‘ರಾಜ್ಯದಲ್ಲಿ ಹೂಡಿಕೆ ಮಾಡಲು ಆಹ್ವಾನಿಸಿದ ಮೇಲೆ, ಲೀಸ್ ಕಮ್ ಸೇಲ್ ಆಧಾರದ ಮೇಲೆ ನೀಡಿರುವ ಭೂಮಿಯನ್ನು ಅವರಿಗೆ ಮಾರಬೇಕು. ಗುತ್ತಿಗೆ ಅವಧಿ ಮುಗಿದ ಬಳಿಕ ಅದನ್ನು ಮೊದಲೇ ನಿಗದಿಪಡಿಸಿದ ಬೆಲೆಗೆ ಮಾರಾಟ ಮಾಡಬೇಕು. ಹೀಗೆ ಮಾಡದೇ ಇದ್ದರೆ ಹೂಡಿಕೆದಾರರು ರಾಜ್ಯಕ್ಕೆ ಬರುವುದಿಲ್ಲ. ಕೈಗಾರಿಕೆಗಳು ಅಭಿವೃದ್ಧಿಯಾಗದೇ ಇದ್ದರೆ, ರಾಜ್ಯದ ವರಮಾನಕ್ಕೆ ಪೆಟ್ಟು ಬೀಳುತ್ತದೆ. ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತದೆ' ಎಂದು ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ ಶೆಟ್ಟಿ ತಿಳಿಸಿದರು.