<p><strong>ಬೆಂಗಳೂರು: </strong>ರಾಜ್ಯದ ಕೆಲವು ಭಾಗಗಳಲ್ಲಿ ಪಕ್ಷ ದುರ್ಬಲವಾಗಿದ್ದು, ಅಲ್ಲಿ ಒಂದು ವರ್ಷದೊಳಗೆ ಸಂಘಟನೆ ಬಲಗೊಳಿಸುವ ಕಾರ್ಯಸೂಚಿ ಸಿದ್ಧಪಡಿಸಿಕೊಂಡು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಘಟಕಕ್ಕೆ ಗುರಿ ನೀಡಿದ್ದಾರೆ.</p>.<p>ಶನಿವಾರ ನಡೆದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ದೆಹಲಿಯಿಂದ ವಿಡಿಯೊ ಸಂವಾದದ ಮೂಲಕ ಮಾತನಾಡಿದ ಅವರು, ಕೆಲವು ಭಾಗಗಳಲ್ಲಿ ಪಕ್ಷ ಅತ್ಯಂತ ಬಲಿಷ್ಠವಾಗಿದೆ. ಆದರೆ, ಹಳೆ ಮೈಸೂರು ಪ್ರದೇಶ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ದುರ್ಬಲವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>'ಪದಾಧಿಕಾರಿಗಳು ಹಾಗೂ ಸರ್ಕಾರದ ಸಚಿವರು ಈ ಭಾಗದತ್ತಲೇ ತಮ್ಮ ಗಮನ ಕೇಂದ್ರೀಕರಿಸಬೇಕು. ಮತಗಟ್ಟೆ ಸಮಿತಿ, ಶಕ್ತಿಕೇಂದ್ರ, ಮಂಡಲ ಸಮಿತಿ ಸೇರಿದಂತೆ ಎಲ್ಲ ಹಂತಗಳಲ್ಲಿ ಪಕ್ಷದ ಬಲವರ್ಧನೆ ಮಾಡಬೇಕು. ಒಂದು ವರ್ಷದ ಕಾರ್ಯಕ್ರಮವನ್ನು ಇದಕ್ಕಾಗಿ ರೂಪಿಸಿ' ಎಂದು ತಾಕೀತು ಮಾಡಿದರು.</p>.<p>ಮತಗಟ್ಟೆ ಮಟ್ಟದಲ್ಲಿರುವ ವಾಟ್ಸ್ಆ್ಯಪ್ ಗ್ರೂಪ್ಗಳನ್ನು ಹೊಸದಾಗಿ ರಚನೆ ಮಾಡಿ ಮತ್ತೆ ಅದು ಕ್ರಿಯಾಶೀಲವಾಗುವಂತೆ ಮಾಡಬೇಕು. ಪಕ್ಷದ ಐ.ಟಿ. ಸೆಲ್ಗಳನ್ನು ಚುರುಕುಗೊಳಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಕರ್ನಾಟಕದಲ್ಲಿ ಮೊದಲ ಬಾರಿಗೆ ಅನುಭವಸ್ಥ ಹಿರಿಯರು ಹಾಗೂ ಉತ್ಸಾಹಿ ಕಿರಿಯರು ಇರುವ ಪದಾಧಿಕಾರಿಗಳ ತಂಡ ರಚನೆಯಾಗಿದೆ. ಹಿರಿಯರು ಅನುಭವ ಧಾರೆ ಎರೆದು, ಕಿರಿಯರು ಅದನ್ನು ಸ್ವೀಕರಿಸಿ ಪಕ್ಷವನ್ನು ಬಲಿಷ್ಠವಾಗಿ ಬೆಳೆಸುವಲ್ಲಿ ಒಂದಾಗಿ ದುಡಿಯಬೇಕು ಎಂದು ಹೇಳಿದರು.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಾಧ್ಯಕ್ಷರಾದ ನಿರ್ಮಲ್ಕುಮಾರ್ ಸುರಾನ, ಮಾಲೀಕಯ್ಯ ಗುತ್ತೇದಾರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ಕೆಲವು ಭಾಗಗಳಲ್ಲಿ ಪಕ್ಷ ದುರ್ಬಲವಾಗಿದ್ದು, ಅಲ್ಲಿ ಒಂದು ವರ್ಷದೊಳಗೆ ಸಂಘಟನೆ ಬಲಗೊಳಿಸುವ ಕಾರ್ಯಸೂಚಿ ಸಿದ್ಧಪಡಿಸಿಕೊಂಡು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಘಟಕಕ್ಕೆ ಗುರಿ ನೀಡಿದ್ದಾರೆ.</p>.<p>ಶನಿವಾರ ನಡೆದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ದೆಹಲಿಯಿಂದ ವಿಡಿಯೊ ಸಂವಾದದ ಮೂಲಕ ಮಾತನಾಡಿದ ಅವರು, ಕೆಲವು ಭಾಗಗಳಲ್ಲಿ ಪಕ್ಷ ಅತ್ಯಂತ ಬಲಿಷ್ಠವಾಗಿದೆ. ಆದರೆ, ಹಳೆ ಮೈಸೂರು ಪ್ರದೇಶ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ದುರ್ಬಲವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>'ಪದಾಧಿಕಾರಿಗಳು ಹಾಗೂ ಸರ್ಕಾರದ ಸಚಿವರು ಈ ಭಾಗದತ್ತಲೇ ತಮ್ಮ ಗಮನ ಕೇಂದ್ರೀಕರಿಸಬೇಕು. ಮತಗಟ್ಟೆ ಸಮಿತಿ, ಶಕ್ತಿಕೇಂದ್ರ, ಮಂಡಲ ಸಮಿತಿ ಸೇರಿದಂತೆ ಎಲ್ಲ ಹಂತಗಳಲ್ಲಿ ಪಕ್ಷದ ಬಲವರ್ಧನೆ ಮಾಡಬೇಕು. ಒಂದು ವರ್ಷದ ಕಾರ್ಯಕ್ರಮವನ್ನು ಇದಕ್ಕಾಗಿ ರೂಪಿಸಿ' ಎಂದು ತಾಕೀತು ಮಾಡಿದರು.</p>.<p>ಮತಗಟ್ಟೆ ಮಟ್ಟದಲ್ಲಿರುವ ವಾಟ್ಸ್ಆ್ಯಪ್ ಗ್ರೂಪ್ಗಳನ್ನು ಹೊಸದಾಗಿ ರಚನೆ ಮಾಡಿ ಮತ್ತೆ ಅದು ಕ್ರಿಯಾಶೀಲವಾಗುವಂತೆ ಮಾಡಬೇಕು. ಪಕ್ಷದ ಐ.ಟಿ. ಸೆಲ್ಗಳನ್ನು ಚುರುಕುಗೊಳಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಕರ್ನಾಟಕದಲ್ಲಿ ಮೊದಲ ಬಾರಿಗೆ ಅನುಭವಸ್ಥ ಹಿರಿಯರು ಹಾಗೂ ಉತ್ಸಾಹಿ ಕಿರಿಯರು ಇರುವ ಪದಾಧಿಕಾರಿಗಳ ತಂಡ ರಚನೆಯಾಗಿದೆ. ಹಿರಿಯರು ಅನುಭವ ಧಾರೆ ಎರೆದು, ಕಿರಿಯರು ಅದನ್ನು ಸ್ವೀಕರಿಸಿ ಪಕ್ಷವನ್ನು ಬಲಿಷ್ಠವಾಗಿ ಬೆಳೆಸುವಲ್ಲಿ ಒಂದಾಗಿ ದುಡಿಯಬೇಕು ಎಂದು ಹೇಳಿದರು.</p>.<p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಾಧ್ಯಕ್ಷರಾದ ನಿರ್ಮಲ್ಕುಮಾರ್ ಸುರಾನ, ಮಾಲೀಕಯ್ಯ ಗುತ್ತೇದಾರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>