ಮೇ 9ಕ್ಕೆ ಪರಿಷತ್ತಿನ ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರ ನೇತೃತ್ವದಲ್ಲಿ ಗುರುವಾರ ನಾಮಪತ್ರಗಳ ಪರಿಶೀಲನೆ ನಡೆಸಲಾಗಿತ್ತು.ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ 22 ಮಂದಿಯ ನಾಮಪತ್ರವೂ ಸ್ವೀಕೃತಗೊಂಡಿದ್ದವು. ಅದೇ ರೀತಿ, ಕೇರಳ ಗಡಿನಾಡ ಘಟಕಕ್ಕೆ ಸ್ಪರ್ಧಿಸಿದ್ದ ಇಬ್ಬರ ನಾಮಪತ್ರಗಳು ಕ್ರಮಬದ್ಧವಾಗಿರುವುದಾಗಿ ಚುನಾವಣಾಧಿಕಾರಿ ಘೋಷಿಸಿದ್ದರು. ಆದರೆ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಗಡಿನಾಡು ಘಟಕಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳ ನಾಮಪತ್ರದಲ್ಲಿ ಗೊಂದಲ ಇದ್ದ ಕಾರಣ ಸಮಜಾಯಿಷಿ ಕೇಳಿ, ಪತ್ರ ಕಳುಹಿಸಲಾಗಿತ್ತು.