‘ಕುಮಾರಸ್ವಾಮಿ ಅವರ ಮೈ ಬಣ್ಣದ ಕುರಿತು ಚುನಾವಣಾ ಪ್ರಚಾರ ಸಭೆಯಲ್ಲಿ ಜಮೀರ್ ಅಹಮ್ಮದ್ ಕೀಳಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಜನಾಂಗೀಯ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಬೇಕು. ಜಮೀರ್ ಅಹಮ್ಮದ್ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು’ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು, ಜಮೀರ್ ಮನೆಯ ಎದುರು ಧರಣಿ ಮುಂದುವರಿಸಿದರು.