<p><strong>ಬೆಳಗಾವಿ:</strong> ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ಹಣ ವಂಚಿಸಿದ ಬಗ್ಗೆ ದೂರು ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರೂ ಪತ್ರ ಬರೆದಿದ್ದರು. ವಂಚನೆ ಒಳಗಾದವರು ದೂರು ದಾಖಲಿಸಲು ಮುಂದೆ ಬಾರದ ಕಾರಣ, ಪ್ರಕರಣ ದಾಖಲಾತಿಯಲ್ಲಿ ವಿಳಂಬವಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಹೇಳಿದರು.</p><p>‘ಮುಖ್ಯ ಆರೋಪಿ ಮಂಜುನಾಥ ಮಲ್ಲಸರ್ಜ ಎಂಬಾತ 14 ಮಂದಿಯಿಂದ ₹30 ಲಕ್ಷಕ್ಕೂ ಅಧಿಕ ಹಣ ಪಡೆದಿರುವ ಬಗ್ಗೆ ದೂರು ಇದೆ. ರಾಜ್ಯಪಾಲರ ಸಹಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ಸಹಿ ಹಾಗೂ ಅವರ ಆಪ್ತಸಹಾಯಕರ ಸಹಿಯನ್ನೂ ನಕಲು ಮಾಡಿದ್ದಾನೆ. ಸಚಿವರ ಲೆಟರ್ಹೆಡ್ಗಳನ್ನು ಬಳಸಿದ್ದು ಪತ್ತೆಯಾಗಿದೆ’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p><p>‘ವಂಚನೆಯಾದ ಬಗ್ಗೆ ಕಾವ್ಯಾ ಎಂಬುವರು ಹೇಳಿಕೊಂಡರು. ಆದರೆ, ದೂರು ನೀಡಲಿಲ್ಲ. ನಾಲ್ಕು ತಿಂಗಳ ಬಳಿಕ ಇನ್ನೊಬ್ಬ ಮಹಿಳೆ ಲಿಖಿತ ದೂರು ನೀಡಿದ್ದರಿಂದ ಈಗ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿದ್ದು, ಆತನನ್ನು ಬಂಧಿಸಿಲ್ಲ. ಇದರಲ್ಲಿ ಯಾವುದೇ ರಾಜಕೀಯ ಒತ್ತಡದಿಂದ ಪೊಲೀಸರು ವಿಳಂಬ ಮಾಡಿಲ್ಲ’ ಎಂದರು.</p><p>‘ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಆಪ್ತಸಹಾಯಕ ಸೋಮನಗೌಡ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಕೆಲ ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ. ಇದು ತನಿಖೆ ಹಂತದಲ್ಲಿದೆ. ಸದ್ಯಕ್ಕೆ ಸೋಮನಗೌಡ ಭಾಗಿಯಾದ ಆಧಾರಗಳು ಇಲ್ಲ. ಇದೆಲ್ಲವನ್ನೂ ತನಿಖೆ ಮಾಡುವಂತೆ ಸ್ವತಃ ಸಚಿವರೇ ಸೂಚಿಸಿದ್ದಾರೆ’ ಎಂದು ಹೇಳಿದರು.</p><p>ಇದಕ್ಕೂ ಮುನ್ನ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಾಮಾಜಿಕ ಕಾರ್ಯಕರ್ತ ಜಯಂತ ತಿಣೈಕರ್, ‘ಇದರಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ. ಫೋನ್ ಪೇ, ಬ್ಯಾಂಕ್ ಖಾತೆ ಮೂಲಕ ₹34 ಲಕ್ಷಕ್ಕಿಂತ ಹೆಚ್ಚಿನ ಪಡೆದು ವಂಚಿಸಿದ್ದಾರೆ. ಆದರೆ, ರಾಜಕೀಯ ಒತ್ತಡದಿಂದ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ವಹಿಸುತ್ತಿಲ್ಲ. ಅನ್ಯಾಯಕ್ಕೆ ಒಳಗಾದವರನ್ನು ಪದೇಪದೇ ಪೊಲೀಸ್ ಠಾಣೆಗೆ ಕರೆಯಿಸಿ ತೊಂದರೆ ಕೊಡುತ್ತಿದ್ದಾರೆ’ ಎಂದರು.</p>.ಬೀದರ್ | ಸ್ವಾಮೀಜಿಯ ವ್ಯಾಟ್ಸ್ಯಾಪ್ ಹ್ಯಾಕ್: ಭಕ್ತರಿಗೆ ಸೈಬರ್ ವಂಚನೆ.ಕರ್ನಾಟಕದಲ್ಲಿ ₹39577 ಕೋಟಿ ಜಿಎಸ್ಟಿ ವಂಚನೆ: ಸಚಿವೆ ನಿರ್ಮಲಾ ಸೀತಾರಾಮನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ಹಣ ವಂಚಿಸಿದ ಬಗ್ಗೆ ದೂರು ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರೂ ಪತ್ರ ಬರೆದಿದ್ದರು. ವಂಚನೆ ಒಳಗಾದವರು ದೂರು ದಾಖಲಿಸಲು ಮುಂದೆ ಬಾರದ ಕಾರಣ, ಪ್ರಕರಣ ದಾಖಲಾತಿಯಲ್ಲಿ ವಿಳಂಬವಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಹೇಳಿದರು.</p><p>‘ಮುಖ್ಯ ಆರೋಪಿ ಮಂಜುನಾಥ ಮಲ್ಲಸರ್ಜ ಎಂಬಾತ 14 ಮಂದಿಯಿಂದ ₹30 ಲಕ್ಷಕ್ಕೂ ಅಧಿಕ ಹಣ ಪಡೆದಿರುವ ಬಗ್ಗೆ ದೂರು ಇದೆ. ರಾಜ್ಯಪಾಲರ ಸಹಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ಸಹಿ ಹಾಗೂ ಅವರ ಆಪ್ತಸಹಾಯಕರ ಸಹಿಯನ್ನೂ ನಕಲು ಮಾಡಿದ್ದಾನೆ. ಸಚಿವರ ಲೆಟರ್ಹೆಡ್ಗಳನ್ನು ಬಳಸಿದ್ದು ಪತ್ತೆಯಾಗಿದೆ’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p><p>‘ವಂಚನೆಯಾದ ಬಗ್ಗೆ ಕಾವ್ಯಾ ಎಂಬುವರು ಹೇಳಿಕೊಂಡರು. ಆದರೆ, ದೂರು ನೀಡಲಿಲ್ಲ. ನಾಲ್ಕು ತಿಂಗಳ ಬಳಿಕ ಇನ್ನೊಬ್ಬ ಮಹಿಳೆ ಲಿಖಿತ ದೂರು ನೀಡಿದ್ದರಿಂದ ಈಗ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿದ್ದು, ಆತನನ್ನು ಬಂಧಿಸಿಲ್ಲ. ಇದರಲ್ಲಿ ಯಾವುದೇ ರಾಜಕೀಯ ಒತ್ತಡದಿಂದ ಪೊಲೀಸರು ವಿಳಂಬ ಮಾಡಿಲ್ಲ’ ಎಂದರು.</p><p>‘ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಆಪ್ತಸಹಾಯಕ ಸೋಮನಗೌಡ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಕೆಲ ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ. ಇದು ತನಿಖೆ ಹಂತದಲ್ಲಿದೆ. ಸದ್ಯಕ್ಕೆ ಸೋಮನಗೌಡ ಭಾಗಿಯಾದ ಆಧಾರಗಳು ಇಲ್ಲ. ಇದೆಲ್ಲವನ್ನೂ ತನಿಖೆ ಮಾಡುವಂತೆ ಸ್ವತಃ ಸಚಿವರೇ ಸೂಚಿಸಿದ್ದಾರೆ’ ಎಂದು ಹೇಳಿದರು.</p><p>ಇದಕ್ಕೂ ಮುನ್ನ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಾಮಾಜಿಕ ಕಾರ್ಯಕರ್ತ ಜಯಂತ ತಿಣೈಕರ್, ‘ಇದರಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ. ಫೋನ್ ಪೇ, ಬ್ಯಾಂಕ್ ಖಾತೆ ಮೂಲಕ ₹34 ಲಕ್ಷಕ್ಕಿಂತ ಹೆಚ್ಚಿನ ಪಡೆದು ವಂಚಿಸಿದ್ದಾರೆ. ಆದರೆ, ರಾಜಕೀಯ ಒತ್ತಡದಿಂದ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ವಹಿಸುತ್ತಿಲ್ಲ. ಅನ್ಯಾಯಕ್ಕೆ ಒಳಗಾದವರನ್ನು ಪದೇಪದೇ ಪೊಲೀಸ್ ಠಾಣೆಗೆ ಕರೆಯಿಸಿ ತೊಂದರೆ ಕೊಡುತ್ತಿದ್ದಾರೆ’ ಎಂದರು.</p>.ಬೀದರ್ | ಸ್ವಾಮೀಜಿಯ ವ್ಯಾಟ್ಸ್ಯಾಪ್ ಹ್ಯಾಕ್: ಭಕ್ತರಿಗೆ ಸೈಬರ್ ವಂಚನೆ.ಕರ್ನಾಟಕದಲ್ಲಿ ₹39577 ಕೋಟಿ ಜಿಎಸ್ಟಿ ವಂಚನೆ: ಸಚಿವೆ ನಿರ್ಮಲಾ ಸೀತಾರಾಮನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>