<p><strong>ಬೆಂಗಳೂರು:</strong> ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪದಡಿ ಮೂರು ದಿನಗಳ ಕಾಲ ಪೊಲೀಸ್ ವಶದಲ್ಲಿದ್ದ ಪತ್ರಕರ್ತ ಹೇಮಂತ್ ಕುಮಾರ್ಅವರನ್ನು ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮಂಗಳವಾರ ಮುಕ್ತಾಯಗೊಂಡ ಕಾರಣ ಸಿಐಡಿ ಪೊಲೀಸರು ಹೇಮಂತ್ ಕುಮಾರ್ ಅವರನ್ನು "ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ"ಕ್ಕೆ ಬೆಳಿಗ್ಗೆ ಹಾಜರುಪಡಿಸಿದರು.</p>.<p>ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಆರೋಪಿ ಹೇಮಂತ್ ಕುಮಾರ್ ಅವರಿಗೆ "ನಿಮ್ಮ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಆಕ್ಷೇಪಣೆ ಸಲ್ಲಿಸಬೇಕಿದೆ. ಅಂತೆಯೇ ಜಾಮೀನು ಅರ್ಜಿಯ ವಿಚಾರಣೆಯೂ ನಡೆಯಬೇಕಿದೆ. ಆದ್ದರಿಂದ ಮೇ 9ರವರೆಗೆ ನ್ಯಾಯಾಂಗ ನಿಮ್ಮನ್ನು ಬಂಧನಕ್ಕೆ ನೀಡಲಾಗುತ್ತಿದೆ" ಎಂದು ಆದೇಶಿಸಿದರು.</p>.<p>ಜಾಮೀನು ಅರ್ಜಿಯ ವಿಚಾರಣೆ ಮೇ 2ರಂದು ನಡೆಯಲಿದೆ.</p>.<p><strong>ಪ್ರಕರಣವೇನು?:</strong></p>.<p>ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಎಂ.ಬಿ.ಪಾಟೀಲ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್ಡಿಇ ಸಂಸ್ಥೆಯ ಲೆಟರ್ ಹೆಡ್ನಲ್ಲಿ ಬರೆದಿದ್ದರು ಎನ್ನಲಾದ ನಕಲಿ ಪತ್ರವನ್ನು ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಯೊಂದರಲ್ಲಿ (ಪ್ರಜಾವಾಣಿ ಅಲ್ಲ) ಪ್ರಕಟ ಮಾಡಲಾಗಿತ್ತು.</p>.<p>ಈ ಕುರಿತು ಎಂ.ಬಿ.ಪಾಟೀಲರು ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಇದರ ತನಿಖೆಯನ್ನು ಸಿಐಡಿ ಪೊಲೀಸರು ನಡೆಸುತ್ತಿದ್ದು ಪೊಲೀಸರು "ಪೋಸ್ಟ್ ಕಾರ್ಡ್ ವೆಬ್ಪೋರ್ಟಲ್" ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆಯನ್ನು ವಿಚಾರಣೆಗೆ ಒಳಪಡಿಸಿದ್ದರು.</p>.<p>ವಿಚಾರಣೆ ವೇಳೆ ಹೆಗ್ಡೆ ನೀಡಿದ ಮಾಹಿತಿಯ ಆಧಾರದಲ್ಲಿ ಸಿಐಡಿ ಪೊಲೀಸರು ಎಸ್.ಎ.ಹೇಮಂತ್ ಕುಮಾರ್ ಅವರನ್ನು ಏ.27ರಂದು ವಶಕ್ಕೆ ಪಡೆದಿದ್ದರು.</p>.<p>ಹೇಮಂತ್ ಕುಮಾರ್ ಅವರನ್ನು ನ್ಯಾಯಾಲಯದ ಮುಂದೆ ಶನಿವಾರ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ವಶಕ್ಕೆ ಒಪ್ಪಿಸವಂತೆ ಮನವಿ ಮಾಡಿದ್ದರು.</p>.<p>ಇದನ್ನು ಮಾನ್ಯ ಮಾಡಿದ್ದ ನ್ಯಾಯಾಧೀಶ ಹುದ್ದಾರ ಅವರು ಆರೋಪಿ ಹೇಮಂತ್ ಕುಮಾರ್ ಅವರನ್ನು ಏ.30ರವರೆಗೆ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದ್ದರು.</p>.<p><strong>ತಲೆ ಎತ್ರೀ...!</strong></p>.<p>ಈ ಮೊದಲು ಹಾಜರಾದ ವೇಳೆ ಹೇಮಂತ್ ಕುಮಾರ್ ನ್ಯಾಯಾಧೀಶರು ಕೇಳಿದ ಪ್ರಶ್ನೆಗಳಿಗೆ ಎದೆಯುಬ್ಬಿಸಿ ಗಟ್ಟಿ ದನಿಯಲ್ಲಿ ಉತ್ತರಿಸಿದ್ದರು. ಆ ದಿನ ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸಿ ಆದೇಶಿಸಲಾಗಿತ್ತು.</p>.<p>ಮಂಗಳವಾರ ಬೆಳಗ್ಗೆ 11.45ರ ವೇಳೆಯಲ್ಲಿ ವಿಚಾರಣೆಗೆ ಕೂಗಿದಾಗ ಕೋರ್ಟ್ ಹಾಲ್ ಒಳಗೆ ಬಂದ ಹೇಮಂತ್ ಕುಮಾರ್ ಪೂರ್ಣ ತಲೆ ತಗ್ಗಿಸಿ ನಿಂತಿದ್ದರು. ಇದನ್ನು ಗಮನಿಸಿದ ನ್ಯಾಯಾಧೀಶ ಹುದ್ದಾರ ಅವರು ತಲೆ ಎತ್ರೀ...ಎಂದರು. ಆಗ ಹೇಮಂತ್ ಕುಮಾರ್ ಸ್ವಲ್ಪ ತಲೆ ಎತ್ತಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪದಡಿ ಮೂರು ದಿನಗಳ ಕಾಲ ಪೊಲೀಸ್ ವಶದಲ್ಲಿದ್ದ ಪತ್ರಕರ್ತ ಹೇಮಂತ್ ಕುಮಾರ್ಅವರನ್ನು ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮಂಗಳವಾರ ಮುಕ್ತಾಯಗೊಂಡ ಕಾರಣ ಸಿಐಡಿ ಪೊಲೀಸರು ಹೇಮಂತ್ ಕುಮಾರ್ ಅವರನ್ನು "ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ"ಕ್ಕೆ ಬೆಳಿಗ್ಗೆ ಹಾಜರುಪಡಿಸಿದರು.</p>.<p>ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಆರೋಪಿ ಹೇಮಂತ್ ಕುಮಾರ್ ಅವರಿಗೆ "ನಿಮ್ಮ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಆಕ್ಷೇಪಣೆ ಸಲ್ಲಿಸಬೇಕಿದೆ. ಅಂತೆಯೇ ಜಾಮೀನು ಅರ್ಜಿಯ ವಿಚಾರಣೆಯೂ ನಡೆಯಬೇಕಿದೆ. ಆದ್ದರಿಂದ ಮೇ 9ರವರೆಗೆ ನ್ಯಾಯಾಂಗ ನಿಮ್ಮನ್ನು ಬಂಧನಕ್ಕೆ ನೀಡಲಾಗುತ್ತಿದೆ" ಎಂದು ಆದೇಶಿಸಿದರು.</p>.<p>ಜಾಮೀನು ಅರ್ಜಿಯ ವಿಚಾರಣೆ ಮೇ 2ರಂದು ನಡೆಯಲಿದೆ.</p>.<p><strong>ಪ್ರಕರಣವೇನು?:</strong></p>.<p>ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಎಂ.ಬಿ.ಪಾಟೀಲ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್ಡಿಇ ಸಂಸ್ಥೆಯ ಲೆಟರ್ ಹೆಡ್ನಲ್ಲಿ ಬರೆದಿದ್ದರು ಎನ್ನಲಾದ ನಕಲಿ ಪತ್ರವನ್ನು ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಯೊಂದರಲ್ಲಿ (ಪ್ರಜಾವಾಣಿ ಅಲ್ಲ) ಪ್ರಕಟ ಮಾಡಲಾಗಿತ್ತು.</p>.<p>ಈ ಕುರಿತು ಎಂ.ಬಿ.ಪಾಟೀಲರು ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಇದರ ತನಿಖೆಯನ್ನು ಸಿಐಡಿ ಪೊಲೀಸರು ನಡೆಸುತ್ತಿದ್ದು ಪೊಲೀಸರು "ಪೋಸ್ಟ್ ಕಾರ್ಡ್ ವೆಬ್ಪೋರ್ಟಲ್" ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆಯನ್ನು ವಿಚಾರಣೆಗೆ ಒಳಪಡಿಸಿದ್ದರು.</p>.<p>ವಿಚಾರಣೆ ವೇಳೆ ಹೆಗ್ಡೆ ನೀಡಿದ ಮಾಹಿತಿಯ ಆಧಾರದಲ್ಲಿ ಸಿಐಡಿ ಪೊಲೀಸರು ಎಸ್.ಎ.ಹೇಮಂತ್ ಕುಮಾರ್ ಅವರನ್ನು ಏ.27ರಂದು ವಶಕ್ಕೆ ಪಡೆದಿದ್ದರು.</p>.<p>ಹೇಮಂತ್ ಕುಮಾರ್ ಅವರನ್ನು ನ್ಯಾಯಾಲಯದ ಮುಂದೆ ಶನಿವಾರ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ವಶಕ್ಕೆ ಒಪ್ಪಿಸವಂತೆ ಮನವಿ ಮಾಡಿದ್ದರು.</p>.<p>ಇದನ್ನು ಮಾನ್ಯ ಮಾಡಿದ್ದ ನ್ಯಾಯಾಧೀಶ ಹುದ್ದಾರ ಅವರು ಆರೋಪಿ ಹೇಮಂತ್ ಕುಮಾರ್ ಅವರನ್ನು ಏ.30ರವರೆಗೆ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದ್ದರು.</p>.<p><strong>ತಲೆ ಎತ್ರೀ...!</strong></p>.<p>ಈ ಮೊದಲು ಹಾಜರಾದ ವೇಳೆ ಹೇಮಂತ್ ಕುಮಾರ್ ನ್ಯಾಯಾಧೀಶರು ಕೇಳಿದ ಪ್ರಶ್ನೆಗಳಿಗೆ ಎದೆಯುಬ್ಬಿಸಿ ಗಟ್ಟಿ ದನಿಯಲ್ಲಿ ಉತ್ತರಿಸಿದ್ದರು. ಆ ದಿನ ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸಿ ಆದೇಶಿಸಲಾಗಿತ್ತು.</p>.<p>ಮಂಗಳವಾರ ಬೆಳಗ್ಗೆ 11.45ರ ವೇಳೆಯಲ್ಲಿ ವಿಚಾರಣೆಗೆ ಕೂಗಿದಾಗ ಕೋರ್ಟ್ ಹಾಲ್ ಒಳಗೆ ಬಂದ ಹೇಮಂತ್ ಕುಮಾರ್ ಪೂರ್ಣ ತಲೆ ತಗ್ಗಿಸಿ ನಿಂತಿದ್ದರು. ಇದನ್ನು ಗಮನಿಸಿದ ನ್ಯಾಯಾಧೀಶ ಹುದ್ದಾರ ಅವರು ತಲೆ ಎತ್ರೀ...ಎಂದರು. ಆಗ ಹೇಮಂತ್ ಕುಮಾರ್ ಸ್ವಲ್ಪ ತಲೆ ಎತ್ತಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>