<p><strong>ಬೆಂಗಳೂರು</strong>: ‘ವಿಶ್ವವಿದ್ಯಾಲಯಗಳಲ್ಲಿ ತುಕಡೆ–ತುಕಡೆ (ದೇಶವನ್ನು ಒಡೆಯುವ) ಸಂಸ್ಕೃತಿ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆ’ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್ ಹೇಳಿದರು.</p>.<p>ಸಂವಿಧಾನ ದಿನದ ಅಂಗವಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯವು (ಬಿಸಿಯು) ಗುರುವಾರ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿ, ‘ದೇಶವನ್ನು ಒಡೆಯುವ ಮಾತನಾಡುವವರನ್ನು ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸ್ವಾಗತಿಸುತ್ತಾರೆ. ಮಾಧ್ಯಮಗಳಲ್ಲಿಯೂ ಇಂತಹ ಹೇಳಿಕೆಗಳು ಪ್ರಚಾರ ಪಡೆಯುತ್ತವೆ’ ಎಂದರು.</p>.<p>‘ದೇಶದ ಬಗ್ಗೆ ಈ ರೀತಿಯ ಹೇಳಿಕೆಗಳನ್ನು ನೀಡುವವರಿಗೆ ವಿದ್ಯಾರ್ಥಿಗಳು ಎನ್ನಬೇಕೇ? ಇಂಥವರಿಗೆ ಯಾವ ರೀತಿಯ ಶಿಕ್ಷಣವನ್ನು ನಾವು ನೀಡುತ್ತಿದ್ದೇವೆ’ ಎಂದು ಪ್ರಶ್ನಿಸಿದರು.</p>.<p>‘ವಿಶ್ವವಿದ್ಯಾಲಯಗಳ ಕ್ಯಾಂಪಸ್ನಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದೆ. ಉಗ್ರಗಾಮಿಗಳು ಮತ್ತು ಸಮಾಜವಿದ್ರೋಹಿಗಳು ಮಾತ್ರ ಇಂತಹ ಕಾರ್ಯದಲ್ಲಿ ತೊಡಗಲು ಸಾಧ್ಯ. ಬಹುಸಂಖ್ಯಾತರು ಮೌನವಾಗಿ ಮನೆಯಲ್ಲಿ ಇರುವವರೆಗೆ ಇಂತಹ ಕೃತ್ಯಗಳನ್ನು ಇಂಥವರು ಮುಂದುವರಿಸುತ್ತಲೇ ಇರುತ್ತಾರೆ’ ಎಂದು ಅವರು ಹೇಳಿದರು.</p>.<p>‘ದೇಶದಲ್ಲಿ ವಂಶ ರಾಜಕಾರಣ ಹೆಚ್ಚಾಗುತ್ತಿದೆ. ಅಧಿಕಾರ ಎನ್ನುವುದು ತಮ್ಮ ಪೂರ್ವಜರ ಆಸ್ತಿ ಎಂದು ಹಲವು ರಾಜಕಾರಣಿಗಳು ತಿಳಿದುಕೊಂಡಿದ್ದಾರೆ. ತಮ್ಮ ನಂತರ ಮಕ್ಕಳು, ಮೊಮ್ಮಕ್ಕಳನ್ನು ಅಧಿಕಾರಕ್ಕೆ ತರುತ್ತಿದ್ದಾರೆ’ ಎಂದೂ ಅವರು ಟೀಕಿಸಿದರು.</p>.<p>ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಪ್ರೊ.ಎನ್. ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿಶ್ವವಿದ್ಯಾಲಯಗಳಲ್ಲಿ ತುಕಡೆ–ತುಕಡೆ (ದೇಶವನ್ನು ಒಡೆಯುವ) ಸಂಸ್ಕೃತಿ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆ’ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್ ಹೇಳಿದರು.</p>.<p>ಸಂವಿಧಾನ ದಿನದ ಅಂಗವಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯವು (ಬಿಸಿಯು) ಗುರುವಾರ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿ, ‘ದೇಶವನ್ನು ಒಡೆಯುವ ಮಾತನಾಡುವವರನ್ನು ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸ್ವಾಗತಿಸುತ್ತಾರೆ. ಮಾಧ್ಯಮಗಳಲ್ಲಿಯೂ ಇಂತಹ ಹೇಳಿಕೆಗಳು ಪ್ರಚಾರ ಪಡೆಯುತ್ತವೆ’ ಎಂದರು.</p>.<p>‘ದೇಶದ ಬಗ್ಗೆ ಈ ರೀತಿಯ ಹೇಳಿಕೆಗಳನ್ನು ನೀಡುವವರಿಗೆ ವಿದ್ಯಾರ್ಥಿಗಳು ಎನ್ನಬೇಕೇ? ಇಂಥವರಿಗೆ ಯಾವ ರೀತಿಯ ಶಿಕ್ಷಣವನ್ನು ನಾವು ನೀಡುತ್ತಿದ್ದೇವೆ’ ಎಂದು ಪ್ರಶ್ನಿಸಿದರು.</p>.<p>‘ವಿಶ್ವವಿದ್ಯಾಲಯಗಳ ಕ್ಯಾಂಪಸ್ನಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದೆ. ಉಗ್ರಗಾಮಿಗಳು ಮತ್ತು ಸಮಾಜವಿದ್ರೋಹಿಗಳು ಮಾತ್ರ ಇಂತಹ ಕಾರ್ಯದಲ್ಲಿ ತೊಡಗಲು ಸಾಧ್ಯ. ಬಹುಸಂಖ್ಯಾತರು ಮೌನವಾಗಿ ಮನೆಯಲ್ಲಿ ಇರುವವರೆಗೆ ಇಂತಹ ಕೃತ್ಯಗಳನ್ನು ಇಂಥವರು ಮುಂದುವರಿಸುತ್ತಲೇ ಇರುತ್ತಾರೆ’ ಎಂದು ಅವರು ಹೇಳಿದರು.</p>.<p>‘ದೇಶದಲ್ಲಿ ವಂಶ ರಾಜಕಾರಣ ಹೆಚ್ಚಾಗುತ್ತಿದೆ. ಅಧಿಕಾರ ಎನ್ನುವುದು ತಮ್ಮ ಪೂರ್ವಜರ ಆಸ್ತಿ ಎಂದು ಹಲವು ರಾಜಕಾರಣಿಗಳು ತಿಳಿದುಕೊಂಡಿದ್ದಾರೆ. ತಮ್ಮ ನಂತರ ಮಕ್ಕಳು, ಮೊಮ್ಮಕ್ಕಳನ್ನು ಅಧಿಕಾರಕ್ಕೆ ತರುತ್ತಿದ್ದಾರೆ’ ಎಂದೂ ಅವರು ಟೀಕಿಸಿದರು.</p>.<p>ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಪ್ರೊ.ಎನ್. ನರಸಿಂಹಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>