ವ.ಚ. ಚನ್ನೇಗೌಡ, ಮಹೇಶ್ ಜೋಶಿ ಹಾಗೂ ಸಂಗಮೇಶ ಬಾದವಾಡಗಿ ಈಗಾಗಲೇ ನಾಮಪತ್ರ ಸಲ್ಲಿಸಿ, ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈವರೆಗೆ ನಾಮಪತ್ರ ಸಲ್ಲಿಸಿದವರ ಸಂಖ್ಯೆ 8ಕ್ಕೆ ತಲುಪಿದೆ. ಕೇರಳ ಗಡಿನಾಡ ಘಟಕಕ್ಕೆ ಸುಬ್ರಮಣ್ಯ ವಿ. ಭಟ್, ಆಂಧ್ರ ಪ್ರದೇಶ ಗಡಿನಾಡ ಘಟಕಕ್ಕೆ ಕುಣೆ ಬಾಲರಾಜ್ ಹಾಗೂ ಮಹಾರಾಷ್ಟ್ರ ಗಡಿನಾಡ ಘಟಕಕ್ಕೆ ಎಸ್.ಎಸ್. ಸಾಲೀಮಠ ಅವರು ನಾಮಪತ್ರ ಸಲ್ಲಿಸಿದ್ದಾರೆ.