೆ ಬರುವುದು ನಿಶ್ಚಿತ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.</p>.<p>ಪಕ್ಷದ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘2023ರ ಚುನಾವಣೆವರೆಗೂ ಈ ರೀತಿ ಪಕ್ಷ ಸಂಘಟನೆ ಮಾಡುತ್ತೇನೆ. ಜನರ ಬಳಿ ಹೋಗಿ ಎಲ್ಲವನ್ನೂ ಹೇಳುತ್ತೇನೆ’ ಎಂದರು.</p>.<p>‘ನಾನು ಬಿಜೆಪಿಯವನಲ್ಲ. ಆದರೆ, ಕಾಂಗ್ರೆಸ್ನಿಂದ ಮುಖ್ಯಮಂತ್ರಿ ಆಗಲು ಹೊರಟಿದ್ದವರೇ ನಮ್ಮನ್ನು ಬಿಜೆಪಿಯ ‘ಬಿ ಟೀಂ’ ಎಂದು ಆರೋಪಿಸಿದರು. ರಾಹುಲ್ ಗಾಂಧಿ ಕೂಡ ಹಾಸನದಲ್ಲಿ ಅದೇ ಮಾತನಾಡಿದರು. ಯಾರೋ ಹೇಳಿಕೊಟ್ಟಿದ್ದನ್ನೇ ಅವರು ಮಾಧ್ಯಮಗಳ ಎದುರು ಹೇಳಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಜಮೀರ್ ಅಹಮ್ಮದ್ ಜೆಡಿಎಸ್ ಶಾಸಕರನ್ನು ಬಿಜೆಪಿ ಜತೆ ಕರೆದುಕೊಂಡು ಹೋದವರು. ಅವರು ಸಿದ್ದರಾಮಯ್ಯ ಅವರಿಗೆ ಸ್ವಚ್ಛವಾಗಿ ಕಾಣುತ್ತಾರೆ. 150 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸುತ್ತದೆ ಎಂದು ಹೇಳುತ್ತಾರೆ. ಆದರೆ, ತಮಿಳುನಾಡು, ದೆಹಲಿ, ಒಡಿಶಾದಲ್ಲಿ ಕಾಂಗ್ರೆಸ್ ಪಕ್ಷದ ಕತೆ ಏನಾಗಿದೆ ನೋಡಲಿ ಎಂದರು.</p>.<p>ಕಲಬುರ್ಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬೆಂಬಲ ನೀಡುವ ಕುರಿತು ಕೇಳಿದಾಗ, ‘ಆ ಬಗ್ಗೆ ಈಗ ಏನನ್ನೂ ಹೇಳುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>