<p><strong>ಬೆಂಗಳೂರು:</strong> ಅನುದಾನಿತ ಖಾಸಗಿ ಪ್ರೌಢಶಾಲೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿಯಾದ3633 ಬೋಧಕ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸರ್ಕಾರ ಆದೇಶ ಹೊರಡಿಸಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟಿದೆ.</p>.<p>ನಿವೃತ್ತಿ, ರಾಜೀನಾಮೆ, ಮರಣದಿಂದ ಖಾಲಿ ಉಳಿದಿರುವ ಹಾಗೂ ಪ್ರಾಧಿಕಾರದ ಅನುಮೋದನೆ ಪಡೆದು ಬಡ್ತಿ ಹೊಂದಿರುವುದು ಮತ್ತು ಇತರೆ ಕಾರಣಗಳಿಂದ ಬೋಧಕ ಹುದ್ದೆಗಳು ಭರ್ತಿಯಾಗದೆ ( ವೃತ್ತಿ, ಚಿತ್ರಕಲಾ, ಸಂಗೀತ ಸೇರಿದಂತೆ ವಿಶೇಷ ಶಿಕ್ಷಕರನ್ನು ಹೊರತುಪಡಿಸಿ) ಬಾಕಿ ಉಳಿದುಕೊಂಡಿವೆ.</p>.<p>ಈ ಕಾರಣದಿಂದ ಅನುದಾನಿತ ಶಾಲೆಗಳಲ್ಲಿ ಐದು ವರ್ಷಗಳಿಂದ ಫಲಿತಾಂಶ ನಿರೀಕ್ಷಿತ ಗುರಿ ಮುಟ್ಟುತ್ತಿಲ್ಲ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಮತ್ತು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ಕೊಟ್ಟು ಆರ್ಥಿಕ ಮಿತವ್ಯಯ ಸಡಿಲಿಸಿ, ಉತ್ತಮ ಫಲಿತಾಂಶಕ್ಕಾಗಿ ಕೆಲವು ಷರತ್ತುಗಳನ್ನು ವಿಧಿಸಿದೆ.</p>.<p>ಅನುದಾನಕ್ಕೊಳಪಟ್ಟಿರುವ ಶಾಲೆಯಲ್ಲಿ ಒಟ್ಟಾರೆ ಫಲಿತಾಂಶದ ಬದಲಿಗೆ ವಿಷಯವಾರು ಮತ್ತುಖಾಲಿ ಹುದ್ದೆಗೆ ಎದುರಾಗಿ ಶಿಕ್ಷಕರಿಗೆ ಸಂಬಂಧಪಟ್ಟ ವಿಷಯದಲ್ಲಿ ಶೇ 60ಕ್ಕಿಂತ ಕಡಿಮೆ ಬಂದರೆ, ಆ ವಿಷಯದ ಶಿಕ್ಷಕರನ್ನು ಗುರುತಿಸಿ ವಾರ್ಷಿಕ ವೇತನ ಬಡ್ತಿಯನ್ನು ತಡೆ ಹಿಡಿಯಲಾಗುತ್ತದೆ.ಇದೇ ರೀತಿ 3 ವರ್ಷಗಳ ಕಾಲ ಮುಂದುವರಿದರೆ ವೇತನಾನುದಾನವನ್ನು ತಡೆಹಿಡಿಯಲಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದೆ.</p>.<p>ಶಾಲೆಗಳಲ್ಲಿ ಐದು ವರ್ಷಗಳ ಕಾಲ ನಿರಂತರವಾಗಿ ಶೇ 50 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗದೇ ಹೋದರೆ, ಅಂತಹ ಶಾಲೆಯ ವೇತನಾನುದಾನಕ್ಕೆ ಕತ್ತರಿ ಬೀಳಲಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡ ಬಳಿಕ ಈ ಎಲ್ಲ ಷರತ್ತುಗಳನ್ನು ಪೂರೈಸಿರುವ ಮತ್ತು ವಿಫಲವಾಗಿರುವ ಬಗ್ಗೆ ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು ವಿವರ ಸಲ್ಲಿಸಬೇಕು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅನುದಾನಿತ ಖಾಸಗಿ ಪ್ರೌಢಶಾಲೆಗಳಲ್ಲಿ ವಿವಿಧ ಕಾರಣಗಳಿಂದ ಖಾಲಿಯಾದ3633 ಬೋಧಕ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸರ್ಕಾರ ಆದೇಶ ಹೊರಡಿಸಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟಿದೆ.</p>.<p>ನಿವೃತ್ತಿ, ರಾಜೀನಾಮೆ, ಮರಣದಿಂದ ಖಾಲಿ ಉಳಿದಿರುವ ಹಾಗೂ ಪ್ರಾಧಿಕಾರದ ಅನುಮೋದನೆ ಪಡೆದು ಬಡ್ತಿ ಹೊಂದಿರುವುದು ಮತ್ತು ಇತರೆ ಕಾರಣಗಳಿಂದ ಬೋಧಕ ಹುದ್ದೆಗಳು ಭರ್ತಿಯಾಗದೆ ( ವೃತ್ತಿ, ಚಿತ್ರಕಲಾ, ಸಂಗೀತ ಸೇರಿದಂತೆ ವಿಶೇಷ ಶಿಕ್ಷಕರನ್ನು ಹೊರತುಪಡಿಸಿ) ಬಾಕಿ ಉಳಿದುಕೊಂಡಿವೆ.</p>.<p>ಈ ಕಾರಣದಿಂದ ಅನುದಾನಿತ ಶಾಲೆಗಳಲ್ಲಿ ಐದು ವರ್ಷಗಳಿಂದ ಫಲಿತಾಂಶ ನಿರೀಕ್ಷಿತ ಗುರಿ ಮುಟ್ಟುತ್ತಿಲ್ಲ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಮತ್ತು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ಕೊಟ್ಟು ಆರ್ಥಿಕ ಮಿತವ್ಯಯ ಸಡಿಲಿಸಿ, ಉತ್ತಮ ಫಲಿತಾಂಶಕ್ಕಾಗಿ ಕೆಲವು ಷರತ್ತುಗಳನ್ನು ವಿಧಿಸಿದೆ.</p>.<p>ಅನುದಾನಕ್ಕೊಳಪಟ್ಟಿರುವ ಶಾಲೆಯಲ್ಲಿ ಒಟ್ಟಾರೆ ಫಲಿತಾಂಶದ ಬದಲಿಗೆ ವಿಷಯವಾರು ಮತ್ತುಖಾಲಿ ಹುದ್ದೆಗೆ ಎದುರಾಗಿ ಶಿಕ್ಷಕರಿಗೆ ಸಂಬಂಧಪಟ್ಟ ವಿಷಯದಲ್ಲಿ ಶೇ 60ಕ್ಕಿಂತ ಕಡಿಮೆ ಬಂದರೆ, ಆ ವಿಷಯದ ಶಿಕ್ಷಕರನ್ನು ಗುರುತಿಸಿ ವಾರ್ಷಿಕ ವೇತನ ಬಡ್ತಿಯನ್ನು ತಡೆ ಹಿಡಿಯಲಾಗುತ್ತದೆ.ಇದೇ ರೀತಿ 3 ವರ್ಷಗಳ ಕಾಲ ಮುಂದುವರಿದರೆ ವೇತನಾನುದಾನವನ್ನು ತಡೆಹಿಡಿಯಲಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದೆ.</p>.<p>ಶಾಲೆಗಳಲ್ಲಿ ಐದು ವರ್ಷಗಳ ಕಾಲ ನಿರಂತರವಾಗಿ ಶೇ 50 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗದೇ ಹೋದರೆ, ಅಂತಹ ಶಾಲೆಯ ವೇತನಾನುದಾನಕ್ಕೆ ಕತ್ತರಿ ಬೀಳಲಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡ ಬಳಿಕ ಈ ಎಲ್ಲ ಷರತ್ತುಗಳನ್ನು ಪೂರೈಸಿರುವ ಮತ್ತು ವಿಫಲವಾಗಿರುವ ಬಗ್ಗೆ ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು ವಿವರ ಸಲ್ಲಿಸಬೇಕು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>