ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತ ಸಚ್ಚಿದಾನಂದಮೂರ್ತಿ ನಿಧನ

‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಸ್ಥಾನೀಯ ಸಂಪಾದಕರಾಗಿದ್ದರು
Published 13 ಅಕ್ಟೋಬರ್ 2023, 9:29 IST
Last Updated 13 ಅಕ್ಟೋಬರ್ 2023, 9:29 IST
ಅಕ್ಷರ ಗಾತ್ರ

ಬೆಂಗಳೂರು: ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್. ಸಚ್ಚಿದಾನಂದಮೂರ್ತಿ (66) ಶುಕ್ರವಾರ ನಿಧನರಾದರು.

ಸಚ್ಚಿದಾನಂದಮೂರ್ತಿ ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು. ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಬಗ್ಗೆ ಅಪಾರವಾದ ಜ್ಞಾನ ಹೊಂದಿದ್ದರು.

ಶೇಷಾದ್ರಿಪುರದ ಆಸ್ಪತ್ರೆಯಿಂದ ಜಯನಗರದಲ್ಲಿ ಇರುವ ಅವರ ಮನೆಗೆ ಪಾರ್ಥೀವ ಶರೀರ ಒಯ್ದ ಬಳಿಕ ಸಂಜೆ ಬನಶಂಕರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಅವರು ಇತ್ತೀಚೆಗೆ ಶ್ವಾಸಕೋಶದ ಕಸಿಗೆ ಒಳಗಾಗಿದ್ದರು. ಆ ನಂತರ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT