‘ಜೆಟ್ಲ್ಯಾಗ್ ಪಬ್’ನಲ್ಲಿ ಜ. 3ರಂದು ಮುಂಜಾನೆವರೆಗೂ ಪಾರ್ಟಿ ಆಯೋಜಿಸಿದ್ದ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಚಿತ್ರರಂಗದ ಎಂಟು ಮಂದಿ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ಶುಕ್ರವಾರ ವಿಚಾರಣೆಗೆ ಹಾಜರಾಗಿ, ನೋಟಿಸ್ಗೆ ಉತ್ತರಿಸಿದ್ದರು. ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ನಟರಾದ ‘ನೀನಾಸಂ’ ಸತೀಶ್, ಡಾಲಿ ಧನಂಜಯ್, ಚಿಕ್ಕಣ್ಣ, ಅಭಿಷೇಕ್ ಅಂಬರೀಷ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ವಿಚಾರಣೆಗೆ ಹಾಜರಾಗಿದ್ದರು.