<p><strong>ಕಡರನಾಯ್ಕನಹಳ್ಳಿ:</strong> ಸಮೀಪದ ನಂದಿಗಾವಿ ಬಳಿ ತುಂಗಭದ್ರಾ ನದಿಯಿಂದ ನೀರನ್ನು ಶುದ್ಧೀಕರಿಸಿ ಗುರುವಾರ 21 ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗಿದೆ.</p>.<p>21 ಗ್ರಾಮಗಳಲ್ಲಿ 15 ದಿನಗಳಿಂದ ನೀರಿಲ್ಲದೆ ಜನ ಮತ್ತು ಜಾನುವಾರುಗಳಿಗೆ ತೊಂದರೆ ಉಂಟಾಗಿತ್ತು. ಈ ಕುರಿತು ಬುಧವಾರ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತಿದ್ದಾರೆ.</p>.<p>ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ ಶಳಕೆ ಅವರು ‘ಬೆಳೆಗಿನ ನಡೆ ಗ್ರಾಮದ ಕಡೆ’ ಕಾರ್ಯಕ್ರಮದಡಿ ಭಾನುವಳ್ಳಿ ಮತ್ತು ನಂದಿಗಾವಿ ಬಳಿಯ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ನೀರು ಶುದ್ಧೀಕರಣ ಘಟಕದ ಸ್ಥಿತಿಯನ್ನು ಪರಿಶೀಲಿಸಿದ ಅವರು, ತಕ್ಷಣವೇ ಸಮಸ್ಯೆ ಬಗೆಹರಿಸಿ ನೀರಿನ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಿರಿಯ ಎಂಜಿನಿಯರ್ ಕೆ.ಎ ಜಾಕೀರ್, ಪಿಡಿಒ ಕಾಳಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-43-1643937161</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ:</strong> ಸಮೀಪದ ನಂದಿಗಾವಿ ಬಳಿ ತುಂಗಭದ್ರಾ ನದಿಯಿಂದ ನೀರನ್ನು ಶುದ್ಧೀಕರಿಸಿ ಗುರುವಾರ 21 ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗಿದೆ.</p>.<p>21 ಗ್ರಾಮಗಳಲ್ಲಿ 15 ದಿನಗಳಿಂದ ನೀರಿಲ್ಲದೆ ಜನ ಮತ್ತು ಜಾನುವಾರುಗಳಿಗೆ ತೊಂದರೆ ಉಂಟಾಗಿತ್ತು. ಈ ಕುರಿತು ಬುಧವಾರ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತಿದ್ದಾರೆ.</p>.<p>ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ ಶಳಕೆ ಅವರು ‘ಬೆಳೆಗಿನ ನಡೆ ಗ್ರಾಮದ ಕಡೆ’ ಕಾರ್ಯಕ್ರಮದಡಿ ಭಾನುವಳ್ಳಿ ಮತ್ತು ನಂದಿಗಾವಿ ಬಳಿಯ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ನೀರು ಶುದ್ಧೀಕರಣ ಘಟಕದ ಸ್ಥಿತಿಯನ್ನು ಪರಿಶೀಲಿಸಿದ ಅವರು, ತಕ್ಷಣವೇ ಸಮಸ್ಯೆ ಬಗೆಹರಿಸಿ ನೀರಿನ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಿರಿಯ ಎಂಜಿನಿಯರ್ ಕೆ.ಎ ಜಾಕೀರ್, ಪಿಡಿಒ ಕಾಳಮ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-43-1643937161</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>